ಲಕ್ನೋ : ಬಾಲಕಿ ಫೋನ್ ನಂಬರ ಕೊಡಲಿಲ್ಲ ಎಂಬ ಕಾರಣಕ್ಕೆ ಅಪ್ರಾಪ್ತೆ ಹಾಗೂ ಪೋಷಕರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.

ಈ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನ ವಿಜಯನಗರ ಪ್ರದೇಶದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿ ಫೋನ್ ನಂಬರ್ ಕೊಡುವಂತೆ ಅಪ್ರಾಪ್ತೆಯನ್ನು ಈ ಸಂದರ್ಭದಲ್ಲಿ ನಂಬರ್ ಕೊಡಲು ನಿರಾಕರಿಸಿದ್ದಾಳೆ. ಇದರಿಂದ ಸಿಟ್ಟಿಗೆದ್ದ ಆರೋಪಿ ತನ್ನ ಗೆಳೆಯರ ಜೊತೆ ಸೇರಿ ಇಂತಹ ಕೃತ್ಯ ಎಸಗಿದ್ದಾನೆ.

ಬಾಲಕಿ ರಾತ್ರಿ ಹೊತ್ತು ಅಂಗಡಿಗೆ ತೆರಳಿದ್ದಳು. ಈ ಸಂದರ್ಭದಲ್ಲಿ ಆರೋಪಿ ಶರದ್ ಎಂಬ ವ್ಯಕ್ತಿ ದಾರಿಯಲ್ಲಿ ಅಡ್ಡ ಬಂದಿದ್ದಾನೆ. ಆಗ ಮತ್ತೆ ಫೋನ್ ನಂಬರ್ ಕೊಡುವಂತೆ ಪೀಡಿಸಿದ್ದಾನೆ. ಆಗಲೂ ಯುವತಿ ಒಪ್ಪಿಗೆ ಸೂಚಿಸಿಲ್ಲ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಈ ಸಂದರ್ಭದಲ್ಲಿ ನಾನು ಕಿರುಚಿದ್ದೇನೆ. ಕೂಡಲೇ ನನ್ನ ಪೋಷಕರು ಹಾಗೂ ಸಂಬಂಧಿಕರು ಬಂದು ನನ್ನನ್ನು ಕಾಪಾಡಿದರು. ಈ ಸಂದರ್ಭದಲ್ಲಿ ಆರೋಪಿ ಶರದ್ ಕೂಡ ಆತನ ಗೆಳೆಯರನ್ನು ಸ್ಥಳಕ್ಕೆ ಕರೆಸಿಕೊಂಡ. ಆಗ ರೋಹಿತ್, ಪಿಂಕು, ರೀಸವ್ ಹಾಗೂ ಮತ್ತೊಬ್ಬ ಗೆಳೆಯ ಸ್ಥಳಕ್ಕೆ ದೌಡಾಯಿಸಿ ನನ್ನ ಮೇಲೆ ಹಲ್ಲೆ ಮಾಡಿದರು. ಇದನ್ನು ವಿರೋಧಿಸಿದ ನನ್ನ ಪಾಲಕರ ಮೇಲೆಯೂ ಅವರ ಹಲ್ಲೆ ಮಾಡಿದ್ದಾರೆ ಎಂದು ಅಪ್ರಾಪ್ತೆ ಆರೋಪಿಸಿದ್ದಾಳೆ.

ನಮ್ಮ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ ಮಾಡಿದ್ದಾರೆ. ಇದರಿಂದ ನನಗೆ ಹಾಗೂ ತಂದೆಗೆ ಗಾಯಘಳಾಗಿವೆ ಎಂದು ಕೂಡ ಅಪ್ರಾಪ್ತೆ ಆರೋಪಿಸಿದ್ದಾಳೆ.

Leave a Reply

Your email address will not be published. Required fields are marked *

You May Also Like

ನಿರ್ಮಾಣ ಹಂತದ ಸೇತುವೆ ಕುಸಿತ: ಮೂವರು ಭಾರತೀಯ ಸಾವು

ಉತ್ತರಾಖಂಡ ಹಿಮ ಸ್ಫೋಟದಲ್ಲಿ ತಪೋವನ ಜಲವಿದ್ಯುತ್ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ೩೦ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿದ್ದು ಇದರ ಬೆನ್ನಲ್ಲೇ ಭೂತಾನ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತದಲ್ಲಿ ಮೂವರು ಭಾರತೀಯ ಕಾರ್ಮಿಕರು ದುರ್ಮರಣ ಹೊಂದಿದ್ದು ಇನ್ನು ಆರು ಮಂದಿ ನಾಪತ್ತೆಯಾಗಿದ್ದಾರೆ.

ಜಗತ್ತಿನಾದ್ಯಂತ ಮುಂದುವರೆದ ಮರಣ ಮೃದಂಗ!

ಕೊರೊನಾ ಹಾವಳಿ ದಿನದಿಂದ ದಿನಕ್ಕೆಹೆಚ್ಚಾಗುತ್ತಿದ್ದು, ಇಲ್ಲಿಯವರೆಗೂ ಜಗತ್ತಿನಲ್ಲಿ 2.48 ಲಕ್ಷ ಜನರು ಸಾವನ್ನಪ್ಪಿದ್ದಾರೆ.

ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಏರಿಕೆ?

ನವದೆಹಲಿ: 2021 ರ ಆರಂಭದಲ್ಲೇ ಕೇಂದ್ರ ಸರ್ಕಾರಿ ನೌಕರರಿಗೆ ಜನವರಿ 2021 ರಿಂದ ಅನ್ವಯವಾಗುವಂತೆ, ತುಟ್ಟಿ…

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಗಸ್ಟ್ 10 ರಂದು ಅದ್ದೂರಿ ಬಾಬಾ ಲಖಿ ಶಾ ಬಂಜಾರ ಜಯಂತಿ

ಉತ್ತರಪ್ರಭ ದೆಹಲಿ: ಆಗಸ್ಟ್ 10 ರಂದು ದೆಹಲಿಯಲ್ಲಿ ಅದ್ದೂರಿ ಬಾಬಾ ಲಖಿ ಶಾ ಜಯಂತಿ ಆಚರಣೆ.…