ಬೆಂಗಳೂರು : ಸಕ್ಕರೆ ನಾಡಿನಲ್ಲಿ ಸಿಹಿಯಾದ ಆಮಿಷಕ್ಕೆ ಮಹಿಳೆಯರು ಬಲಿಯಾಗಿ, ಬರೋಬ್ಬರಿ ರೂ. 20 ಕೋಟಿ ಮೌಲ್ಯದ ಚಿನ್ನ ಕಳೆದುಕೊಂಡಿರುವ ಘಟನೆ ನಡೆದಿದೆ.

ಮಂಡ್ಯದ ಫೆಡ್ ಬ್ಯಾಂಕ್‌ ನ ಎಕ್ಸಿಕ್ಯುಟಿವ್ ಆಗಿ ಕೆಲಸ ಮಾಡುತ್ತಿದ್ದ ಸೋಮಶೇಖರ್ ಎಂಬ ವ್ಯಕ್ತಿಯಿಂದಲೇ ಈ ರೀತಿಯ ಮೋಸವಾಗಿದೆ. ಬ್ಯಾಂಕ್‌ ನಲ್ಲಿ ಚಿನ್ನ ಇಟ್ಟರೆ ವಾರಕ್ಕೆ ಶೇ. 20ರಷ್ಟು ಹಾಗೂ ತಿಂಗಳಿಗೆ ಶೇ. 40 ರಷ್ಟು ಬಡ್ಡಿ ನೀಡಲಾಗುತ್ತದೆ ಎಂದು ನಂಬಿಸಿ ಈತ ಮಹಿಳೆಯರಿಗೆ ಮೋಸ ಮಾಡಿದ್ದಾನೆ.

ಅಲ್ಲದೇ, ಬರೋಬ್ಬರಿ ರೂ. 20 ಕೋಟಿ ಮೌಲ್ಯದ ಚಿನ್ನ ಸಂಗ್ರಹಿಸಿದ್ದ. ಆದರೆ, ಕೊಟ್ಟ ಚಿನ್ನಕ್ಕೆ ಯಾವುದೇ ದಾಖಲೆ ಪಡೆದಿರಲಿಲ್ಲ.ಮಂಗಳಮುಖಿಯೊಬ್ಬರು ನೀಡಿದ ದೂರಿನಿಂದಾಗಿ ಈ ಪ್ರಕರಣ ಬೆಳಕಿಗೆ ಬಂದಿದೆ. ಈ ವ್ಯಕ್ತಿ ಜಿಲ್ಲಾ ಬಿಜೆಪಿ ಅಧ್ಯಕ್ಷೆ ಸೇರಿದಂತೆ ಹಲವರಿಗೆ ವಂಚಿಸಿದ್ದಾನೆ. ಸದ್ಯ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆರೋಪಿತ, ಮಣಪ್ಪುರಂ, ಮುತ್ತೂಟ್, ಕೋಶಮಟ್ಟಂ ಫೈನಾನ್ಸ್‌ ಕಂಪನಿಗಳಲ್ಲಿಯೂ ಚಿನ್ನ ಅಡ ಇಟ್ಟಿದ್ದಾನೆ. ಪ್ರಾಥಮಿಕ ತನಿಖೆಯಲ್ಲಿ 30ಕ್ಕೂ ಹೆಚ್ಚು ಮಹಿಳೆಯರಿಂದ ಹತ್ತಾರು ಕೆಜಿ ಚಿನ್ನ ಪಡೆದು ವಂಚನೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. 

ಐಷಾರಾಮಿ ಜೀವನ ಸಾಗಿಸಲು ಈತ ಈ ಕೆಲಸ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಸದ್ಯ 36 ಜನರಿಗೆ ವಂಚಿಸಿರುವ ಕುರಿತು ತಿಳಿದು ಬಂದಿದೆ. ಸದ್ಯ ಪೊಲೀಸರಿಗೆ ನಾಲ್ಕೂವರೆ ಕೆಜಿ ಚಿನ್ನ, ಒಂದೂವರೆ ಕೋಟಿ ಹಣ ವಂಚಿಸಿರುವ ಬಗ್ಗೆ ತಿಳಿದು ಬಂದಿದೆ. 

Leave a Reply

Your email address will not be published. Required fields are marked *

You May Also Like

ಮಾಗಡಿ : ಗ್ರಾಪಂ ಮಾಜಿ ಸದಸ್ಯರ ಬಣವಿಗೆ ಬೆಂಕಿ..!

ತಾಲೂಕಿನ ಮಾಗಡಿ ಗ್ರಾಪಂ ವ್ಯಾಪ್ತಿಯ ಪರಸಾಪೂರ (ವಾರ್ಡ ನಂ:6) ಗ್ರಾಮದಲ್ಲಿ ಶೇಂಗಾ ಬಣವಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಮಾಜಿ ಗ್ರಾಪಂ ಸದಸ್ಯ ಬಸಪ್ಪ ಬೇರಗಣ್ಣವರ ಸದ್ಯ ನಡೆಯುತ್ತಿರುವ ಚುನಾವಣೆಗೆ ಅವರ ಮಗ‌ನನ್ನು ಕಣಕ್ಕೆ ಇಳಿಸಿದ್ದರು.

ತೋಂಟದಾರ್ಯ ಇಂಜನೀಯರಿಂಗ್ ಕಾಲೇಜಿಗೆ ಎನ್.ಬಿ.ಎ ಮಾನ್ಯತೆ

ತೋಂಟದಾರ್ಯ ಇಂಜನೀಯರಿಂಗ್ ಕಾಲೇಜಿಗೆ ಎನ್.ಬಿ.ಎ ಮಾನ್ಯತೆ ದೊರೆತಿದೆ. ಈ ಮೂಲಕ ಗದಗ ಜಿಲ್ಲೆಯಲ್ಲಿ ಎನ್.ಬಿ.ಎ ಮಾನ್ಯತೆ ಪಡೆದ ಮೊದಲ ಕಾಲೆಜು ಎನ್ನುವ ಹೆಗ್ಗಳಿಗೆ ತೋಂಟದಾರ್ಯ ಇಂಜನೀಯರಿಂಗ್ ಕಾಲೇಜ್ ಪಾತ್ರವಾಗಿದೆ.

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾರೆ ದತ್ತ ಮೇಷ್ಟ್ರು..!

ಮಾಜಿ ಶಾಸಕ ವೈ.ಎಸ್.ವಿ. ದತ್ತ ಅವರು ಈಗ ಮೇಷ್ಟ್ರ ಆಗಿದ್ದಾರೆ. ಸದ್ಯ ಅವರು ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಫೇಸ್ ಬುಕ್ ಲೈವ್ ನಲ್ಲಿ ಪಾಠ ಮಾಡುತ್ತಿದ್ದಾರೆ.