ಮುಂಬಯಿ : ನಟಿ ಕಂಗನಾ ರಣಾವತ್ ಅವರ ವಿರುದ್ಧ ಡವ್ ರಾಣಿ ರಾಖಿ ಸಾವಂತ್ ಮತ್ತೊಮ್ಮೆ ಮುಗಿ ಬಿದ್ದಿದ್ದಾರೆ. ಈ ಬಾರಿ ಮಹಾರಾಷ್ಟ್ರ ಸರ್ಕಾರ ಹಾಗೂ ಸಿಎಂ ಉದ್ಧವ್ ಠಾಕ್ರೆ ಅವರ ಕ್ಷಮೆ ಕೇಳಬೇಕು ಎಂದು ನಟಿ ರಾಖಿ ಸೂಚಿಸಿದ್ದಾರೆ.

ನಟಿ ಕಂಗನಾ ತನ್ನ ವೈಯಕ್ತಿಕ ಕಾರಣಕ್ಕೆ ಸುಶಾಂತ್ ಸಾವನ್ನು ಬಳಸಿಕೊಂಡಿದ್ದಾರೆ. ಅವರಿಗೆ ನಾಚಿಕೆಯಾಗಬೇಕು. ಅವರು ಹೇಳಿದ್ದೆಲ್ಲ ಸುಳ್ಳು ಎಂಬುವುದು ಈಗ ಸತ್ಯವಾಗಿದೆ. ಹೀಗಾಗಿ ಕೂಡಲೇ ನಟ ಸುಶಾಂತ್ ಅವರ ಅಭಿಮಾನಿಗಳು ಹಾಗೂ ಮಹಾ ಸರ್ಕಾರದ ಕ್ಷಮೆ ಯಾಚಿಸಬೇಕು ಎಂದು ರಾಖಿ ಹೇಳಿದ್ದಾರೆ.
ಅಲ್ಲದೇ, ನಿರ್ಮಾಪಕ ಕರಣ್ ಜೋಹರ್, ಹಿರಿಯ ನಟಿ ಊರ್ಮಿಳಾ ಮಾತೊಂಡ್ಕರ್, ದೀಪಿಕಾ ಪಡುಕೋಣೆ ಸೇರಿದಂತೆ ಎಲ್ಲ ಸೆಲೆಬ್ರಿಟಿಗಳಲ್ಲಿಯೂ ಕ್ಷಮೆ ಯಾಚಿಸಬೇಕು.

ನಿನ್ನ ಬಗ್ಗೆ ನನಗೆ ಅನುಕಂಪ ಇದೆ. ರಾಜಕೀಯ ಲಾಭ ಪಡೆದುಕೊಳ್ಳಲು ನೀನು ಎಲ್ಲ ಪ್ರಯತ್ನಗಳನ್ನು ಮಾಡಿದೆ. ಆದರೆ, ನಿನ್ನ ಎಲ್ಲ ಕಾರ್ಯಗಳು ವಿಫಲವಾಗಿವೆ. ನಿನಗೆ ಇನ್ನು ಮುಂದೆ ಯಾವುದೇ ಸಿನಿಮಾ ಅವಕಾಶಗಳು ಸಿಗುವದಿಲ್ಲ. ನಿನಗೆ ಹೋರಾಟ ಎಂಬುವುದು ಇಷ್ಟ ಇದ್ದರೆ, ಗಡಿಯಲ್ಲಿ ಹೋಗಿ ಸೇವೆ ಸಲ್ಲಿಸು ಎಂದು ರಾಖಿ, ಕಂಗನಾ ವಿರುದ್ಧ ಏಕವಚನದಲ್ಲಿಯೇ ಆಕ್ರೋಶ ಹೊರ ಹಾಕಿದ್ದಾರೆ.

ಈ ಹಿಂದೆಯೂ ಕಂಗನಾ ವಿರುದ್ಧ ಗುಡುಗಿದ್ದ ರಾಖಿ, ಎಲ್ಲ ನಿರ್ಮಾಪಕರು, ನಿರ್ದೇಶಕರು ಕೆಟ್ಟವರಿದ್ದಾರೆ. ನಿನ್ನ ತಲೆಯ ಮೇಲೆ ಕೊಹಿನೂರು ವಜ್ರ ಇದೆಯಾ? ನಿನ್ನ ಹೊರತು ಬಾಲಿವುಡ್‍ ನಲ್ಲಿ ಇರುವವರೆಲ್ಲ ಕೆಟ್ಟವರಾ? ಕಂಗನಾಳನ್ನು ಬಾಲಿವುಡ್ ನಿಂದ ಬಾಯ್ ಕಾಟ್ ಮಾಡಿ ಎಂದು ಹೇಳಿದ್ದರು.

Leave a Reply

Your email address will not be published. Required fields are marked *

You May Also Like

ಖ್ಯಾತ ಚಿತ್ರ ನಟ ಇರ್ಫಾನ್ ಖಾನ ಇನ್ನಿಲ್ಲ

ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಬಾಲಿವುಡ್ ನಟ ಇರ್ಫಾನ್ ಖಾನ್(53) ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದ್ದಾರೆ.

ನಿರ್ದೇಶನದತ್ತ ಕೈ ಹಾಕಿದ ಮಾಣಿಕ್ಯ ನಟಿ ವರಲಕ್ಷ್ಮೀ!

ಬೆಂಗಳೂರು : ಕನ್ನಡದಲ್ಲಿ ಸೂಪರ್ ಹಿಟ್ ಚಿತ್ರಗಳಲ್ಲಿ ಒಂದಾಗಿದ್ದ ಮಾಣಿಕ್ಯ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದ್ದ ವರಲಕ್ಷ್ಮೀ ಈಗ ನಿರ್ದೇಶಕರಾಗಿ ಅವತಾರ ಎತ್ತಿದ್ದಾರೆ.

ಮರ್ಯಾದೆಗೇಡು ಹತ್ಯೆ: ಮರ್ಡರ್ ಸಿನಿಮಾ ಪೋಸ್ಟರ್ ರಿಲೀಜ್ ಮಾಡಿದ RGV

ಮರ್ಯಾದೆಗೇಡು ಹತ್ಯೆ ಕುರಿತ ಸಿನಿಮಾ ಮರ್ಡರ್ ನ ಪೋಸ್ಟರ್ ಬಿಡುಗಡೆ ಮಾಡಿದ ರಾಮ್ ಗೋಪಾಲ್ ವರ್ಮಾ.…

ಮಾದಕ ನಟಿ ಸನ್ನಿ ವಿಚಾರಣೆಗೊಳಪಡಿಸಿದ ಪೊಲೀಸರು!

ತಿರುವನಂತಪುರಂ : ಮಾದಕ ನಟಿ ಸನ್ನಿ ಲಿಯೋನ್ ಅವರನ್ನು ಕೇರಳ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.