ನವದೆಹಲಿ : ಗಡಿ ರೇಖೆಯ ಬಳಿ ಪಾಕ್ ನಂತೆ ಚೀನಾ ಕೂಡ ವಿವಾದ ಸೃಷ್ಟಿಸುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆರೋಪಿಸಿದ್ದಾರೆ.

ಅರುಣಾಚಲ ಪ್ರದೇಶ, ಲಡಾಖ್, ಸಿಕ್ಕಿಂ, ಹಿಮಾಚಲ ಪ್ರದೇಶ, ಉತ್ತರಾಖಂಡ್, ಜಮ್ಮು ಕಾಶ್ಮೀರ ಮತ್ತು ಪಂಜಾಬ್ ನಲ್ಲಿ ನಿರ್ಮಿಸಿದ 44 ಸೇತುವೆಗಳನ್ನು ವರ್ಚುವಲ್ ಕಾನ್ಫರೆನ್ಸ್ ಮೂಲಕ ಅಡಿಗಲ್ಲು ಸ್ಥಾಪನೆಗೆ ಚಾಲನೆ ನೀಡಿ ಮಾತನಾಡಿದ ಅವರು, 

ಕೇಂದ್ರ ಸರ್ಕಾರ ಗಡಿಯಲ್ಲಿ ಶತೃಗಳನ್ನು ಮಾತ್ರ ಎದುರಿಸುತ್ತಿಲ್ಲ. ಗಡಿ ಪ್ರದೇಶಗಳ ಅಭಿವೃದ್ಧಿಗೆ ಒತ್ತು ನೀಡುತ್ತಿದೆ. ಗಡಿ ಭಾಗದಲ್ಲಿ ಕಾರ್ಯಾಚರಣೆ ನೆಪದಲ್ಲಿ ಮೊದಲು ಪಾಕ್, ಈಗ ಚೀನಾ ವಿವಾದ ಸೃಷ್ಟಿಸುತ್ತಿವೆ ಎಂದು ವಾಗ್ದಾಳಿ ನಡೆಸಿದರು.

ನಾವು ಉಭಯ ರಾಷ್ಟ್ರಗಳೊಂದಿಗೆ 7 ಸಾವಿರ ಕಿ.ಮೀ ಗಡಿ ರೇಖೆ ಹೊಂದಿದ್ದೇವೆ. ಲಡಾಖ್ ಗಡಿಯಲ್ಲಿ ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ ತನ್ನ ಸೇನಾ ಚಟುವಟಿಕೆಗಳನ್ನು ಹೆಚ್ಚಿಸಿಕೊಳ್ಳುತ್ತಿದೆ. ಭಾರತೀಯ ಸೇನೆ ಕೂಡಾ ಲಡಾಖ್, ಸಿಕ್ಕಿಂ, ಅರುಣಾಚಲ ಪ್ರದೇಶದ ಗಡಿ ಪ್ರದೇಶಗಳಲ್ಲಿ ಸೇನಾ ಚಟುವಟಿಕೆಗಳನ್ನು ಚುರುಕುಗೊಳಿಸುತ್ತಿದೆ. ಸೋಮವಾರ ಉಭಯ ರಾಷ್ಟ್ರಗಳ ಸೇನಾ ಕಮಾಂಡರ್ ಹಂತದ 7ನೇ ಸಭೆಯನ್ನು ನಡೆಸಲಾಗಿತ್ತು ಎಂದು ಹೇಳಿದ್ದಾರೆ. 

Leave a Reply

Your email address will not be published. Required fields are marked *

You May Also Like

ಚೀನಾ – ಭಾರತೀಯ ಸೈನಿಕರ ನಡುವೆ ಸಂಘರ್ಷ – 76 ಸೈನಿಕರಿಗೆ ಗಾಯ!

ಹೊಸದೆಹಲಿ: ಲಡಾಖ್‌ನ ಗಲ್ವಾನ್‌ ಕಣಿವೆ ಭಾರತ ಹಾಗೂ ಚೀನಾ ಸೈನಿಕರ ನಡುವೆ ನಡೆದ ಕಾಳಗದಲ್ಲಿ 76…

ಮಂಗಳನ ಅಂಗಳ ; ಲ್ಯಾಂಡ್ ಆಗುವಮುನ್ನವೇ ಸೆರೆಹಿಡ ಚಿತ್ರ

ಗುರುವಾರ ಮಂಗಳ ಗ್ರಹದ ಮೇಲ್ಮೈಗೆ ಸುರಕ್ಷಿತವಾಗಿ ಇಳಿದ ನಾಸಾದ ಪರ್ಸಿವಿಯರೆನ್ಸ್ ರೋವರ್, ಮಾರ್ಸ್ನ ಹಿಂದೆಂದೂ ನೋಡಿರದ ನೋಟವನ್ನು ಚಿತ್ರಗಳ ರೂಪದಲ್ಲಿ ಕಳಿಸಿದೆ. ಮಂಗಳನ ಮೇಲೆ ಲ್ಯಾಂಡ್ ಆಗುವ ವೇಳೆ ಹೇಗೆ ಕಾಣುತ್ತದೆ ಎಂಬ ಚಿತ್ರವನ್ನೂ ಹಂಚಿಕೊಂಡಿದ್ದು, ತನ್ನ ಲ್ಯಾಂಡಿಂಗ್ ಸೈಟ್ನ ಕೆಲವು ಸುಂದರವಾದ ಪೋಸ್ಟ್ ಕಾರ್ಡ್ಗಳನ್ನು ಸಹ ಕಳಿಸಿದೆ.

ಯುವಕರ ಭವಿಷ್ಯಕ್ಕೆ ಮಾರಕವಾದ ಮೋದಿ ಆಡಳಿತ

ದೇಶದಲ್ಲಿ ಮೋದಿ ಆಡಳಿತದಿಂದ ಗರಿಷ್ಠ ಪ್ರಮಾಣದ ನಿರುದ್ಯೋಗ ಸೃಷ್ಠಿಯಾಗಿದ್ದು, ಮೋದಿ ಆಡಳಿತ ಆರ್ಥಿಕತೆ ಮತ್ತು ಯುವಕರ ಭವಿಷ್ಯಕ್ಕೆ ಮಾರಕವಾಗಿದೆ.

ಭಾರತಕ್ಕೆ ವೆಂಟಿಲೇಟರ್ ದಾನ: ಅಮೇರಿಕಾ ಅಧ್ಯಕ್ಷ ಟ್ರಂಪ್ ಟ್ವೀಟ್

ನವದೆಹಲಿ: ಕೊರೋನಾ ಸೋಂಕು ಇಡೀ ಜಗತ್ತನ್ನು ತಲ್ಲಣಗೊಳಿಸಿದೆ. ಇದಕ್ಕೆ ಹಿರಿಯಣ್ಣ ಅಮೇರಿಕಾ ಕೂಡ ಹೊರತಾಗಿಲ್ಲ. ಕೊರೋನಾ…