ಮುಳಗುಂದ: ಸ್ಥಳೀಯ ಬಸ್ ನಿಲ್ಧಾಣದ ನಿಲುಗಡೆ ಸ್ಥಳದಲ್ಲೇ ನಿತ್ಯ ಬೈಕ್ ಗಳ ಪಾರ್ಕಿಂಗ್ ಮಾಡುತ್ತಿದ್ದು ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ.

ಹೊಸ ಬಸ್ ನಿಲ್ಧಾಣ ಆರಂಭವಾದಾಗಿನಿಂದ ಬೈಕ ನಿಲ್ಲಿಸಲು ಪ್ರತ್ಯೇಕ ಜಾಗದ ವ್ಯವಸ್ಥೆ ಇಲ್ಲದಿರುವದು ಈ ಸಮಸ್ಯೆ ಉಂಟಾಗಿದೆ. ನಿಲ್ಧಾನದಲ್ಲಿ ಯಾವ ಸೂಚನಾ ಫಲಕವನ್ನು ಅಳಡಿಕೆಗೆ ಸಂಬಂಧಿಸಿದ ಸಾರಿಗೆ ಸಂಸ್ಥೆ ಸೂಕ್ತ ವ್ಯವಸ್ಥೆ ಮಾಡುತ್ತಿಲ್ಲ.

ನಿಲ್ಧಾಣ ವಿಶಾಲವಾಗಿದ್ದರೂ ಸಹ ಕ್ಯಾಂಟಿನ್ ಗೆ ಬರುವ ಗ್ರಾಹಕರು ಬಸ್ ನಿಲ್ಲುವ ಜಾಗದಲ್ಲೇ ಬೈಕ್‌ಗಳನ್ನ ನಿಲ್ಲಿಸುತ್ತಿದ್ದಾರೆ. ಇದರಿಂದ ಗದಗ ಹಾಗೂ ಲಕ್ಷ್ಮೇಶ್ವರ ಕಡೆಯಿಂದ ಬರುವ ಬಸ್‌ಗಳು ಚಾಲಕರು ನಿಗದಿತ ಜಾಗ ಬಿಟ್ಟು ದೂರವೆ ನಿಲ್ಲಿಸುತ್ತಾರೆ, ಬಸ್ ಹತ್ತುವ ಪ್ರಯಾಣಿಕರು ತಾವು ಕುಳಿತ ಜಾಗದಿಂದ ಎದ್ದು ಬಿದ್ದು ಓಡಬೇಕಾಗಿದೆ.

ಲಾಕ್‌ಡೌನ್ ಪೂರ್ವದಲ್ಲಿ ನಿಲ್ಧಾಣದ ಒಂದು ಭಾಗದಲ್ಲಿ ಬೈಕ್ ನಿಲ್ಲಿಸಲು ವ್ಯವಸ್ಥೆ ಮಾಡಿ, ನಿತ್ಯ ಪೋಲಿಸ್ ಸಿಬ್ಬಂದಿ ನೇಮಿಸಲಾಗುತಿತ್ತು. ಆದರೆ ಅನ್‌ಲಾಕ್ ಆದಾಗಿನಿಂದ ಇಲ್ಲಿ ಅದಾವುದು ವ್ಯವಸ್ಥೆ ನಡೆಯುತ್ತಿಲ್ಲ, ಪೋಲಿಸ್ ಸಿಬ್ಬಂದಿಯು ಇಲ್ಲದಾಗಿದೆ.

ಪ್ರಯಾಣಿಕರಲ್ಲದವರು ಸಹ ಕುಳಿತು ಎಲ್ಲಂದರಲ್ಲಿ ಉಗುಳುವದು, ಧೂಮಪಾನ ಮಾಡುವುದರಿಂದ ಮಹಿಳೆಯರಿಗೆ ಕಿರಿ ಕಿರ ಉಂಟು ಮಾಡುತ್ತಿದೆ. ಇಲ್ಲಿಂದ ಗದಗ, ಲಕ್ಷ್ಮೇಶ್ವರ, ಶಿರಹಟ್ಟಿ, ಅಣ್ಣಿಗೇರಿ, ಹುಬ್ಬಳ್ಳಿ ನಗರಗಳಿಗೆ ನಿತ್ಯ ನೂರಾರು ಬಸ್‌ಗಳ ಸೌಲಭ್ಯವಿದ್ದು ಸಾವಿರಾರು ಪ್ರಯಾಣಿಕರು ಬಸ್ ಸಂಚಾರ ಮಾಡುತ್ತಾರೆ.

ಬಸ್‌ ನಿಲ್ಧಾಣ ಸೇರಿದಂತೆ ರಸ್ತೆಯಲ್ಲಿ ವಿನಾಕಾರಣ ಬೈಕ್ ನಿಲ್ಲಿಸಿ ಸಂಚಾರಕ್ಕೆ ತೊಂದರೆ ಮಾಡುವವರ ಬಗ್ಗೆ ಗಮನಿಸಿ ಸೂಕ್ತ ಕ್ರಮಕೈಗೊಳ್ಳಲಾಗುವದು ಮತ್ತು ಸಿಬ್ಬಂದಿ ನಿಯೋಜಿಸಲಾಗುವದು ಎಂದು ನೂತನ ಪಿಎಸ್‌ಐ ಸಚಿನ್ ಅಲಮೇಲಕರ ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಗ್ರಾಮ ಪಂಚಾಯತಿ ಚುನಾವಣೆ: ಅಭಿಪ್ರಾಯ ಸಲ್ಲಿಕೆಗೆ ಚುನಾವಣಾ ಆಯೋಗ ನಿರ್ದೇಶನ

ಪಂಚಾಯತಿ ಅವಧಿ ಮುಕ್ತಾಯಗೊಳ್ಳುವ ಮುಂಚಿತವಾಗಿ ಹೊಸದಾಗಿ ಪಂಚಾಯತಿಗಳನ್ನು ರಚಿಸಲು ಚುನಾವಣೆ ನಡೆಸಬೇಕಾಗಿರುತ್ತದೆ. ಕರ್ನಾಟಕ ಗ್ರಾಮ್ ಸ್ವರಾಜ್ ಅಧಿನಿಯಮದ ಪ್ರಕಾರ ರಾಜ್ಯ ಚುನಾವಣಾ ಆಯೋಗವು ಪಂಚಾಯತಿಯ ಅವಧಿಯು ಪೂರ್ಣಗೊಳ್ಳುವುದಕ್ಕೆ ಮೊದಲು ಚುನಾವಣಾ ಪ್ರಕ್ರಿಯೇಯನ್ನು ಪೂರ್ಣಗೊಳಿಸಬೇಕಾಗಿರುತ್ತದೆ.

ಸ್ಕೈಪ್ ಮೂಲಕ ಅಂತಿಮ ಕ್ರಿಯೇ: ಮನ ಮಿಡಿಯುವ ಘಟನೆ ವಿವರಿಸಿದ ಶಿಕ್ಷಣ ಸಚಿವ

ಪ್ರಾಥಮಿಕ ಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಕೊರೊನಾ ತಂದ ಸಂಕಷ್ಟದ ಎರಡು ಮನಮಿಸಿಯುವ ಘಟನೆಗಳನ್ನು ಹೇಳಿದ್ದಾರೆ.

ಗದಗ ಜಿಲ್ಲೆಯ ಜನರಿಗೆ ಕೊಂಚ ನೆಮ್ಮದಿ

ಜಿಲ್ಲೆಯ 3 ಜನ ಕೊವಿಡ್-19 ಸೋಂಕಿತರು 42 ವರ್ಷದ ಪುರುಷ ಪಿ-370, 24 ವರ್ಷದ ಪುರುಷ ಪಿ-396 ಹಾಗೂ 75 ವರ್ಷದ ಪಿ-514 ಸಂಪೂರ್ಣ ಗುಣಮುಖರಾಗಿ ನಿಗದಿತ ಆಯುಷ್ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ ಎಂದು ಜಿಮ್ಸ್ ನಿರ್ದೇಶಕ ಡಾ.ಪಿ.ಎಸ್.ಭೂಸರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗದಗ ಹೆರಿಗೆ ಆಸ್ಪತ್ರೆಗೆ ಕೊರೊನಾ ಭಯ..!:ಗರ್ಭಿಣಿಗೆ ಸೋಕಿನ ಶಂಕೆ!

ಗದಗ: ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಗದಗ ಜಿಲ್ಲೆ ಜನರನ್ನು ಆತಂಕಕ್ಕೀಡು ಮಾಡಿದೆ.…