ಮುಂಬಯಿ : ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣದ ತನಿಖೆಗೆ ಅಂತ್ಯ ಹಾಡಲು ಸಿಬಿಐ ನಿರ್ಧರಿಸಿದೆ.

ನಟ ಸುಶಾಂತ್ ಸಾವಿನ ಪ್ರಕರಣದಲ್ಲಿ ಯಾವುದೇ ವ್ಯಕ್ತಿಯ ಕೈವಾಡ ಇರುವ ಕುರಿತು ಪುರಾವೆ ಸಿಕ್ಕಿಲ್ಲ ಎಂದು ತಂಡ ಅಭಿಪ್ರಾಯಪಟ್ಟಿದೆ ಎಂದು ತಿಳಿದು ಬಂದಿದೆ.

ತನಿಖೆಯಲ್ಲಿ ಸಿಕ್ಕಷ್ಟು ಮಾಹಿತಿಗಳನ್ನು ಶೀಘ್ರದಲ್ಲಿಯೇ ನ್ಯಾಯಾಲಯಕ್ಕೆ ಸಲ್ಲಿಸಲು ಸಿಬಿಐ ತಯಾರಿ ನಡೆಸಿದೆ. ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ ಅವರ ವಿರುದ್ಧದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಗಳ ಕುರಿತು ಮುಂದಿನ ಕ್ರಮ ತೆಗೆದುಕೊಳ್ಳುವುದರ ಕುರಿತು ನ್ಯಾಯಾಲಯ ನಿರ್ಧರಿಸುವ ಸಾಧ್ಯತೆ ಇದೆ.

ಸುಶಾಂತ್ ಸಿಂಗ್ ರಜಪೂತ್ ಅವರದ್ದು ಆತ್ಮಹತ್ಯೆಯೇ ಹೊರತು, ಕೊಲೆಯಲ್ಲ ಎಂದು ಏಮ್ಸ್ ಸಮಿತಿ ವರದಿ ನೀಡಿದ ಬೆನ್ನಲ್ಲಿಯೇ ಸಿಬಿಐ ತನ್ನ ತನಿಖೆಯನ್ನು ಮುಕ್ತಾಯಗೊಳಿಸಿ ವರದಿ ಸಲ್ಲಿಸಲು ಮುಂದಾಗಿದೆ ಎಂದು ತಿಳಿದು ಬಂದಿದೆ.

ಜೂ. 14ರಂದು ಮುಂಬಯಿನ ಬಾಂದ್ರಾದಲ್ಲಿರುವ ಅಪಾರ್ಟ್‌ ಮೆಂಟ್‌ ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಪೊಲೀಸರು ಇದು ಆತ್ಮಹತ್ಯೆ ಅಲ್ಲ ಎಂದು ಘೋಷಿಸಿದ್ದರು. ಅಲ್ಲದೇ, ಪೊಲೀಸರ ತನಿಖೆ ಇನ್ನೂ ಪ್ರಗತಿಯಲ್ಲಿರುವಾಗಲೇ ಪ್ರಕರಣವು ಸಿಬಿಐ ಕೈಯಲ್ಲಿ ಸಿಕ್ಕಿತ್ತು. ಈ ಸಂದರ್ಭದಲ್ಲಿಯೇ ಜಾರಿ ನಿರ್ದೇಶನಾಲಯ ಮತ್ತು ಮಾದ ಕವಸ್ತು ನಿಯಂತ್ರಣ ಸಂಸ್ಥೆಗಳು ಅಕ್ರಮ, ವರ್ಗಾವಣೆ ಹಾಗೂ ಮಾದಕವಸ್ತು ಸಾಗಣೆಯ ಆಯಾಮಗಳಲ್ಲಿ ತನಿಖೆ ಪ್ರಾರಂಭಿಸಿದ್ದವು.

Leave a Reply

Your email address will not be published. Required fields are marked *

You May Also Like

ಮುಖ್ಯಮಂತ್ರಿ ಬಸವರಾಜ ಬೋಮ್ಮಾಯಿ ಮತ್ತು ಶಿವರಾಜ ಕುಮಾರ ಕೆಲವೇ ಕ್ಷಣಗಳಲ್ಲಿ ಜಂಟಿ ಸುದ್ದಿ ಗೋಷ್ಠಿ

ಬೆಂಗಳೂರಿನ ವಿಕ್ರಮ್ ಆಸ್ಪತ್ರೆ ಅವರ ಅಭಿಮಾನಿಗಳು ದೌಡು ಹೆಚ್ಚಿನ ಪೊಲೀಸ್ ಬೀಗಿ ಬಂದೋಬಸ್ತ ಮಾಡಲಾಗಿದ್ದು .ರಾಜ್ಯಾದ್ಯಂತ ಅವರ ಅಭಿಮಾನಿಗಳು ಬೇಗ ಗುಣಮುಖರಾಗಿ ಅಪ್ಪು ಬರಲಿ ಎಂದು ಪ್ರಾರ್ಥನೆ ಮಾಡುತ್ತಿರುವ ಬೆನ್ನಲ್ಲೆ ಕೆಲವೇ ಕ್ಷಣದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಸಿಎಂ ಮಾತನಾಡಲಿದ್ದಾರೆ. ಅಸ್ಪತ್ರೆಯತ್ತ ಚಿತ್ರರಂಗದ ಗಣ್ಯರು ,ರಾಜಕೀಯ ಮುಖಂಡರು ಚಿತ್ರರಂಗದ ಚಟುವಟಿಕೆಗಳನ್ನು ಬದಿಗೊತ್ತಿ ಎಲ್ಲರೂ ವಿಕ್ರಮ್ ಆಸ್ಪತ್ರೆಯತ್ತ ಬರುತ್ತಿದ್ದು ಕ್ಷಣಕ್ಷಣಕ್ಕೂ ಪುನೀತ್ ರಾಜಕುಮಾರ ಅವರ ಆರೋಗ್ಯ

ಈ ನಟ ಈಗ ಟಾಪ್ ನಟರ ಪಟ್ಟಿಯಲ್ಲಿ ಮೊದಲಿಗ!

ಡಿಯರ್‌ ಕಾಮ್ರೇಡ್‌, ಟ್ಯಾಕ್ಸಿವಾಲ, ನೋಟಾ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಸಾಧನೆ ಮಾಡಲಿಲ್ಲ. ಆದರೂ ಬಾಲಿವುಡ್ ನ ಕೆಲವು ನಾಯಕರನ್ನು ಮಣಿಸಿ ದೇವರಕೊಂಡ ಮುನ್ನುಗ್ಗುತ್ತಿದ್ದಾರೆ.

ಮದುವೆಗೆ ಸಿದ್ಧತೆ ನಡೆಸಿದ ಕಾಜಲ್ ಅಗರ್ವಾಲ್! ಭಾವಿ ಪತಿಯೊಂದಿಗಿನ ಫೋಟೋ ಶೇರ್!

ಹೈದರಾಬಾದ್ : ನಟಿ ಕಾಜಲ್ ಅಗರ್ವಾಲ್ ಅವರು ಸದ್ಯದಲ್ಲಿಯೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ತಮ್ಮ ಕಾಜಲ್ ಅವರು ಇಲ್ಲಿಯವರೆಗೂ ತಮ್ಮ ಭಾವಿ ಪತಿಯನ್ನು ಪರಿಚಯಿಸಿರಲಿಲ್ಲ. ನಟಿ ಇದೀಗ ಅವರ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.