ಮುಳಗುಂದ: ಶನಿವಾರ ರಾತ್ರಿ ಪಟ್ಟಣ ಸೇರಿದಂತೆ ಚಿಂಚಲಿ, ಕಲ್ಲೂರ ಹಾಗೂ ನೀಲಗುಂದ ಗ್ರಾಮಗಳ ವ್ಯಾಪ್ತಿಯಲ್ಲಿ ಒಂದು ಗಂಟೆಗೂ ಹೆಚ್ಚುಕಾಲ ಬಿರುಸಿನ ಮಳೆ ಸುರಿದಿದೆ.

ಮಳೆಯಿಂದ ಪಟ್ಟಣದ ಚರಂಡಿಗಳು ತುಂಬಿ ಹರಿದವು. ಕಳೆದ ಒಂದು ವಾರದಿಂದ ಮಳೆ ಬಿಡುವು ಹಿನ್ನಲೆ ರೈತರು ಶೇಂಗಾ ವಕ್ಕಣಿ ಸೇರಿದಂತೆ ಕೃಷಿ ಚಟುವಟಿಕೆಗಳು ಬಿರುಸುಗೊಂಡಿದ್ದವು. ಮತ್ತೇ ಮಳೆಯಾದ ಪರಿಣಾಮ ಹತ್ತಿ, ಮೆಣಸಿನಕಾಯಿ, ಉಳ್ಳಾಗಡ್ಡಿ ಬೆಳೆಗಳು ಜಲಾವೃತವಾಗಿದ್ದು ಕೃಷಿ ಚಟುವಟಿಕೆ ಸ್ಥಗಿತವಾಗಿದೆ.

ಇನ್ನೂ ಮುಂಗಾರಿನ ಹೆಸರು, ಕಂಟಿ ಶೇಂಗಾ ಕೊಯ್ಲಿನ ನಂತರ ಹಿಂಗಾರು ಬಿತ್ತನೆಗೆ ಹೊಲ ಹದಗೊಳಿಸುವ ಕೆಲಸಕ್ಕೆ ಮಳೆ ಅಡ್ಡಿಯಾಗಿದೆ. ಸಧ್ಯ ಗೋವಿನ ಜೋಳ ಕಟಾವಿಗೆ ಬಂದಿದ್ದು ಕಟಾವಿಗೆ ಹಿನ್ನಡೆಯಾಗಿದೆ.

Leave a Reply

Your email address will not be published. Required fields are marked *

You May Also Like

ಶರಣೇಗೌಡ ಬಯ್ಯಾಪುರ ಗೆಲುವಿಗೆ ಮಸ್ಕಿಯಲ್ಲಿ ಸಂಭ್ರಮ

 ಉತ್ತರಪ್ರಭ ವರದಿ:ವಿಠ್ಠಲ ಕೆಳೊತ ಮಸ್ಕಿ: ರಾಯಚೂರು ಕೊಪ್ಪಳ ವಿಧಾನ ಪರಿಷತ್ ಚುನಾವಣೆಯಲ್ಲಿ ಶರಣೇಗೌಡ ಪಾಟೀಲ್ ಬಯ್ಯಾಪೂರು…

ಹಣ ಪಡೆಯುವ ವೇಳೆ ಜೆಸ್ಕಾಂ ಅಧಿಕಾರಿ ಎಸಿಬಿ ಬಲೆಗೆ

ಜೆಸ್ಕಾಂ ಇಲಾಖೆಯ ಎಇಇ ಅಧಿಕಾರಿ ಭಾಸ್ಕರ್ ರೈತನಿಂದ ಹಣ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾನೆ.

ನೂರಾರು ಯುವಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಉತ್ತರಪ್ರಭ ಸುದ್ದಿಕೋಲಾರ: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಬೇಸತ್ತು ಇಂದು ಜೆಡಿಎಸ್ ಹಾಗೂ…