ಮುಂಬಯಿ : ನಟಿ ಕಂಗನಾ ರಣಾವತ್ ಅವರ ವಿರುದ್ಧ ಡವ್ ರಾಣಿ ರಾಖಿ ಸಾವಂತ್ ಮತ್ತೊಮ್ಮೆ ಮುಗಿ ಬಿದ್ದಿದ್ದಾರೆ. ಈ ಬಾರಿ ಮಹಾರಾಷ್ಟ್ರ ಸರ್ಕಾರ ಹಾಗೂ ಸಿಎಂ ಉದ್ಧವ್ ಠಾಕ್ರೆ ಅವರ ಕ್ಷಮೆ ಕೇಳಬೇಕು ಎಂದು ನಟಿ ರಾಖಿ ಸೂಚಿಸಿದ್ದಾರೆ.

ನಟಿ ಕಂಗನಾ ತನ್ನ ವೈಯಕ್ತಿಕ ಕಾರಣಕ್ಕೆ ಸುಶಾಂತ್ ಸಾವನ್ನು ಬಳಸಿಕೊಂಡಿದ್ದಾರೆ. ಅವರಿಗೆ ನಾಚಿಕೆಯಾಗಬೇಕು. ಅವರು ಹೇಳಿದ್ದೆಲ್ಲ ಸುಳ್ಳು ಎಂಬುವುದು ಈಗ ಸತ್ಯವಾಗಿದೆ. ಹೀಗಾಗಿ ಕೂಡಲೇ ನಟ ಸುಶಾಂತ್ ಅವರ ಅಭಿಮಾನಿಗಳು ಹಾಗೂ ಮಹಾ ಸರ್ಕಾರದ ಕ್ಷಮೆ ಯಾಚಿಸಬೇಕು ಎಂದು ರಾಖಿ ಹೇಳಿದ್ದಾರೆ.
ಅಲ್ಲದೇ, ನಿರ್ಮಾಪಕ ಕರಣ್ ಜೋಹರ್, ಹಿರಿಯ ನಟಿ ಊರ್ಮಿಳಾ ಮಾತೊಂಡ್ಕರ್, ದೀಪಿಕಾ ಪಡುಕೋಣೆ ಸೇರಿದಂತೆ ಎಲ್ಲ ಸೆಲೆಬ್ರಿಟಿಗಳಲ್ಲಿಯೂ ಕ್ಷಮೆ ಯಾಚಿಸಬೇಕು.

ನಿನ್ನ ಬಗ್ಗೆ ನನಗೆ ಅನುಕಂಪ ಇದೆ. ರಾಜಕೀಯ ಲಾಭ ಪಡೆದುಕೊಳ್ಳಲು ನೀನು ಎಲ್ಲ ಪ್ರಯತ್ನಗಳನ್ನು ಮಾಡಿದೆ. ಆದರೆ, ನಿನ್ನ ಎಲ್ಲ ಕಾರ್ಯಗಳು ವಿಫಲವಾಗಿವೆ. ನಿನಗೆ ಇನ್ನು ಮುಂದೆ ಯಾವುದೇ ಸಿನಿಮಾ ಅವಕಾಶಗಳು ಸಿಗುವದಿಲ್ಲ. ನಿನಗೆ ಹೋರಾಟ ಎಂಬುವುದು ಇಷ್ಟ ಇದ್ದರೆ, ಗಡಿಯಲ್ಲಿ ಹೋಗಿ ಸೇವೆ ಸಲ್ಲಿಸು ಎಂದು ರಾಖಿ, ಕಂಗನಾ ವಿರುದ್ಧ ಏಕವಚನದಲ್ಲಿಯೇ ಆಕ್ರೋಶ ಹೊರ ಹಾಕಿದ್ದಾರೆ.

ಈ ಹಿಂದೆಯೂ ಕಂಗನಾ ವಿರುದ್ಧ ಗುಡುಗಿದ್ದ ರಾಖಿ, ಎಲ್ಲ ನಿರ್ಮಾಪಕರು, ನಿರ್ದೇಶಕರು ಕೆಟ್ಟವರಿದ್ದಾರೆ. ನಿನ್ನ ತಲೆಯ ಮೇಲೆ ಕೊಹಿನೂರು ವಜ್ರ ಇದೆಯಾ? ನಿನ್ನ ಹೊರತು ಬಾಲಿವುಡ್‍ ನಲ್ಲಿ ಇರುವವರೆಲ್ಲ ಕೆಟ್ಟವರಾ? ಕಂಗನಾಳನ್ನು ಬಾಲಿವುಡ್ ನಿಂದ ಬಾಯ್ ಕಾಟ್ ಮಾಡಿ ಎಂದು ಹೇಳಿದ್ದರು.

Leave a Reply

Your email address will not be published. Required fields are marked *

You May Also Like

ಭಜರಂಗಿ-2 ಟೀಸರ್: ಅಭಿಮಾನಿಗಳು ಫುಲ್ ಖುಷ್

ಬೆಂಗಳೂರು : ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ 58ನೇ ಹುಟ್ಟು ಹಬ್ಬದ ಅಂಗವಾಗಿ ಭಜರಂಗಿ 2 ಚಿತ್ರದ ಟೀಸರ್ ಬಿಡುಗಡೆಯಾಗಿತ್ತು. ಸದ್ಯ ಟೀಸರ್ ಬಗ್ಗೆ ಅಭಿಮಾನಿಗಳು ಫುಲ್ ಖುಷಿ ಪಡುತ್ತಿದ್ದಾರೆ.

ಲಾಕ್ ಡೌನ್ ಸಮಯದಲ್ಲಿ ಬಾಲಿವುಡ್ ನಟ ಸಲ್ಲು ಬಾಯ್ ಮಾಡಿದ್ದೆನು ಗೊತ್ತಾ..?

ಬಾಲಿವುಡ್ ನಟ ಸಲ್ಲು ಬಾಯ್ ಅಭಿಮಾನಿಗಳಿಗೆ ಮಾತ್ರ ಲಾಕ್ ಡೌನ್ ನಲ್ಲಿ ಸಲ್ಲುಭಾಯ್ ಏನು ಮಾಡ್ತಿದ್ದಾರೆ ಅಂತ ಕುತೂಹಲ ಇತ್ತು. ಆದ್ರೆ ಅಭಿಮಾನಿಗಳಿಗೆ ತಾವು ಈ ಬಿಡುವಿನಲ್ಲಿ ಏನು ಮಾಡ್ತಿದ್ದಾರೆ ಅಂತ ತೋರಿಸಿದ್ದಾರೆ.

ಜೊತೆ ಜೊತೆಯಲಿ ನಿರ್ದೇಶಕ ಆಸ್ಪತ್ರೆಗೆ ದಾಖಲು

ಜನಪ್ರಿಯ ಟಿವಿ ಧಾರಾವಾಹಿ ಜೊತೆ ಜೊತೆಯಲಿ ನಿರ್ದೇಶಕ ಆರೂರು ಜಗದೀಶ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಅವರನ್ನು ಕಳೆದ ಒಂದು ವಾರದಿಂದ ಜಗದೀಶ್ ಮಣಿಪಾಲದ

ಅಂದು ”ಅದೇ ಕಣ್ಣು”… ಇಂದು ”ಅದೇ ಮುಖ”….!: ಅದೇ ಮುಖದೊಂದಿಗೆ ಪ್ರೇಕ್ಷಕರಿಗೆ ಲಗ್ಗೆ ಇಡಲು ಸಜ್ಜಾಗಿದ್ದಾರೆ ಸಂದೇಶ

‘ಅದೇ ಮುಖ” ಎಂಬ ಸಿನಿಮಾದ ಟೈಟಲ್. ಗಾಂಧಿನಗರದಲ್ಲಿ ಈ ಚಿತ್ರ ಹೇಗಿರಬಹುದು ಎಂಬ ಕುತೂಹಲ ಗರಿಗೆದರುವಂತೆ ಮಾಡಿದೆ.