ಬೆಂಗಳೂರು : ಪ್ರಸಕ್ತ ಸಾಲಿನ ಐಪಿಎಲ್ ಲೀಗ್ ನಲ್ಲಿ ಸೋಮವಾರ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎದುರಿಸಲಿದೆ. ಬ್ಯಾಟ್ಸಮನ್ ಗಳ ನೆಚ್ಚಿನ ಮೈದಾನದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬ ಲೆಕ್ಕಾಚಾರ ಈಗಾಗಲೇ ಶುರುವಾಗಿದೆ.

ಇಲ್ಲಿಯವರೆಗೆ ಆಡಿರುವ ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದು ಬೀಗಿರುವ ಕೋಲ್ಕತ್ತಾ ತಂಡ, ಟೇಬಲ್‌ ನಲ್ಲಿ ಮೂರನೇ ಸ್ಥಾನದಲ್ಲಿದೆ. ನಾಲ್ಕನೇ ಸ್ಥಾನದಲ್ಲಿ ಕೊಹ್ಲಿ ನೇತೃತ್ವದ ಬೆಂಗಳೂರು ತಂಡ ಇದೆ. ಹೀಗಾಗಿ ಎರಡೂ ತಂಡಗಳ ನಡುವಿನ ಈ ಕಾದಾಟ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ಇಲ್ಲಿಯವರೆಗಿನ ಅಂಕಿ – ಅಂಶಗಳ ಲೆಕ್ಕಾಚಾರ ಗಮನಿಸಿದರೆ, ಕೋಲ್ಕತ್ತಾ ತಂಡ ಬೆಂಗಳೂರಿಗಿಂತಲೂ ಬಲಿಷ್ಠವಾಗಿ ಕಾಣಿಸುತ್ತದೆ. ಆಡಿದ್ದ 25 ಪಂದ್ಯಗಳಲ್ಲಿ 15ರಲ್ಲಿ ಕೆಕೆಆರ್ ಗೆದ್ದಿದೆ. 10 ಪಂದ್ಯಗಳಲ್ಲಿ ಬೆಂಗಳೂರು ಗೆದ್ದು ಹಿನ್ನಡೆ ಸಾಧಿಸಿದೆ. ಕೋಲ್ಕತ್ತಾ 15 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಕೆಕೆಆರ್ ವಿರುದ್ಧ ಆರ್ ಸಿಬಿಯ ಸರಾಸರಿ ರನ್ 151ರಷ್ಟಿದೆ. ಇನ್ನೂ ಆರ್ ಸಿಬಿ ವಿರುದ್ಧ ಕೆಕೆಆರ್ ಸರಾಸರಿ ರನ್ 163 ರಷ್ಟಿದೆ.

ಆರ್ ಸಿಬಿ ಪರ ಕೊಹ್ಲಿ 674 ರನ್ ಸಿಡಿಸಿ ಮಿಂಚಿದ್ದಾರೆ. ಕೆಕೆಆರ್‌ ಪರ ಆಂಡ್ರೆ ರಸೆಲ್ 292 ಹೆಚ್ಚಿನ ರನ್ ಗಳಿಸಿದ್ದಾರೆ. ಆರ್‌ಸಿಬಿ ಪರ ಚಹಲ್ 11 ವಿಕೆಟ್ ಗಳನ್ನು ಕಿತ್ತಿದ್ದಾರೆ. ಕೆಕೆಆರ್‌ ಪರ ಸುನಿಲ್ ನರೈನ್ 16 ವಿಕೆಟ್ ಕಿತ್ತಿದ್ದಾರೆ. ಆರ್ ಸಿಬಿ ಪರ ಕೊಹ್ಲಿ 14 ಕ್ಯಾಚ್ ಗಳನ್ನು ಹಿಡಿದಿದ್ದಾರೆ. ಇನ್ನೂ ಕೆಕೆಆರ್ ಪರ ಆಂಡ್ರೆ ರಸ್ಸೆಲ್ 4 ಕ್ಯಾಚ್ ಗಳನ್ನು ಹಿಡಿದಿರುವ ದಾಖಲೆ ಹೊಂದಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯ ಮಟ್ಟದ ಶ್ರೀ ಸಂತ ಸೇವಾಲಾಲ್ ಕ್ರಿಕೆಟ್ ಕಪ್ ಪಂದ್ಯಾವಳಿ: ಹೂವಿನ ಹಡಗಲಿ ಕೆಸುಲ ವಾರಿಯರ್ಸ್ ತಂಡ ಆಯ್ಕೆ

ಹೂವಿನಹಡಗಲಿ: ಬೆಂಗಳೂರಿನಲ್ಲಿ ಶ್ರೀ ಸೇವಾಲಾಲ್ ಜಯಂತಿ ಪ್ರಯುಕ್ತ ದಿನಾಂಕ 04.02.2022 ರಿಂದ 06.02.2022 ರವರೆಗೆ ಟೂರ್ನಿ…

ಪಂಜಾಬ್ ತಂಡ ಮಣಿಸಿ ಐತಿಹಾಸಿಕ ಗೆಲುವು ಸಾಧಿಸಿದ ರಾಜಸ್ಥಾನ್!

ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ಹಾಗೂ ಕಿಂಗ್ಸ್ ಇಲವೆನ್ ಪಂಜಾಬ್ ನಡುವಿನ ಪಂದ್ಯದಲ್ಲಿ ಐತಿಹಾಸಿಕ ಗೆಲುವನ್ನು ರಾಜಸ್ಥಾನ್ ರಾಯಲ್ಸ್ ದಾಖಲಿಸಿದೆ.

ಕೋಲ್ಕತ್ತಾ ತಂಡದ ನಾಯಕತ್ವಕ್ಕೆ ಗುಡ್ ಬೈ ಹೇಳಿದ ದಿನೇಶ್ ಕಾರ್ತಿಕ್!

ಅಬುಧಾಬಿ : ಕೋಲ್ಕತ್ತಾ ತಂಡದ ನಾಯಕತ್ವ ಸ್ಥಾನದಿಂದ ದಿನೇಶ್ ಕಾರ್ತಿಕ್ ಹಿಂದೆ ಸರಿದಿದ್ದಾರೆ.

ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಚೆನ್ನೈ ಪುಟಿದೇಳುವುದೇ?

ದುಬೈ : ಚೆನ್ನೈ ತಂಡಕ್ಕೆ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಪ್ಲೇ ಆಫ್‌ ಗೆ ಪ್ರವೇಶಿಸಲು ಈ ಪಂದ್ಯವೇ ಚೆನ್ನೈಗೆ ನಿರ್ಣಾಯಕ. ಈ ಪಂದ್ಯದಲ್ಲಿ ದೊಡ್ಡ ಅಂತರದಿಂದ ಗೆದ್ದರಷ್ಟೇ ಚೆನ್ನೈನ ಪ್ಲೇ ಆಫ್ ಕನಸು ಜೀವಂತವಾಗಿ ಉಳಿಯಲಿದೆ.