ನವದೆಹಲಿ : ದೇಶದ ಜಿಡಿಪಿ ಕುರಿತು ಆತಂಕ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಮೋದಿ ವಿರುದ್ಧ ಗುಡುಗಿದ್ದಾರೆ.

 ಬಾಂಗ್ಲಾದೇಶದ ತಲಾ ಜಿಡಿಪಿ ಭಾರತದ ತಲಾ ಜಿಡಿಪಿಯ ಮಟ್ಟಕ್ಕೆ ತಲುಪುತ್ತಿದೆ. ಈ ಕುರಿತು ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ವರದಿಗಳನ್ನು ಉಲ್ಲೇಖಿಸಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಜೆಪಿಯ ದ್ವೇಷ ತುಂಬಿದ ಸಾಂಸ್ಕೃತಿಕ ರಾಷ್ಟ್ರೀಯತೆಯ ಪರಿಣಾಮವಾಗಿ ಬಾಂಗ್ಲಾದೇಶ ಭಾರತವನ್ನು ಹಿಂದಿಕ್ಕುವ ಪ್ರಯತ್ನದಲ್ಲಿದೆ ಎಂದು ಕಿಡಿಕಾರಿದ್ದಾರೆ. ವೈರಸ್ ಸಾಂಕ್ರಾಮಿಕ ರೋಗದಿಂದ ತೀವ್ರವಾಗಿ ಹಾನಿಗೊಳಗಾದ ಭಾರತೀಯ ಆರ್ಥಿಕತೆಯು ಈ ವರ್ಷ ಶೇ. 10.3ರಷ್ಟು ಕುಸಿಯುವ ನಿರೀಕ್ಷೆಯಿದೆ ಎಂದು ಐಎಂಎಫ್ ಹೇಳಿತ್ತು.

ಭಾರತವು 2021ರಲ್ಲಿ ಶೇ. 8.8ರಷ್ಟು ಬೆಳವಣಿಗೆಯ ದರವನ್ನು ಹಿಮ್ಮೆಟ್ಟಿಸುವ ಸಾಧ್ಯತೆಯಿದ್ದು, ತಮ್ಮ ಆರ್ಥಿಕತೆಯ ಸ್ಥಾನವನ್ನು ಮರಳಿ ಪಡೆಯುತ್ತದೆ. ಅಷ್ಟೇ ಅಲ್ಲದೇ, ಚೀನಾದ ಬೆಳವಣಿಗೆಯ ದರವನ್ನು ಶೇ. 8.2ನ್ನು ಮೀರಿಸಲಿದೆ ಎಂದು ಐಎಂಎಫ್ ತನ್ನ ಇತ್ತೀಚಿನ ವಿಶ್ವ ಆರ್ಥಿಕ ಔಟ್ ಲುಕ್ ವರದಿಯಲ್ಲಿ ತಿಳಿಸಿದೆ. 

Leave a Reply

Your email address will not be published. Required fields are marked *

You May Also Like

ಅನ್ನ ನೀರಿಲ್ಲದೆ ನಿತ್ರಾಣನಾದ ಆ ವೃದ್ಧ ಮನೆ ತಲುಪಿದ್ದು ಹೇಗೆ?

ಲಾಕ್ ಡೌನ್ ಹಿನ್ನೆಲೆ ಅದೆಷ್ಟೋ ಜನ ಒಂದಲ್ಲ ಒಂದು ಕಾರಣಕ್ಕೆ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದಲ್ಲಿ ವೃದ್ಧನೊಬ್ಬ ಗೋಳಾಟ ಇದಕ್ಕೊಂದು ಉದಾಹರಣೆ.

ತಾಲೂಕಾ ಆರೋಗ್ಯ ರಕ್ಷಾ ಸಮಿತಿ ಸಭೆ ನಿರ್ಭಯದಿಂದ ಕಾರ್ಯ ನಿರ್ವಹಿಸಿ: ವೈದ್ಯರಿಗೆ ಶಾಸಕ ರಾಮಣ್ಣ ಅಭಯ

ಉತ್ತರಪ್ರಭ ಸುದ್ದಿಶಿರಹಟ್ಟಿ : ಪ್ರಸ್ತುತ ಕೊರೊನಾ ಸಮಯದಲ್ಲೂ ಹಲವಾರು ಸಮಸ್ಯೆಗಳನ್ನು ಎದುರಿಸಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು…

ಪಶ್ಚಿಮ ಪದವೀಧರರ ಮತಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಸಚಿವ ಶೆಟ್ಟರ್

ಪದವೀಧರರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ ಗೆಲುವಿಗೆ ಬಿಜೆಪಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು.