ಮುಳಗುಂದ: ಶನಿವಾರ ರಾತ್ರಿ ಪಟ್ಟಣ ಸೇರಿದಂತೆ ಚಿಂಚಲಿ, ಕಲ್ಲೂರ ಹಾಗೂ ನೀಲಗುಂದ ಗ್ರಾಮಗಳ ವ್ಯಾಪ್ತಿಯಲ್ಲಿ ಒಂದು ಗಂಟೆಗೂ ಹೆಚ್ಚುಕಾಲ ಬಿರುಸಿನ ಮಳೆ ಸುರಿದಿದೆ.
ಮಳೆಯಿಂದ ಪಟ್ಟಣದ ಚರಂಡಿಗಳು ತುಂಬಿ ಹರಿದವು. ಕಳೆದ ಒಂದು ವಾರದಿಂದ ಮಳೆ ಬಿಡುವು ಹಿನ್ನಲೆ ರೈತರು ಶೇಂಗಾ ವಕ್ಕಣಿ ಸೇರಿದಂತೆ ಕೃಷಿ ಚಟುವಟಿಕೆಗಳು ಬಿರುಸುಗೊಂಡಿದ್ದವು. ಮತ್ತೇ ಮಳೆಯಾದ ಪರಿಣಾಮ ಹತ್ತಿ, ಮೆಣಸಿನಕಾಯಿ, ಉಳ್ಳಾಗಡ್ಡಿ ಬೆಳೆಗಳು ಜಲಾವೃತವಾಗಿದ್ದು ಕೃಷಿ ಚಟುವಟಿಕೆ ಸ್ಥಗಿತವಾಗಿದೆ.
ಇನ್ನೂ ಮುಂಗಾರಿನ ಹೆಸರು, ಕಂಟಿ ಶೇಂಗಾ ಕೊಯ್ಲಿನ ನಂತರ ಹಿಂಗಾರು ಬಿತ್ತನೆಗೆ ಹೊಲ ಹದಗೊಳಿಸುವ ಕೆಲಸಕ್ಕೆ ಮಳೆ ಅಡ್ಡಿಯಾಗಿದೆ. ಸಧ್ಯ ಗೋವಿನ ಜೋಳ ಕಟಾವಿಗೆ ಬಂದಿದ್ದು ಕಟಾವಿಗೆ ಹಿನ್ನಡೆಯಾಗಿದೆ.