ನವದೆಹಲಿ : ದೇಶದ ಜಿಡಿಪಿ ಕುರಿತು ಆತಂಕ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಮೋದಿ ವಿರುದ್ಧ ಗುಡುಗಿದ್ದಾರೆ.

 ಬಾಂಗ್ಲಾದೇಶದ ತಲಾ ಜಿಡಿಪಿ ಭಾರತದ ತಲಾ ಜಿಡಿಪಿಯ ಮಟ್ಟಕ್ಕೆ ತಲುಪುತ್ತಿದೆ. ಈ ಕುರಿತು ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ವರದಿಗಳನ್ನು ಉಲ್ಲೇಖಿಸಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಜೆಪಿಯ ದ್ವೇಷ ತುಂಬಿದ ಸಾಂಸ್ಕೃತಿಕ ರಾಷ್ಟ್ರೀಯತೆಯ ಪರಿಣಾಮವಾಗಿ ಬಾಂಗ್ಲಾದೇಶ ಭಾರತವನ್ನು ಹಿಂದಿಕ್ಕುವ ಪ್ರಯತ್ನದಲ್ಲಿದೆ ಎಂದು ಕಿಡಿಕಾರಿದ್ದಾರೆ. ವೈರಸ್ ಸಾಂಕ್ರಾಮಿಕ ರೋಗದಿಂದ ತೀವ್ರವಾಗಿ ಹಾನಿಗೊಳಗಾದ ಭಾರತೀಯ ಆರ್ಥಿಕತೆಯು ಈ ವರ್ಷ ಶೇ. 10.3ರಷ್ಟು ಕುಸಿಯುವ ನಿರೀಕ್ಷೆಯಿದೆ ಎಂದು ಐಎಂಎಫ್ ಹೇಳಿತ್ತು.

ಭಾರತವು 2021ರಲ್ಲಿ ಶೇ. 8.8ರಷ್ಟು ಬೆಳವಣಿಗೆಯ ದರವನ್ನು ಹಿಮ್ಮೆಟ್ಟಿಸುವ ಸಾಧ್ಯತೆಯಿದ್ದು, ತಮ್ಮ ಆರ್ಥಿಕತೆಯ ಸ್ಥಾನವನ್ನು ಮರಳಿ ಪಡೆಯುತ್ತದೆ. ಅಷ್ಟೇ ಅಲ್ಲದೇ, ಚೀನಾದ ಬೆಳವಣಿಗೆಯ ದರವನ್ನು ಶೇ. 8.2ನ್ನು ಮೀರಿಸಲಿದೆ ಎಂದು ಐಎಂಎಫ್ ತನ್ನ ಇತ್ತೀಚಿನ ವಿಶ್ವ ಆರ್ಥಿಕ ಔಟ್ ಲುಕ್ ವರದಿಯಲ್ಲಿ ತಿಳಿಸಿದೆ. 

Leave a Reply

Your email address will not be published. Required fields are marked *

You May Also Like

ಬೆಂಗಳೂರು ಹಾಗೂ ಗದಗಿಗೆ ಬರಲಿದೆ ಕೊರೊನಾ ಎಕ್ಸ್ ಪ್ರೆಸ್!

ಬೆಂಗಳೂರು: ಸದ್ಯದಲ್ಲಿಯೇ ಬೆಂಗಳೂರಿಗೆ ಕೊರೊನಾ ಎಕ್ಸ್ ಪ್ರೆಸ್ ಬರಲಿದೆ.ಕರ್ನಾಟಕದ ಗ್ರೀನ್ ಜೋನ್ ಗೆ ದಾಳಿಯಿಟ್ಟ ಮುಂಬಯಿ…

ಮತ್ತೆ ಕೇಂದ್ರದಿಂದ ಪಡಿತರರಿಗೆ ಶುಭ ಸುದ್ದಿ

ಕೊರೋನಾ ಹಿನ್ನಲೆಯಲ್ಲಿ ಪಿಎಂ ಗರಿಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ಪರಿತರ ಚೀಟಿ ಹೊಂದಿದವರಿಗೆ 5 ಕೆ.ಜಿ ಅಕ್ಕಿ ವಿತರಸಲಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಮುನಿರಾಜುಗೌಡ ತಿಳಿಸಿದ್ದಾರೆ.

ಕರ್ನಾಟಕ ರಾಷ್ಟç ಸಮಿತಿಗೆ ವೀರನಗೌಡ ನೇಮಕ

ಕರ್ನಾಟಕ ರಾಷ್ಟç ಸಮಿತಿ ತಾಲೂಕ ಅಧ್ಯಕ್ಷರಾಗಿ ವೀರನಗೌಡ ಮುಗನೂರ ಅವರನ್ನು ನೇಮಕ ಮಾಡಲಾಗಿದೆ