ನವದೆಹಲಿ : ಗಡಿ ರೇಖೆಯ ಬಳಿ ಪಾಕ್ ನಂತೆ ಚೀನಾ ಕೂಡ ವಿವಾದ ಸೃಷ್ಟಿಸುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆರೋಪಿಸಿದ್ದಾರೆ.

ಅರುಣಾಚಲ ಪ್ರದೇಶ, ಲಡಾಖ್, ಸಿಕ್ಕಿಂ, ಹಿಮಾಚಲ ಪ್ರದೇಶ, ಉತ್ತರಾಖಂಡ್, ಜಮ್ಮು ಕಾಶ್ಮೀರ ಮತ್ತು ಪಂಜಾಬ್ ನಲ್ಲಿ ನಿರ್ಮಿಸಿದ 44 ಸೇತುವೆಗಳನ್ನು ವರ್ಚುವಲ್ ಕಾನ್ಫರೆನ್ಸ್ ಮೂಲಕ ಅಡಿಗಲ್ಲು ಸ್ಥಾಪನೆಗೆ ಚಾಲನೆ ನೀಡಿ ಮಾತನಾಡಿದ ಅವರು, 

ಕೇಂದ್ರ ಸರ್ಕಾರ ಗಡಿಯಲ್ಲಿ ಶತೃಗಳನ್ನು ಮಾತ್ರ ಎದುರಿಸುತ್ತಿಲ್ಲ. ಗಡಿ ಪ್ರದೇಶಗಳ ಅಭಿವೃದ್ಧಿಗೆ ಒತ್ತು ನೀಡುತ್ತಿದೆ. ಗಡಿ ಭಾಗದಲ್ಲಿ ಕಾರ್ಯಾಚರಣೆ ನೆಪದಲ್ಲಿ ಮೊದಲು ಪಾಕ್, ಈಗ ಚೀನಾ ವಿವಾದ ಸೃಷ್ಟಿಸುತ್ತಿವೆ ಎಂದು ವಾಗ್ದಾಳಿ ನಡೆಸಿದರು.

ನಾವು ಉಭಯ ರಾಷ್ಟ್ರಗಳೊಂದಿಗೆ 7 ಸಾವಿರ ಕಿ.ಮೀ ಗಡಿ ರೇಖೆ ಹೊಂದಿದ್ದೇವೆ. ಲಡಾಖ್ ಗಡಿಯಲ್ಲಿ ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ ತನ್ನ ಸೇನಾ ಚಟುವಟಿಕೆಗಳನ್ನು ಹೆಚ್ಚಿಸಿಕೊಳ್ಳುತ್ತಿದೆ. ಭಾರತೀಯ ಸೇನೆ ಕೂಡಾ ಲಡಾಖ್, ಸಿಕ್ಕಿಂ, ಅರುಣಾಚಲ ಪ್ರದೇಶದ ಗಡಿ ಪ್ರದೇಶಗಳಲ್ಲಿ ಸೇನಾ ಚಟುವಟಿಕೆಗಳನ್ನು ಚುರುಕುಗೊಳಿಸುತ್ತಿದೆ. ಸೋಮವಾರ ಉಭಯ ರಾಷ್ಟ್ರಗಳ ಸೇನಾ ಕಮಾಂಡರ್ ಹಂತದ 7ನೇ ಸಭೆಯನ್ನು ನಡೆಸಲಾಗಿತ್ತು ಎಂದು ಹೇಳಿದ್ದಾರೆ. 

Leave a Reply

Your email address will not be published. Required fields are marked *

You May Also Like

ಅಮೇರಿಕಾದಲ್ಲಾದ ಹಾನಿಯನ್ನು ಚೀನಾ ದೇಶವೇ ತುಂಬಿಕೊಲಿ:ಟ್ರಂಪ್ ಆಗ್ರಹ..!

ಚೀನಾದ ನಿಷ್ಕಾಳಜಿಯೇ ಕೊರೋನಾ ಸೋಂಕು ವ್ಯಾಪಕವಾಗಲು ಕಾರಣ ಹೀಗಾಗಿ ನಮಗೆ ಆಗಿರುವ ಹಾನಿಯನ್ನು ತುಂಬಿಕೊಡುವಂತೆ ಚೀನಾ ದೇಶವನ್ನು ಆಗ್ರಹಿಸುತ್ತೇನೆ ಎಂದು ಅಮೇರಿಕಾ ಅಧ್ಯಕ್ಷ ಟ್ರಂಪ್ ಅಸಮಾಧಾನ ಹೊರಹಾಕಿದರು.

ಖ್ಯಾತ ಗಾಲ್ಫ್ ಆಟಗಾರ ಟೈಗರ್ ಸ್ಥಿತಿ ಗಂಭೀರ.!

ಕಾರು ಅಪಘಾತದಲ್ಲಿ ಪ್ರಖ್ಯಾತ ಗಾಲ್ಫ್ ಆಟಗಾರ ಟೈಗರ್ ವುಡ್ಸ್ (೪೫) ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಲಾಸ್ ಏಂಜಲಿಸ್ನ ಕೌಂಟಿ ಶೆರಿಫ್ಸ್ ಇಲಾಖೆ ಮಾಹಿತಿ ನೀಡಿದೆ.

ಚೀನಾ ದೇಶ ಹಿಂದಿಕ್ಕಿದ ಮಹಾರಾಷ್ಟ್ರ..!

ದೇಶದಲ್ಲಿಯೇ ಮಹಾರಾಷ್ಟ್ರ ರಾಜ್ಯ ಕೊರೊನಾಗೆ ನಲುಗಿ ಹೋಗುತ್ತಿದೆ. ಅಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸದ್ಯ ಚೀನಾ ದೇಶವನ್ನೇ ಮೀರಿಸಿ ಮುನ್ನುಗ್ಗುತ್ತಿದೆ.

ಗಡಿಯಲ್ಲಿ ಉದ್ವಿಗ್ನ – ಸನ್ನದ್ಧವಾಗಿ ಗಡಿ ಕಾಯುತ್ತಿರುವ ಮೂರು ಪಡೆಗಳು!

ನವದೆಹಲಿ: ಲಡಾಖ್ ನ ಗಡಿಯಲ್ಲಿ ಚೀನಾ – ಭಾರತದ ಸಂಬಂಧ ಉದ್ವಿಗ್ನ ಪರಿಸ್ಥಿತಿಗೆ ಬಂದು ನಿಂತಿದೆ.…