ಮಸ್ಕಿ: ಹಳ್ಳದ ಪ್ರವಾಹಕ್ಕೆ ಕೊಚ್ಚಿ ಹೋದ ಚನ್ನಬಸನ ಪತ್ತೆಗೆ ಹಿನ್ನಡೆಯಾಗಿರುವ ತಾಲೂಕ ಆಡಳಿತ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಇಲ್ಲಿನ ಪ್ರಗತಿಪರ ಸಂಘಟನೆ ಮುಖಂಡರು ಪ್ರತಿಭಟನೆ ನಡೆಸಿದರು.

ಪಟ್ಟಣದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಾಲೂಕ ಆಡಳಿತ ವಿರುದ್ಧ ಅಕ್ರೋಶ ಹೊರ ಹಾಕಿದರು.

ಈ ವೇಳೆ ರೈತ ಸಂಘದ ಮುಖಂಡ ವಿಜಯಕುಮಾರ ಬಡಿಗೇರ ಮಾತನಾಡಿ, ಹಳ್ಳದ ಪ್ರವಾಹಕ್ಕೆ ಸಿಲುಕಿದ ಚನ್ನಬಸವನ ರಕ್ಷಣೆ ಮಾಡುವಲ್ಲಿ ತಾಲೂಕು ಆಡಳಿತ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂದು ದೂರಿದರು.

ಹಳ್ಳದ ಪ್ರವಾಹಕ್ಕೆ ಸಿಲುಕಿದ ಚನ್ನಬಸನ ರಕ್ಷಣೆ ವೇಳೆ ಪೂರ್ವತಯಾರಿ ಮಾಡದೇ ಏಕಾಏಕಿ ಹಗ್ಗದ ಮೂಲಕ ಹಳ್ಳಕ್ಕೆ ಇಳಿದಿದ್ದು ಅಪಾಯಕ್ಕೆ ಕಾರಣವಾಗಿದೆ. ಜಲೀಲ್ ಅವರನ್ನು ಕ್ರೇನ್ ಮೂಲಕ ರಕ್ಷಣೆ ಮಾಡಿದ ರೀತಿಯಲ್ಲಿ ಚನ್ನಬಸನ ರಕ್ಷಣೆ ಮಾಡಿದರೆ ಒಂದು ಜೀವ ಉಳಿಯುತಿತ್ತು. ಚನ್ನಬಸವ ದಿನಗೂಲಿ ಮಾಡಿ ಜೀವನ ಸಾಗಿಸುತ್ತಿದ್ದ, ಅವನಿಗೆ ನಂಬಿ ಜೀವನ ಕಟ್ಟಿಕೊಂಡಿದ್ದ ಅವರ ಕುಟುಂಬ ಬೀದಿಗೆ ಬಂದಂತೆ ಆಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ರು.

ಸರಕಾರ ಇತ್ತ ಗಮನ ಹರಿಸಿ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ನಿರ್ಲಕ್ಷ್ಯ ಮಾಡಿದ ತಾಲೂಕ ತಹಶೀಲ್ದಾರ್ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಅಶೋಕ ಮುರಾರಿ, ದುರ್ಗರಾಜ ವಟಗಲ್ಲ, ಅನೀಲಕುಮಾರ, ದೇವರಾಜ ಮಡಿವಾಳ, ಸಿದ್ದು ಮುರಾರಿ ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *

You May Also Like

ರಾಯಚೂರಿನಲ್ಲಿಂದು 9 ಕೊರೊನಾ ಪಾಟಿಟಿವ್..!

ಜಿಲ್ಲೆಯಲ್ಲಿಂದು 9 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 443ಕ್ಕೆ ಏರಿಕೆಯಾಗಿದೆ.

ಗ್ರಾಮೀಣಾಭಿವೃದ್ಧಿ ವಿವಿಯಿಂದ ಸಸಿ ನೆಟ್ಟು, ಸೆಲ್ಫಿ ಹಂಚಿಕೊಳ್ಳುವ ನನ್ನ ಗಿಡ ನನ್ನ ಉಸಿರು ಅಭಿಯಾನ

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಹಾಗೂ ಜಿಲ್ಲಾ ಅರಣ್ಯ ಇಲಾಖೆ ಇವರ ಸಹಯೋಗದೊಂದಿಗೆ ಜೂ.5ರಂದು ವಿಶಿಷ್ಟ ರೀತಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

FG Rs.5,000 ಪರಿಹಾರ ನಿಧಿ ಹೆಸರಲ್ಲಿ ನಕಲಿ ಸಂದೇಶ ವೈರಲ್

ಆನ್ ಲೈನ್ ನಲ್ಲಿ ಹಣ ವಂಚನೆ, ನಕಲಿ ಐಡಿ ಬಳಸಿ ವಂಚನೆ ಇತ್ಯಾದಿ ಸುದ್ದಿಗಳಿಗೇನು ಬರವಿಲ್ಲ. ಆದರೆ, ಕೆಲವರು ಸರ್ಕಾರದ ಪರವಾಗಿ ಜನಾಭಿಪ್ರಾಯ ರೂಪಿಸಲು ಇಂತಹ ಸುಳ್ಳು ಸುದ್ದಿಗಳನ್ನು ಹರಡುತ್ತಾರೆ.

ಕೊರೋನಾ ಕಾವ್ಯ-9

ಇವತ್ತಿನ ಕೊರೋನಾ ಕಾವ್ಯ ಸರಣಿಗೆ ಕಾವ್ಯ ಕಳುಹಿಸಿದವರು ಡಾ.ಸಂಗಯ್ಯ ಶೇ ಶಿರೂರಮಠ ಅವರು. ಪುಣೆಯ ಡಿಫೆನ್ಸ್ ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಭಯದ ಗೂಡಿನಲ್ಲಿ ಒಂದಾದ ಜೀವಗಳ ತಲ್ಲಣವನ್ನು ಕಾವ್ಯದ ಮೂಲಕ ಕಟ್ಟಿಕೊಟ್ಟಿದ್ದಾರೆ.