ಬೆಂಗಳೂರು :  ಮಾಸ್ಕ್ ಧರಿಸದವರ ವಿರುದ್ಧ ದೂರು ದಾಖಲಿಸುತ್ತಿದ್ದ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಮೂವರನ್ನು ಜಾಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಕಾರ್ಲ್ ಮಾರ್ಕ್ಸ್(25), ಶಿವಕುಮಾರ್(54), ಎಸ್ ಬಾಬು(40) ಬಂಧಿತರು ಎಂದು ತಿಳಿದು ಬಂದಿದೆ. ಬಿಬಿಎಂಪಿ ಮಾರ್ಷಲ್ ಮುನಿರಾಜು ಅವರೊಂದಿಗೆ ಗೋಕುಲದಲ್ಲಿ ಗಸ್ತಿನಲ್ಲಿದ್ದ ಸಂದರ್ಭದಲ್ಲಿ ಗೋಕುಲ ಬ್ರಿಡ್ಜ್ ಕೆಳಗಡೆ ಹಳೆ ರೈಲ್ವೆ ಗೇಟ್ ಹತ್ತಿರ ಇರುವ ಬಾಬು ಮೋಟಾರ್ಸ್ ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ ಓರ್ವ ವ್ಯಕ್ತಿ ಗ್ಯಾರೇಜ್ ಮುಂದೆ ಸಾರ್ವಜನಿಕ ರಸ್ತೆಯಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದ. ಈ ಸಂದರ್ಭದಲ್ಲಿ ಮಾಸ್ಕ್ ಧರಿಸದಿರುವುದನ್ನು ಬಿಬಿಎಂಪಿ ಮಾರ್ಷಲ್ ಪ್ರಶ್ನಿಸಿದ್ದಾರೆ. ಆಗ ಗ್ಯಾರೇಜ್ ಬಳಿ ಇದ್ದ ಶಿವಕುಮಾರ್ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ.

ಈ ಸಂದರ್ಭದಲ್ಲಿ ಗ್ಯಾರೇಜ್ ನಲ್ಲಿದ್ದ ಕಾರ್ಲ್ ಮಾರ್ಕ್ಸ್ ಎಂಬ ವ್ಯಕ್ತಿ, ನಮಗೇನು ಕೊರೊನಾ ಇದೆಯೇ? ನಾವು ಮಾಸ್ಕ್ ಹಾಕುವುದಿಲ್ಲ. ದಂಡವನ್ನೂ ಕಟ್ಟುವುದಿಲ್ಲ ಎಂದು ಪೊಲೀಸರನ್ನೇ ದಬಾಯಿಸಿದ್ದಾನೆ. ಗ್ಯಾರೇಜ್ ಮಾಲೀಕ ಬಾಬು ಎಂಬ ವ್ಯಕ್ತಿ ಬಂದು ಪೊಲೀಸರ ಕೈ ಹಿಡಿದುಕೊಂಡಿದ್ದಾನೆ. ಆಗ ಕಾರ್ಲ್ ಮಾರ್ಕ್ಸ್ ಪೊಲೀಸರ ಕೆನ್ನೆಗೆ ಬಾರಿಸಿದ್ದಾನೆ ಎಂದು ಪೊಲೀಸ್ ಎಎಸ್ ಐ ಅಶ್ವಥಯ್ಯ ಆರೋಪಿಸಿದ್ದಾರೆ. 

Leave a Reply

Your email address will not be published. Required fields are marked *

You May Also Like

ಆಲಮಟ್ಟಿ: 15 ರಂದು ಹಳಕಟ್ಟಿ ಶಾಲೆಯ 64 ನೇ ವಾಷಿ೯ಕ ಸ್ನೇಹ ಸಮ್ಮೇಳನ

ಗುಲಾಬಚಂದ ಆರ್. ಜಾಧವಆಲಮಟ್ಟಿ : ಸ್ಥಳೀಯ ಎಸ್.ವ್ಹಿ.ವ್ಹಿ.ಸಂಸ್ಥೆಯ ರಾವಬಹದ್ದೂರ ಡಾ. ಫ.ಗು.(ಆರ್.ಬಿ.ಪಿ.ಜಿ) ಹಳಕಟ್ಟಿ ಪ್ರೌಢಶಾಲೆಯ 2021-22…

ನರೇಗಲ್ಲ: ವಿದ್ಯುತ್ ನಿಲುಗಡೆ

110/11ಕೆವ್ಹಿ ನರೇಗಲ್ಲ, ವಿದ್ಯುತ್ ವಿತರಣಾ ಉಪ-ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ನವೆಂಬರ್ 10 ರಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 5.30 ಘಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಆನ್ಲೈನ್ ಸಹಾಯದಿಂದ ಯುವಕರಲ್ಲಿ ಜಾನಪದ ಆಸಕ್ತಿ ಮೂಡಿಸುತ್ತಿರುವ ಡಾ.ಬಾಲಾಜಿ

ಕನ್ನಡ ಜಾನಪದ ಯುವ ಬ್ರಿಗೇಡಿನ ಮೂಲಕ ಯುವ ಜನಾಂಗವನ್ನು ಎಚ್ಚರಿಸುವ ಹಾಗೂ ಅವರನ್ನು ಜಾನಪದ ಕಲೆಯಲ್ಲಿ ತೊಡಗಿಸಿಕೊಳ್ಳಲು ಪ್ರೇರೆಪಿಸುತ್ತಿದ್ದಾರೆ. ಲಾಕ್ ಡೌನ್ ಸಮಯದಲ್ಲೂ ಆಪ್ ಸಹಾಯದಿಂದ ಯುವಕರನ್ನು ಸೇರಿಸಿ ಅವರಿಗೆ ಜಾನಪದ ಕಲೆಯ ಸೊಗಡು ಉಣ ಬಡಿಸುವ ಕಾರ್ಯ ಮಾಡುತ್ತಿದ್ದಾರೆ.

ಕಸಾಪ ಜಿಲ್ಲಾಧ್ಯಕ್ಷ ಶರಣು ಹೇಳಿಕೆ: ಸಾಹಿತ್ಯ ಭವನಗಳ ಕಾಮಗಾರಿ ಪೂರ್ಣಗೊಳಿಸಿದ ಹೆಮ್ಮೆ ಇದೆ

ರಾಜ್ಯಕ್ಕೆ ಮಾದರಿಯಾದ ಜಿಲ್ಲಾ ಸಾಹಿತ್ಯ ಭವನ ಕಳೆದ 24 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರೋಣ ತಾಲೂಕ ಕನ್ನಡ ಸಾಹಿತ್ಯ ಭವನಗಳು ನಮ್ಮ ಅವಧಿಯಲ್ಲಿ ಪೂರ್ಣಗೊಳಿಸಿ ಉದ್ಘಾಟನೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ