ಬೆಂಗಳೂರು :  ಮಾಸ್ಕ್ ಧರಿಸದವರ ವಿರುದ್ಧ ದೂರು ದಾಖಲಿಸುತ್ತಿದ್ದ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಮೂವರನ್ನು ಜಾಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಕಾರ್ಲ್ ಮಾರ್ಕ್ಸ್(25), ಶಿವಕುಮಾರ್(54), ಎಸ್ ಬಾಬು(40) ಬಂಧಿತರು ಎಂದು ತಿಳಿದು ಬಂದಿದೆ. ಬಿಬಿಎಂಪಿ ಮಾರ್ಷಲ್ ಮುನಿರಾಜು ಅವರೊಂದಿಗೆ ಗೋಕುಲದಲ್ಲಿ ಗಸ್ತಿನಲ್ಲಿದ್ದ ಸಂದರ್ಭದಲ್ಲಿ ಗೋಕುಲ ಬ್ರಿಡ್ಜ್ ಕೆಳಗಡೆ ಹಳೆ ರೈಲ್ವೆ ಗೇಟ್ ಹತ್ತಿರ ಇರುವ ಬಾಬು ಮೋಟಾರ್ಸ್ ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ ಓರ್ವ ವ್ಯಕ್ತಿ ಗ್ಯಾರೇಜ್ ಮುಂದೆ ಸಾರ್ವಜನಿಕ ರಸ್ತೆಯಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದ. ಈ ಸಂದರ್ಭದಲ್ಲಿ ಮಾಸ್ಕ್ ಧರಿಸದಿರುವುದನ್ನು ಬಿಬಿಎಂಪಿ ಮಾರ್ಷಲ್ ಪ್ರಶ್ನಿಸಿದ್ದಾರೆ. ಆಗ ಗ್ಯಾರೇಜ್ ಬಳಿ ಇದ್ದ ಶಿವಕುಮಾರ್ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ.

ಈ ಸಂದರ್ಭದಲ್ಲಿ ಗ್ಯಾರೇಜ್ ನಲ್ಲಿದ್ದ ಕಾರ್ಲ್ ಮಾರ್ಕ್ಸ್ ಎಂಬ ವ್ಯಕ್ತಿ, ನಮಗೇನು ಕೊರೊನಾ ಇದೆಯೇ? ನಾವು ಮಾಸ್ಕ್ ಹಾಕುವುದಿಲ್ಲ. ದಂಡವನ್ನೂ ಕಟ್ಟುವುದಿಲ್ಲ ಎಂದು ಪೊಲೀಸರನ್ನೇ ದಬಾಯಿಸಿದ್ದಾನೆ. ಗ್ಯಾರೇಜ್ ಮಾಲೀಕ ಬಾಬು ಎಂಬ ವ್ಯಕ್ತಿ ಬಂದು ಪೊಲೀಸರ ಕೈ ಹಿಡಿದುಕೊಂಡಿದ್ದಾನೆ. ಆಗ ಕಾರ್ಲ್ ಮಾರ್ಕ್ಸ್ ಪೊಲೀಸರ ಕೆನ್ನೆಗೆ ಬಾರಿಸಿದ್ದಾನೆ ಎಂದು ಪೊಲೀಸ್ ಎಎಸ್ ಐ ಅಶ್ವಥಯ್ಯ ಆರೋಪಿಸಿದ್ದಾರೆ. 

Leave a Reply

Your email address will not be published. Required fields are marked *

You May Also Like

ಆನ್‍ಲೈನ್ ಮೂಲಕ ಐ.ಟಿ.ಐ ಕೋರ್ಸಗಳಿಗೆ ಪ್ರವೇಶಾತಿ

ರಾಜ್ಯದ 270 ಸರಕಾರಿ ಹಾಗೂ 196 ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಅಗಷ್ಟ-2020 ನೇ ಸಾಲಿಗೆ ಮೆರಿಟ್-ಕಂ-ರಿಸರ್ವೇಷನ್ ಆಧಾರಿತ ಪ್ರವೇಶಗಳನ್ನು ಆನ್‍ಲೈನ್ ಮುಖಾಂತರ ಮಾಡಲಾಗುತ್ತಿದೆ.

ನೆಲೋಗಿ ಠಾಣೆ ಪೊಲೀಸರ ಭರ್ಜರಿ ಬೇಟೆ 41.8 ಕೆಜಿ ಗಾಂಜಾ ಜಪ್ತಿ

ಉತ್ತರಪ್ರಭ ನೆಲೋಗಿ: ರಾಷ್ಟೀಯ ಹೆದ್ದಾರಿ 50ರ ಕಲಬುರ್ಗಿಯಿಂದ ವಿಜಯಪುರಕ್ಕೆ ಮಾರ್ಗಮಧ್ಯದಲ್ಲಿ  ನೆಲೋಗಿ ಕಮಾನ್ ಬಸ್ ನಿಲ್ದಾಣದ…

ರಾಹುಲ್ ಗಾಂಧಿ ಬಟಾಟೆಯಲ್ಲಿ ಚಿನ್ನ ತೆಗೆದಂತೆ ಸಿದ್ದರಾಮಯ್ಯ ಹೂವಿನಲ್ಲಿ ಚಿನ್ನ ತೆಗೆಯುತ್ತಿದ್ದಾರೆ : ಕಟೀಲ್

ರಾಹುಲ್ ಗಾಂಧಿ ಬಟಾಟೆಯಲ್ಲಿ ಚಿನ್ನ ತೆಗೆದ ರೀತಿಯಲ್ಲಿ, ಸಿದ್ದರಾಮಯ್ಯ ಹೂವಿನಲ್ಲಿ ಚಿನ್ನ ತೆಗೆಯಲು ಹೊರಟಿದ್ದಾರೆ. ಸಂಕಷ್ಟದ ಈ ಸಂದರ್ಭದಲ್ಲಿ ರಾಜಕೀಯ ಮಾಡುವ ಹೇಯ ಕೃತ್ಯ ಸಿದ್ದರಾಮಯ್ಯ ನಡೆಸಿದ್ದಾರೆ.

ಕೊರೋನಾ ಕಾವ್ಯ-1

ಕೊರೋನಾ ಕಾವ್ಯ ಸರಣಿಗೆ ಕವನ ಬರೆದವರು ಮುತ್ತು.ಹೆಚ್.ಬಿ(ಶಿಕ್ಷಕರು), ಪ್ರಸ್ತುತ ಕೊಪ್ಪಳ ಜಿಲ್ಲೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮುತ್ತು, ಭವಿಷ್ಯದ ಭರವಸೆಯ ಶಿಕ್ಷಕ ಮತ್ತು ಬರಹಗಾರ. ಅವರಲ್ಲಿನ ಜನಪರ ಮತ್ತು ಜೀವಪರ ಕಾಳಜಿಯೇ ಈ ಕಾವ್ಯದಲ್ಲಿ ಅಕ್ಷರ ರೂಪದಲ್ಲಿ ಹೊರಹೊಮ್ಮಿದೆ.