ಮುಳಗುಂದ: ಸ್ಥಳೀಯ ಬಸ್ ನಿಲ್ಧಾಣದ ನಿಲುಗಡೆ ಸ್ಥಳದಲ್ಲೇ ನಿತ್ಯ ಬೈಕ್ ಗಳ ಪಾರ್ಕಿಂಗ್ ಮಾಡುತ್ತಿದ್ದು ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ.

ಹೊಸ ಬಸ್ ನಿಲ್ಧಾಣ ಆರಂಭವಾದಾಗಿನಿಂದ ಬೈಕ ನಿಲ್ಲಿಸಲು ಪ್ರತ್ಯೇಕ ಜಾಗದ ವ್ಯವಸ್ಥೆ ಇಲ್ಲದಿರುವದು ಈ ಸಮಸ್ಯೆ ಉಂಟಾಗಿದೆ. ನಿಲ್ಧಾನದಲ್ಲಿ ಯಾವ ಸೂಚನಾ ಫಲಕವನ್ನು ಅಳಡಿಕೆಗೆ ಸಂಬಂಧಿಸಿದ ಸಾರಿಗೆ ಸಂಸ್ಥೆ ಸೂಕ್ತ ವ್ಯವಸ್ಥೆ ಮಾಡುತ್ತಿಲ್ಲ.

ನಿಲ್ಧಾಣ ವಿಶಾಲವಾಗಿದ್ದರೂ ಸಹ ಕ್ಯಾಂಟಿನ್ ಗೆ ಬರುವ ಗ್ರಾಹಕರು ಬಸ್ ನಿಲ್ಲುವ ಜಾಗದಲ್ಲೇ ಬೈಕ್‌ಗಳನ್ನ ನಿಲ್ಲಿಸುತ್ತಿದ್ದಾರೆ. ಇದರಿಂದ ಗದಗ ಹಾಗೂ ಲಕ್ಷ್ಮೇಶ್ವರ ಕಡೆಯಿಂದ ಬರುವ ಬಸ್‌ಗಳು ಚಾಲಕರು ನಿಗದಿತ ಜಾಗ ಬಿಟ್ಟು ದೂರವೆ ನಿಲ್ಲಿಸುತ್ತಾರೆ, ಬಸ್ ಹತ್ತುವ ಪ್ರಯಾಣಿಕರು ತಾವು ಕುಳಿತ ಜಾಗದಿಂದ ಎದ್ದು ಬಿದ್ದು ಓಡಬೇಕಾಗಿದೆ.

ಲಾಕ್‌ಡೌನ್ ಪೂರ್ವದಲ್ಲಿ ನಿಲ್ಧಾಣದ ಒಂದು ಭಾಗದಲ್ಲಿ ಬೈಕ್ ನಿಲ್ಲಿಸಲು ವ್ಯವಸ್ಥೆ ಮಾಡಿ, ನಿತ್ಯ ಪೋಲಿಸ್ ಸಿಬ್ಬಂದಿ ನೇಮಿಸಲಾಗುತಿತ್ತು. ಆದರೆ ಅನ್‌ಲಾಕ್ ಆದಾಗಿನಿಂದ ಇಲ್ಲಿ ಅದಾವುದು ವ್ಯವಸ್ಥೆ ನಡೆಯುತ್ತಿಲ್ಲ, ಪೋಲಿಸ್ ಸಿಬ್ಬಂದಿಯು ಇಲ್ಲದಾಗಿದೆ.

ಪ್ರಯಾಣಿಕರಲ್ಲದವರು ಸಹ ಕುಳಿತು ಎಲ್ಲಂದರಲ್ಲಿ ಉಗುಳುವದು, ಧೂಮಪಾನ ಮಾಡುವುದರಿಂದ ಮಹಿಳೆಯರಿಗೆ ಕಿರಿ ಕಿರ ಉಂಟು ಮಾಡುತ್ತಿದೆ. ಇಲ್ಲಿಂದ ಗದಗ, ಲಕ್ಷ್ಮೇಶ್ವರ, ಶಿರಹಟ್ಟಿ, ಅಣ್ಣಿಗೇರಿ, ಹುಬ್ಬಳ್ಳಿ ನಗರಗಳಿಗೆ ನಿತ್ಯ ನೂರಾರು ಬಸ್‌ಗಳ ಸೌಲಭ್ಯವಿದ್ದು ಸಾವಿರಾರು ಪ್ರಯಾಣಿಕರು ಬಸ್ ಸಂಚಾರ ಮಾಡುತ್ತಾರೆ.

ಬಸ್‌ ನಿಲ್ಧಾಣ ಸೇರಿದಂತೆ ರಸ್ತೆಯಲ್ಲಿ ವಿನಾಕಾರಣ ಬೈಕ್ ನಿಲ್ಲಿಸಿ ಸಂಚಾರಕ್ಕೆ ತೊಂದರೆ ಮಾಡುವವರ ಬಗ್ಗೆ ಗಮನಿಸಿ ಸೂಕ್ತ ಕ್ರಮಕೈಗೊಳ್ಳಲಾಗುವದು ಮತ್ತು ಸಿಬ್ಬಂದಿ ನಿಯೋಜಿಸಲಾಗುವದು ಎಂದು ನೂತನ ಪಿಎಸ್‌ಐ ಸಚಿನ್ ಅಲಮೇಲಕರ ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಹಾಲಕೆರೆ ಅಭಿನವ ಅನ್ನದಾನ ಶ್ರೀ ಗಳು ಲಿಂಗೈಕ್ಯ

ಲಿಂಗೈಕ್ಯ ಶ್ರೀ ಗಳ ಅಗಲಿಕೆ ರೋಣ ಕ್ಷೇತ್ರದ ಶಾಸಕ ಕಳಕಪ್ಪ ಜಿ,ಬಂಡಿ ಹಾಗೂ ಮಾಜಿ ಶಾಸಕ ಜಿ,ಎಸ್,ಪಾಟೀಲ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದರು.

ಆಲಮಟ್ಟಿ ಜಲಾಶಯ ಭದ್ರತಾ ಪಡೆ ಇನ್ಸ್‌ಪೆಕ್ಟರ್ ಮರನೂರ ಸೇವೆಯಿಂದ ಅಮಾನತ್ತು

ಆಲಮಟ್ಟಿ : ಆಲಮಟ್ಟಿ ಜಲಾಶಯ ಭದ್ರತಾ ಕರ್ತವ್ಯಕ್ಕೆ ನಿಯೋಜನೆವಾಗಿದ್ದ ಕೆ.ಎಸ್.ಐ.ಎಸ್.ಎಫ್. 3 ನೇ ಪಡೆ ಪೋಲಿಸ್…

ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಶಾಸಕ ಎಚ್ಕೆ ಪಾಟೀಲ್ ವಿರೋಧ

ಭೂಸುಧಾರಣೆ ವಿಚಾರವಾಗಿ ಸರಕಾರ ರೈತ‌ ವಿರೋಧಿ ನಿರ್ಣಯ ಕೈಗೊಂಡಿದೆ. ಶ್ರೀಮಂತರು ಹಾಗೂ ಕಂಪನಿಯವರಿಗೆ ಭೂಮಿ ಪಡೆಯಲು ಆದ್ಯತೆ‌ ನೀಡಿದೆ ಎಂದು ಶಾಸಕ ಎಚ್.ಕೆ.ಪಾಟೀಲ ವಿರೋಧ ವ್ಯಕ್ತಪಡಿಸಿದರು.