ಬೆಂಗಳೂರು :  ಮಾಸ್ಕ್ ಧರಿಸದವರ ವಿರುದ್ಧ ದೂರು ದಾಖಲಿಸುತ್ತಿದ್ದ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಮೂವರನ್ನು ಜಾಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಕಾರ್ಲ್ ಮಾರ್ಕ್ಸ್(25), ಶಿವಕುಮಾರ್(54), ಎಸ್ ಬಾಬು(40) ಬಂಧಿತರು ಎಂದು ತಿಳಿದು ಬಂದಿದೆ. ಬಿಬಿಎಂಪಿ ಮಾರ್ಷಲ್ ಮುನಿರಾಜು ಅವರೊಂದಿಗೆ ಗೋಕುಲದಲ್ಲಿ ಗಸ್ತಿನಲ್ಲಿದ್ದ ಸಂದರ್ಭದಲ್ಲಿ ಗೋಕುಲ ಬ್ರಿಡ್ಜ್ ಕೆಳಗಡೆ ಹಳೆ ರೈಲ್ವೆ ಗೇಟ್ ಹತ್ತಿರ ಇರುವ ಬಾಬು ಮೋಟಾರ್ಸ್ ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ ಓರ್ವ ವ್ಯಕ್ತಿ ಗ್ಯಾರೇಜ್ ಮುಂದೆ ಸಾರ್ವಜನಿಕ ರಸ್ತೆಯಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದ. ಈ ಸಂದರ್ಭದಲ್ಲಿ ಮಾಸ್ಕ್ ಧರಿಸದಿರುವುದನ್ನು ಬಿಬಿಎಂಪಿ ಮಾರ್ಷಲ್ ಪ್ರಶ್ನಿಸಿದ್ದಾರೆ. ಆಗ ಗ್ಯಾರೇಜ್ ಬಳಿ ಇದ್ದ ಶಿವಕುಮಾರ್ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ.

ಈ ಸಂದರ್ಭದಲ್ಲಿ ಗ್ಯಾರೇಜ್ ನಲ್ಲಿದ್ದ ಕಾರ್ಲ್ ಮಾರ್ಕ್ಸ್ ಎಂಬ ವ್ಯಕ್ತಿ, ನಮಗೇನು ಕೊರೊನಾ ಇದೆಯೇ? ನಾವು ಮಾಸ್ಕ್ ಹಾಕುವುದಿಲ್ಲ. ದಂಡವನ್ನೂ ಕಟ್ಟುವುದಿಲ್ಲ ಎಂದು ಪೊಲೀಸರನ್ನೇ ದಬಾಯಿಸಿದ್ದಾನೆ. ಗ್ಯಾರೇಜ್ ಮಾಲೀಕ ಬಾಬು ಎಂಬ ವ್ಯಕ್ತಿ ಬಂದು ಪೊಲೀಸರ ಕೈ ಹಿಡಿದುಕೊಂಡಿದ್ದಾನೆ. ಆಗ ಕಾರ್ಲ್ ಮಾರ್ಕ್ಸ್ ಪೊಲೀಸರ ಕೆನ್ನೆಗೆ ಬಾರಿಸಿದ್ದಾನೆ ಎಂದು ಪೊಲೀಸ್ ಎಎಸ್ ಐ ಅಶ್ವಥಯ್ಯ ಆರೋಪಿಸಿದ್ದಾರೆ. 

Leave a Reply

Your email address will not be published. Required fields are marked *

You May Also Like

ಬಳಗಾನೂರಿನಲ್ಲಿ ಚೆನ್ನಮ್ಮ, ರಾಯಣ್ಣ ಪುತ್ಥಳಿ ಸ್ಥಾಪನೆಗೆ ಮನವಿ

ಪಂಚಮಸಾಲಿ ಸಮಾಜದ ಶಹರ ಘಟಕ ದಿಂದ ಗದಗ ಜಿಲ್ಲಾ ಬಳಗಾನೂರ ಗ್ರಾಮದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಪುತ್ಥಳಿ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಹಂಪಿ ಚೆಲುವಿಗೆ ತ್ರಿವರ್ಣ ಮೆರುಗು

ಉತ್ತರಪ್ರಭ ಸುದ್ದಿಹಂಪಿ: 75 ನೇ ಅಮೃತ ಮಹೋತ್ಸವದ ಅಂಗವಾಗಿ ಹಂಪಿಯ ಐತಿಹಾಸಿಕ ಸ್ಮಾರಕಗಳಿಗೆ ತ್ರಿವರ್ಣ ದ್ವಜವನ್ನು…

ಬಸ್ ನಿಲ್ದಾಣದಲ್ಲಿ ಶೌಚಾಲಯ ಅವ್ಯವಸ್ಥೆ ಸಾರಿಗೆ ಅಧಿಕಾರಿ ತರಾಟೆಗೆ

ಪಟ್ಟಣದ ಬಸ್ ನಿಲ್ದಾಣದಲ್ಲಿರುವ ಶೌಚಾಲಯದ ಅವ್ಯವಸ್ಥೆಯನ್ನು ಸಾರಿಗೆ ಇಲಾಖೆ ಸಂಚಾರಿ ನಿರೀಕ್ಷಕರಿಗೆ ತೋರಿಸುವ ಮೂಲತ ಜೈ ಭೀಮ ಆರ್ಮಿ ಸಂಘಟನೆ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡ ಘಟನೆ ಶನಿವಾರ ನಡೆದಿದೆ.

ರಾಜ್ಯದಲ್ಲಿಂದು 1498 ಕೊರೊನಾ ಪಾಸಿಟಿವ್!: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 1498 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 26815 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 571. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 11098 ಕೇಸ್ ಗಳು. ರಾಜ್ಯದಲ್ಲಿ 15297 ಸಕ್ರೀಯ ಪ್ರಕರಣಗಳಿವೆ.