ಬೆಂಗಳೂರು : ಪ್ರಸಕ್ತ ಸಾಲಿನ ಐಪಿಎಲ್ ಲೀಗ್ ನಲ್ಲಿ ಸೋಮವಾರ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎದುರಿಸಲಿದೆ. ಬ್ಯಾಟ್ಸಮನ್ ಗಳ ನೆಚ್ಚಿನ ಮೈದಾನದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬ ಲೆಕ್ಕಾಚಾರ ಈಗಾಗಲೇ ಶುರುವಾಗಿದೆ.

ಇಲ್ಲಿಯವರೆಗೆ ಆಡಿರುವ ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದು ಬೀಗಿರುವ ಕೋಲ್ಕತ್ತಾ ತಂಡ, ಟೇಬಲ್‌ ನಲ್ಲಿ ಮೂರನೇ ಸ್ಥಾನದಲ್ಲಿದೆ. ನಾಲ್ಕನೇ ಸ್ಥಾನದಲ್ಲಿ ಕೊಹ್ಲಿ ನೇತೃತ್ವದ ಬೆಂಗಳೂರು ತಂಡ ಇದೆ. ಹೀಗಾಗಿ ಎರಡೂ ತಂಡಗಳ ನಡುವಿನ ಈ ಕಾದಾಟ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ಇಲ್ಲಿಯವರೆಗಿನ ಅಂಕಿ – ಅಂಶಗಳ ಲೆಕ್ಕಾಚಾರ ಗಮನಿಸಿದರೆ, ಕೋಲ್ಕತ್ತಾ ತಂಡ ಬೆಂಗಳೂರಿಗಿಂತಲೂ ಬಲಿಷ್ಠವಾಗಿ ಕಾಣಿಸುತ್ತದೆ. ಆಡಿದ್ದ 25 ಪಂದ್ಯಗಳಲ್ಲಿ 15ರಲ್ಲಿ ಕೆಕೆಆರ್ ಗೆದ್ದಿದೆ. 10 ಪಂದ್ಯಗಳಲ್ಲಿ ಬೆಂಗಳೂರು ಗೆದ್ದು ಹಿನ್ನಡೆ ಸಾಧಿಸಿದೆ. ಕೋಲ್ಕತ್ತಾ 15 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಕೆಕೆಆರ್ ವಿರುದ್ಧ ಆರ್ ಸಿಬಿಯ ಸರಾಸರಿ ರನ್ 151ರಷ್ಟಿದೆ. ಇನ್ನೂ ಆರ್ ಸಿಬಿ ವಿರುದ್ಧ ಕೆಕೆಆರ್ ಸರಾಸರಿ ರನ್ 163 ರಷ್ಟಿದೆ.

ಆರ್ ಸಿಬಿ ಪರ ಕೊಹ್ಲಿ 674 ರನ್ ಸಿಡಿಸಿ ಮಿಂಚಿದ್ದಾರೆ. ಕೆಕೆಆರ್‌ ಪರ ಆಂಡ್ರೆ ರಸೆಲ್ 292 ಹೆಚ್ಚಿನ ರನ್ ಗಳಿಸಿದ್ದಾರೆ. ಆರ್‌ಸಿಬಿ ಪರ ಚಹಲ್ 11 ವಿಕೆಟ್ ಗಳನ್ನು ಕಿತ್ತಿದ್ದಾರೆ. ಕೆಕೆಆರ್‌ ಪರ ಸುನಿಲ್ ನರೈನ್ 16 ವಿಕೆಟ್ ಕಿತ್ತಿದ್ದಾರೆ. ಆರ್ ಸಿಬಿ ಪರ ಕೊಹ್ಲಿ 14 ಕ್ಯಾಚ್ ಗಳನ್ನು ಹಿಡಿದಿದ್ದಾರೆ. ಇನ್ನೂ ಕೆಕೆಆರ್ ಪರ ಆಂಡ್ರೆ ರಸ್ಸೆಲ್ 4 ಕ್ಯಾಚ್ ಗಳನ್ನು ಹಿಡಿದಿರುವ ದಾಖಲೆ ಹೊಂದಿದ್ದಾರೆ.

Leave a Reply

Your email address will not be published. Required fields are marked *

You May Also Like

10 ರಂದು ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಉತ್ತರಪ್ರಭ ಸುದ್ದಿಆಲಮಟ್ಟಿ: ಆಲಮಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಎಲ್ಲ ವಯೋಮಾನದ ಗ್ರಾಮೀಣ ಕ್ರೀಡಾಸಕ್ತರಿಗಾಗಿ ದಿ,10 ರಂದು…

ಕನ್ನಡಿಗನಿಗೆ ಒಲಿದು ಬರಲಿದೆಯೇ ಧೋನಿ ಸ್ಥಾನ!

ಮಹೇಂದ್ರಸಿಂಗ್ ಧೋನಿ ಅವರು ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಹೀಗಾಗಿ ಭಾರತೀಯ ತಂಡದ ವಿಕೇಟ್ ಕೀಪಿಂಗ್ ಬಗ್ಗೆ ಚರ್ಚೆಗಳು ಶುರುವಾಗಿದೆ. ಇದಕ್ಕೆ ಹತ್ತಾರು ಹೆಸರುಗಳು ಮುನ್ನೆಲೆಗೆ ಬಂದು ಚರ್ಚೆಗೆ ಕಾರಣವಾಗುತ್ತಿವೆ.

ಮಹೇಶ್ ಬಾಬು ಡೈಲಾಗ್ ಟಿಕ್ ಮಾಡಿದ ವಾರ್ನರ್

ಆಸ್ಟ್ರೇಲಿಯಾ ಕ್ರಿಕೇಟಿಗರೊಬ್ಬರು ಇಂಡಿಯಾದ ಚಿತ್ರನಟರೊಬ್ಬರ ಡೈಲಾಗ್ ನ್ನು ಟಿಕ್ ಟಾಕ್ ಮಾಟಿದ್ದು ಇದೀಗ ವೈರಲ್ ಆಗಿದೆ.

ಕಳ್ಳರ ಕಣ್ಣು ಈಗ ಆಡಿನ ಮ್ಯಾಲೆ…!!! ಸ್ಕಾಪಿ೯ಯೋದಲ್ಲಿ ಬಂದು ಆಡು ಕದ್ದ ಖದೀಮರು ?

ನಿಡಗುಂದಿ: ಕಳ್ಳತನದ ಹಾವಳಿ ಹಾಡುಹಗಲೇ ಶುರುವಾಗಿವೆ. ಜಿಲ್ಲೆಯಲ್ಲಿಗ ಮಕ್ಕಳ ಕಳ್ಳತನದ ಗುಲ್ಲು ಒಂದಡೆ ಆತಂಕ ಸೃಷ್ಟಿಸಿದರೆ…