ನವದೆಹಲಿ : ಗಡಿ ರೇಖೆಯ ಬಳಿ ಪಾಕ್ ನಂತೆ ಚೀನಾ ಕೂಡ ವಿವಾದ ಸೃಷ್ಟಿಸುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆರೋಪಿಸಿದ್ದಾರೆ.

ಅರುಣಾಚಲ ಪ್ರದೇಶ, ಲಡಾಖ್, ಸಿಕ್ಕಿಂ, ಹಿಮಾಚಲ ಪ್ರದೇಶ, ಉತ್ತರಾಖಂಡ್, ಜಮ್ಮು ಕಾಶ್ಮೀರ ಮತ್ತು ಪಂಜಾಬ್ ನಲ್ಲಿ ನಿರ್ಮಿಸಿದ 44 ಸೇತುವೆಗಳನ್ನು ವರ್ಚುವಲ್ ಕಾನ್ಫರೆನ್ಸ್ ಮೂಲಕ ಅಡಿಗಲ್ಲು ಸ್ಥಾಪನೆಗೆ ಚಾಲನೆ ನೀಡಿ ಮಾತನಾಡಿದ ಅವರು, 

ಕೇಂದ್ರ ಸರ್ಕಾರ ಗಡಿಯಲ್ಲಿ ಶತೃಗಳನ್ನು ಮಾತ್ರ ಎದುರಿಸುತ್ತಿಲ್ಲ. ಗಡಿ ಪ್ರದೇಶಗಳ ಅಭಿವೃದ್ಧಿಗೆ ಒತ್ತು ನೀಡುತ್ತಿದೆ. ಗಡಿ ಭಾಗದಲ್ಲಿ ಕಾರ್ಯಾಚರಣೆ ನೆಪದಲ್ಲಿ ಮೊದಲು ಪಾಕ್, ಈಗ ಚೀನಾ ವಿವಾದ ಸೃಷ್ಟಿಸುತ್ತಿವೆ ಎಂದು ವಾಗ್ದಾಳಿ ನಡೆಸಿದರು.

ನಾವು ಉಭಯ ರಾಷ್ಟ್ರಗಳೊಂದಿಗೆ 7 ಸಾವಿರ ಕಿ.ಮೀ ಗಡಿ ರೇಖೆ ಹೊಂದಿದ್ದೇವೆ. ಲಡಾಖ್ ಗಡಿಯಲ್ಲಿ ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ ತನ್ನ ಸೇನಾ ಚಟುವಟಿಕೆಗಳನ್ನು ಹೆಚ್ಚಿಸಿಕೊಳ್ಳುತ್ತಿದೆ. ಭಾರತೀಯ ಸೇನೆ ಕೂಡಾ ಲಡಾಖ್, ಸಿಕ್ಕಿಂ, ಅರುಣಾಚಲ ಪ್ರದೇಶದ ಗಡಿ ಪ್ರದೇಶಗಳಲ್ಲಿ ಸೇನಾ ಚಟುವಟಿಕೆಗಳನ್ನು ಚುರುಕುಗೊಳಿಸುತ್ತಿದೆ. ಸೋಮವಾರ ಉಭಯ ರಾಷ್ಟ್ರಗಳ ಸೇನಾ ಕಮಾಂಡರ್ ಹಂತದ 7ನೇ ಸಭೆಯನ್ನು ನಡೆಸಲಾಗಿತ್ತು ಎಂದು ಹೇಳಿದ್ದಾರೆ. 

Leave a Reply

Your email address will not be published. Required fields are marked *

You May Also Like

ವಾರದ ಹಿಂದಷ್ಟೆ ಹೊಗಳಿದ ಅಮೇರಿಕಾ ಪ್ರಧಾನಿ ಮೋದಿ ಅಕೌಂಟ್ ಅನ್ ಫಾಲೋ ಮಾಡಿದ್ದೇಕೆ?

ಅಮೆರಿಕದ ವರ್ತನೆ ಯಾವ ಸಂದರ್ಭದಲ್ಲಿ ಹೇಗೆ ಇರುತ್ತದೆ ಎಂಬುವುದೇ ತಿಳಿಯದಂತಾಗಿದೆ. ಮೂರು ವಾರಗಳ ಹಿಂದೆಯಷ್ಟೇ ಭಾರತದ ಪ್ರಧಾನಿಯನ್ನು ಹೊಗಳಿ, ಮೋದಿ ಅವರ ಅಕೌಂಟ್ ಫಾಲೋ ಮಾಡಲು ಪ್ರಾರಂಭಿಸಿದ್ದ ಶ್ವೇತಭವನ ಈಗ ಅನ್ ಫಾಲೋ ಮಾಡಿದೆ ಇದಕ್ಕೆ ಕಾರಣವೇನು ಎನ್ನುವುದು ಮಾತ್ರ ನಿಗೂಢವಾಗಿದೆ.

ಆಸ್ಪ್ರೇಲಿಯಾದಲ್ಲಿ ಇಲಿ ಹಾವಳಿಯಂತೆ: ಪಾಷಾಣಕ್ಕಾಗಿ ಭಾರತಕ್ಕೆ ಆರ್ಡರ್

ಸಿಡ್ನಿ: ಆಸ್ಟೇಲಿಯಾದಲ್ಲಿ ಇಲಿಗಳ ಹಾವಳಿಯಿಂದ 5 ಸಾವಿರ ಕೋಟಿ ರೂಪಾಯಿ ಮೌಲ್ಯದ ಬೆಳೆ ನಾಶವಾಗಿದೆಯಂತೆ! ಆಸ್ಟ್ರೇಲಿಯಾ ಪೂರ್ವದ 3 ರಾಜ್ಯಗಳ ಮೇಲೆ ಲಕ್ಷಾಂತರ ಸಂಖ್ಯೆಯಲ್ಲಿ ಇಲಿಗಳು ದಾಳಿ ಮಾಡುತ್ತಿದ್ದು, ಸಾವಿರಾರು ಕೋಟಿ ಮೌಲ್ಯದ ಕೃಷಿ ಉತ್ಪನ್ನಗಳನ್ನ ಇಲಿಗಳು ತಿಂದುಹಾಕಿವೆ.

ಕೊರೊನಾ ವೈರಾಣು ಸೋರಿಕೆಯ ಬಗ್ಗೆ ಬ್ರಿಟನ್ ಗುಪ್ತಚರ ಏಜನ್ಸಿ ನೀಡಿದ ವರದಿ

ಲಂಡನ್: ಕಳೆದ ಎರಡು ವರ್ಷದಿಂದ ಕೊರೋನಾ ಹಾವಳಿಯಿಂದ ಡೀ ಜಗತ್ತೇ ಸಂಕಷ್ಟಕ್ಕೀಡಾಗಿದೆ. ಚೀನಾದ ವುವಾನ್ ನಿಂದಲೇ ಕೊರೊನಾ ಸೋಂಕು ಆರಂಭವಾಯಿತು ಎನ್ನಲಾಗ್ತಿದೆ.

ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ!: 50 ಕ್ಕೂ ಹೆಚ್ಚು ಜನ ಮೃತ

ಇರಾಕ್: ಕೋವಿಡ್ ಆಸ್ಪತ್ರೆ ಒಂದರಲ್ಲಿ ಅಗ್ನಿ ದುರಂತ ಸಂಭವಿಸಿದ ಘಟನೆ ಇರಾಕ್​ನ ನಾಸಿರಿಯಾ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 50 ಕ್ಕೂ ಹೆಚ್ಚು ಜನ ಸಾವೀಗಿಡಾಗಿದ್ದಾರೆ ಎನ್ನಲಾಗಿದೆ.