ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಮತ್ತೊಂದು ದಾಖಲೆ ಬರೆದಿದೆ. ಅಲ್ಲದೇ, ಸಾವಿನ ಸಂಖ್ಯೆಯಲ್ಲಿ ರಾಜ್ಯವು 10 ಸಾವಿರದ ಮೈಲಿಗಲ್ಲು ದಾಟಿದೆ.


ರಾಜ್ಯದಲ್ಲಿ ಇಂದು 7,606 ಹೊಸ ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬಂದಿವೆ. 70 ಜನ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 10,036ಕ್ಕೆ ಏರಿಕೆ ಕಂಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 7,17,915ಕ್ಕೆ ಏರಿಕೆ ಕಂಡಿದೆ. ಅಲ್ಲದೇ ಸಕ್ರಿಯ ಪ್ರಕರಣ ಸಂಖ್ಯೆಯೂ 1,15,776ಕ್ಕೆ ಏರಿದೆ.

ಇಂದು ಆಸ್ಪತ್ರೆಯಿಂದ 12,030 ಜನ ಬಿಡುಗಡೆ ಹೊಂದಿದ್ದಾರೆ. ಇದುವರೆಗೂ ಒಟ್ಟು 5,92,084 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. 928 ಜನ ವಿವಿಧ ಆಸ್ಪತ್ರೆಗಳಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು 23,564 ಜನರನ್ನು ರ್ಯಾ ಪಿಡ್ ಟೆಸ್ಟ್, 55,193 ಆರ್.ಟಿ ಪಿಸಿಆರ್ ಮತ್ತು ಇತರ ಟೆಸ್ಟ್ ಗೆಒಳಪಡಿಸಲಾಗಿದೆ. ಒಟ್ಟಾರೆ 78,757 ಕೊರೊನಾ ಪರೀಕ್ಷೆಗಳನ್ನು ಮಾಡಲಾಗಿದೆ.

ಇಂದು ಬೆಂಗಳೂರಿನಲ್ಲಿ 3,498 ಪಾಸಿಟಿವ್ ಪ್ರಕರಣಗಳು ದೃಢವಾಗಿವೆ. ಇನ್ನುಳಿದಂತೆ ಬೆಳಗಾವಿ 444, ಚಿತ್ರದುರ್ಗ 210, ದಕ್ಷಿಣ ಕನ್ನಡ 303, ಹಾಸನ 278, ಮೈಸೂರು 264, ಉಡುಪಿ 317 ಜನ ಸೋಂಕಿಗೆ ಒಳಗಾಗಿದ್ದಾರೆ.

Leave a Reply

Your email address will not be published. Required fields are marked *

You May Also Like

ಗ್ರಾಪಂ ಚುನಾವಣೆ ಯಾವಾಗ ನಡೆಯಲಿವೆ ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ಗ್ರಾಪಂಗೆ ಡಿಸೆಂಬರ್ ಸಮಯದಲ್ಲಿ ಚುನಾವಣೆ ನಡೆಯಬೇಕಿತ್ತು. ಆದರೆ, ಸದ್ಯ ಈ ಚುನಾವಣೆಯನ್ನು ಮುಂದೂಡುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗುತ್ತಿದೆ.

ಪತ್ರಕರ್ತ ಅಬ್ದುಲ್ ಅಜೀಜ್ ಗೆ ವಿಶೇಷ ಪ್ರಶಸ್ತಿ

ವರದಿ: ವಿಠಲ ಕೆಳೂತ್ ಮಸ್ಕಿ: ಪಟ್ಟಣದ ಹಿರಿಯ ಪತ್ರಕರ್ತ ಅಬ್ದುಲ್ ಅಜೀಜ್ ಅವರು ಕರ್ನಾಟಕ ಕಾರ್ಯನಿರತ…

ಸಾಲಬಾಧೆ ತಾಳಲಾಗದೆ ಅನ್ನದಾತ ಆತ್ಮಹತ್ಯೆ

ವರದಿ: ವಿಠಲ‌ ಕೆಳೂತ್ ಮಸ್ಕಿ: ಸಾಲಭಾದೆ ತಾಳಲಾರದೆ‌ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತುರ್ವಿಹಾಳ…