ಪಾಣಿಪತ್ : ಪಾಪಿಯೊಬ್ಬ ಪತ್ನಿಯನ್ನೇ ಶೌಚಾಲಯದಲ್ಲಿ ಕೂಡಿ ಹಾಕಿದ್ದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.  

ಹರಿಯಾಣದ ಪಾಣಿಪತ್ ಜಿಲ್ಲೆಯ ರಿಶ್ಬುರ್ ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಪಾಪಿ ಪತಿ ತನ್ನ ಪತ್ನಿಯನ್ನು ಬರೋಬ್ಬರಿ ಒಂದು ವರ್ಷದಿಂದ ಶೌಚಾಲಯದಲ್ಲಿ ಕೂಡಿ ಹಾಕಿದ್ದ. ಅಲ್ಲದೇ, ಕಳೆದ ಒಂದು ವರ್ಷದಿಂದ ಪತ್ನಿಗೆ ತಿನ್ನಲು ಏನೂ ನೀಡಿರಲಿಲ್ಲ. ಸದ್ಯ ಮಹಿಳೆಯನ್ನು ಮಹಿಳೆಯರ ರಕ್ಷಣೆ ಮತ್ತು ಬಾಲ್ಯವಿವಾಹ ತಡೆ ಅಧಿಕಾರಿ ಹಾಗೂ ಸಿಬ್ಬಂದಿ ರಕ್ಷಿಸಿದ್ದಾರೆ.

ಈ ಮಹಿಳೆ ಮಾನಸಿಕ ಅಸ್ವಸ್ಥತೆ ಎಂದು ಹೇಳುತ್ತಿದ್ದಾರೆ. ಆದರೆ, ಅದು ಸುಳ್ಳು. ಮಹಿಳೆಯನ್ನು ಮಾತನಾಡಿಸಿದಾಗ ಈ ರೀತಿ ಅನ್ನಿಸಲಿಲ್ಲ. ಶೌಚಾಲಯದೊಳಗಿದ್ದ ಮಹಿಳೆಯನ್ನು ಹೊರ ತಂದು, ತಲೆಗೂದಲು ತೊಳೆದು ಪೊಲೀಸ್ ಗೆ ದೂರು ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಿಳೆಯ ಪತಿ, ಆಕೆ ಮಾನಸಿಕ ಅಸ್ವಸ್ಥತೆ, ಹೊರಗೆ ಕುಳಿತುಕೊಳ್ಳು ಎಂದು ನಾವು ಹೇಳಿದರೂ ಆಕೆ ಕೇಳುತ್ತಿರಲಿಲ್ಲ. ವೈದ್ಯರ ಬಳಿಗೆ ಹೋಗಿ ತೋರಿಸಿದರೂ ಏನೂ ಪ್ರಯೋಜನವಾಗಲಿಲ್ಲ ಎಂದು ಹೇಳಿದ್ದಾನೆ ಎಂದು ತಿಳಿದು ಬಂದಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. 

Leave a Reply

Your email address will not be published. Required fields are marked *

You May Also Like

ಬಿಹಾರದಲ್ಲಿ ಶುರುವಾದ ಎರಡನೇ ಹಂತದ ಮತ ಸಮರ!

ನವದೆಹಲಿ : ಬಿಹಾರದಲ್ಲಿ ಈಗಾಗಲೇ ಮೊದಲ ಹಂತದ ಚುನಾವಣೆ ಮುಕ್ತಾಯವಾಗಿದ್ದು, ಎರಡನೇ ಹಂತದ ಚುನಾವಣೆ ಪ್ರಾರಂಭವಾಗಿದೆ.

ಶಿಕ್ಷಕರಿಗೆ-ಪಾಲಕರಿಗೆ ದಂಗುಬಡಿಸಿದ ಈ ಪೋರಿ

ಕೋವಿಡ್ ಸೋಮಕಿನಿಂದ ಆನ್ಲೈನ್ ಕ್ಲಾಸ್ಗಳು ಹಾಗೂ ವರ್ಕ್ ಫ್ರಂ ಹೋಂಗೆ ಜನರು ಒಗ್ಗಿ ಹೋಗಿದ್ದಾರೆ. ಆದರೆ, ಇಲ್ಲೊಬ್ಬಳು ಬಾಲಕಿ ಶಿಕ್ಷಕರನ್ನು ಮತ್ತು ಪೋಷಕರನ್ನು ಮೂರ್ಖನ್ನಾಗಿ ಮಾಡಿದ್ದಾಳೆ.

ಮಹದಾಯಿ ವಿಚಾರ: 4 ವಾರಗಳಲ್ಲಿ ಸಮಿತಿ ರಚಿಸಿ ವರದಿ ನೀಡಲು ಸುಪ್ರೀಂ ಆದೇಶ!

ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ, ಮಲಪ್ರಭಾ ನದಿಗೆ ನೀರು ತಿರುಗಿಸುತ್ತಿದೆ ಎಂದು ಗೋವಾ ರಾಜ್ಯ ನ್ಯಾಯಾಂಗ ನಿಂದನೆ ದೂರು ಸಲ್ಲಿಸಿತ್ತು. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಗೋವಾ ಮನವಿ ಪರಿಶೀಲಿಸಿ ಇದಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಪರಿಶೀಲನೆ ನಡೆಸಲು ನಾಲ್ಕು ವಾರಗಳಲ್ಲಿ ತಜ್ಞರನ್ನೊಳಗೊಂಡ ಮೇಲುಸ್ತುವಾರಿ ಸಮಿತಿ ರಚಿಸಿ ವರದಿ ನೀಡಲು ಸುಪ್ರೀಂ ಕೋರ್ಟ್ ಆದೇಶಿಸಿದೆ.

ಪಶ್ಚಿಮ ಬಂಗಾಳದಲ್ಲಿ ಜುಲೈ 31ರ ವರೆಗೆ ಲಾಕ್ ಡೌನ್!

ಕೋಲ್ಕತ್ತಾ : ದೇಶದಲ್ಲಿ ಕೊರೊನಾ ಮಹಾಮಾರಿಯ ಅಬ್ಬರ ಹೆಚ್ಚಾಗುತ್ತಿದೆ. ಇದರಿಂದಾಗಿ ಪಶ್ಚಿಮ ಬಂಗಾಳ ಸರ್ಕಾರ ಜುಲೈ…