ಬೆಂಗಳೂರು : ರಾಜ್ಯ ಸರ್ಕಾರ, ಶಿಕ್ಷಕರಿಗೆ ಮಧ್ಯಂತರ ರಜೆ ನೀಡಿದ್ದಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬ ರೀತಿಯಲ್ಲಿ ಸರ್ಕಾರ ವರ್ತಿಸುತ್ತಿದೆ. ಕೊರೊನಾದ ಸಂಕಷ್ಟದ ಸಮಯದಲ್ಲಿಯೂ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು, ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಸರ್ಕಾರಿ ಶಾಲೆ ಶಿಕ್ಷಕರು ಕೋವಿಡ್ ಕರ್ತವ್ಯ ಹಾಗೂ ವಿದ್ಯಾಗಮ ಯೋಜನೆಯಡಿ ಇಲ್ಲಿಯವರೆಗೆ ಕೆಲಸ ಮಾಡಿದ್ದಾರೆ. ಆದರೆ, ರಾಜ್ಯ ಸರ್ಕಾರ ಈ ವರ್ಷ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ರದ್ದುಗೊಳಿಸಿ ಶಿಕ್ಷಕರನ್ನು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಅ. 3 ರಿಂದ 26 ರವರೆಗೆ ನೀಡಬೇಕಿದ್ದ ಮಧ್ಯಂತರ ರಜೆಯನ್ನು ಸರ್ಕಾರ ರದ್ದು ಮಾಡಿರುವುದಕ್ಕೆ ಆಧಾರ ಏನು? ಶಿಕ್ಷಕರೆಂದರೆ ಸರ್ವಾಧಿಕಾರದ ಕೆಳಗೆ ದುಡಿಯುವ ದಿನಗೂಲಿ ನೌಕರರೆ? ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿಕ್ಷಕ ಸಮೂಹವನ್ನು ಗೌರವದಿಂದ ನಡೆಸಿಕೊಳ್ಳಬೇಕಾದ ಸರ್ಕಾರ, ಈ ರೀತಿಯ ಆದೇಶಗಳನ್ನು ಜಾರಿ ಮಾಡುವುದು ಸರಿಯಲ್ಲ. ಹರ ಮುನಿದರೂ ಗುರು ಕಾಯ್ವನು ಎಂಬುದನ್ನು ಸರ್ಕಾರ ಮರೆಯಬಾರದು. ಈ ಕೂಡಲೇ ಸರ್ಕಾರ, ಮಧ್ಯಂತರ ರಜಾ ರದ್ದು ಪಡಿಸಬೇಕು ಎಂದು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಹುಲ್ ಗಾಂಧಿ ಬಟಾಟೆಯಲ್ಲಿ ಚಿನ್ನ ತೆಗೆದಂತೆ ಸಿದ್ದರಾಮಯ್ಯ ಹೂವಿನಲ್ಲಿ ಚಿನ್ನ ತೆಗೆಯುತ್ತಿದ್ದಾರೆ : ಕಟೀಲ್

ರಾಹುಲ್ ಗಾಂಧಿ ಬಟಾಟೆಯಲ್ಲಿ ಚಿನ್ನ ತೆಗೆದ ರೀತಿಯಲ್ಲಿ, ಸಿದ್ದರಾಮಯ್ಯ ಹೂವಿನಲ್ಲಿ ಚಿನ್ನ ತೆಗೆಯಲು ಹೊರಟಿದ್ದಾರೆ. ಸಂಕಷ್ಟದ ಈ ಸಂದರ್ಭದಲ್ಲಿ ರಾಜಕೀಯ ಮಾಡುವ ಹೇಯ ಕೃತ್ಯ ಸಿದ್ದರಾಮಯ್ಯ ನಡೆಸಿದ್ದಾರೆ.

ಲಾಕ್ ಡೌನ್ ವಿಸ್ತರಣೆಯ ನಿರ್ಧಾರದ ಕುರಿತು ಸಿಎಂ ಹೇಳಿದ್ದೇನು?

ಬೆಂಗಳೂರು: ಜೂನ್ 7ರ ವರೆಗೆ ಎಂದಿನಂತೆ ಲಾಕ್ಡೌನ್ ಇರುತ್ತದೆ. ಜೂನ್ 7ರ ನಂತರ ಲಾಕ್ಡೌನ್ ಪ್ರಶ್ನೆ ಉದ್ಭವಿಸಲ್ಲ ಎಂದೆನಿಸುತ್ತದೆ. ಆದರೆ ರಾಜ್ಯದ ಸ್ಥಿತಿಗತಿ ನೋಡಿಕೊಂಡು ಜೂನ್ 5 ರಂದು ಲಾಕ್ ಡೌನ್ ವಿಸ್ತರಣೆಯ ಕುರಿತು ನಿರ್ಧರಿಸಲಾಗುತ್ತದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಸಿಂದಗಿ ಶಾಸಕ ಎಂ.ಸಿ. ಮನಗೂಳಿ ವಿಧಿವಶ

ಉಸಿರಾಟದ ತೊಂದರೆ ಹಿನ್ನಲೆಯಲ್ಲಿ ಬನ್ನೇರುಘಟ್ಟ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ ಮಲ್ಲಪ್ಪ ಚೆನ್ನವೀರಪ್ಪ ಮನಗೂಳಿ. (85) ತಡರಾತ್ರಿ ನಿಧನರಾಗಿದ್ದಾರೆ.