ಮುಂಬಯಿ : ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣದ ತನಿಖೆಗೆ ಅಂತ್ಯ ಹಾಡಲು ಸಿಬಿಐ ನಿರ್ಧರಿಸಿದೆ.

ನಟ ಸುಶಾಂತ್ ಸಾವಿನ ಪ್ರಕರಣದಲ್ಲಿ ಯಾವುದೇ ವ್ಯಕ್ತಿಯ ಕೈವಾಡ ಇರುವ ಕುರಿತು ಪುರಾವೆ ಸಿಕ್ಕಿಲ್ಲ ಎಂದು ತಂಡ ಅಭಿಪ್ರಾಯಪಟ್ಟಿದೆ ಎಂದು ತಿಳಿದು ಬಂದಿದೆ.

ತನಿಖೆಯಲ್ಲಿ ಸಿಕ್ಕಷ್ಟು ಮಾಹಿತಿಗಳನ್ನು ಶೀಘ್ರದಲ್ಲಿಯೇ ನ್ಯಾಯಾಲಯಕ್ಕೆ ಸಲ್ಲಿಸಲು ಸಿಬಿಐ ತಯಾರಿ ನಡೆಸಿದೆ. ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ ಅವರ ವಿರುದ್ಧದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಗಳ ಕುರಿತು ಮುಂದಿನ ಕ್ರಮ ತೆಗೆದುಕೊಳ್ಳುವುದರ ಕುರಿತು ನ್ಯಾಯಾಲಯ ನಿರ್ಧರಿಸುವ ಸಾಧ್ಯತೆ ಇದೆ.

ಸುಶಾಂತ್ ಸಿಂಗ್ ರಜಪೂತ್ ಅವರದ್ದು ಆತ್ಮಹತ್ಯೆಯೇ ಹೊರತು, ಕೊಲೆಯಲ್ಲ ಎಂದು ಏಮ್ಸ್ ಸಮಿತಿ ವರದಿ ನೀಡಿದ ಬೆನ್ನಲ್ಲಿಯೇ ಸಿಬಿಐ ತನ್ನ ತನಿಖೆಯನ್ನು ಮುಕ್ತಾಯಗೊಳಿಸಿ ವರದಿ ಸಲ್ಲಿಸಲು ಮುಂದಾಗಿದೆ ಎಂದು ತಿಳಿದು ಬಂದಿದೆ.

ಜೂ. 14ರಂದು ಮುಂಬಯಿನ ಬಾಂದ್ರಾದಲ್ಲಿರುವ ಅಪಾರ್ಟ್‌ ಮೆಂಟ್‌ ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಪೊಲೀಸರು ಇದು ಆತ್ಮಹತ್ಯೆ ಅಲ್ಲ ಎಂದು ಘೋಷಿಸಿದ್ದರು. ಅಲ್ಲದೇ, ಪೊಲೀಸರ ತನಿಖೆ ಇನ್ನೂ ಪ್ರಗತಿಯಲ್ಲಿರುವಾಗಲೇ ಪ್ರಕರಣವು ಸಿಬಿಐ ಕೈಯಲ್ಲಿ ಸಿಕ್ಕಿತ್ತು. ಈ ಸಂದರ್ಭದಲ್ಲಿಯೇ ಜಾರಿ ನಿರ್ದೇಶನಾಲಯ ಮತ್ತು ಮಾದ ಕವಸ್ತು ನಿಯಂತ್ರಣ ಸಂಸ್ಥೆಗಳು ಅಕ್ರಮ, ವರ್ಗಾವಣೆ ಹಾಗೂ ಮಾದಕವಸ್ತು ಸಾಗಣೆಯ ಆಯಾಮಗಳಲ್ಲಿ ತನಿಖೆ ಪ್ರಾರಂಭಿಸಿದ್ದವು.

Leave a Reply

Your email address will not be published. Required fields are marked *

You May Also Like

ಅಭಿಮಾನಿಗಳಲ್ಲಿ ಗೋಲ್ಡನ್ ಸ್ಟಾರ್ ಮನವಿ ಮಾಡಿದ್ದೇನು?

ಬೆಂಗಳೂರು : ಗೋಲ್ಡನ್ ಸ್ಟಾರ್ ಗಣೇಶ್ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಜು. 2ರಂದು ಗೋಲ್ಡನ್…

ಸಾಯುವ ಸಮಯವನ್ನು ನಟ ಸುಶಾಂತ್ ಮೊದಲೇ ನಿರ್ಧರಿಸಿದ್ದರೆ?

ಬೆಂಗಳೂರು: ನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆಯ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಹಲವರ…

ರಾಜವೀರಮದಕರಿ ನಾಯಕ ಚಿತ್ರಿಕರಣಕ್ಕೆ ಸಿದ್ಧತೆ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಜ ವೀರಮದಕರಿ ನಾಯಕ ಸಿನಿಮಾ ಮತ್ತೆ ಆಗಸ್ಟ್ ನಲ್ಲಿ ಚಿತ್ರೀಕರಣ ಆರಂಭಿಸಲು ಚಿತ್ರತಂಡ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಕೊರೋನಾದಿಂದಾಗಿ ಸಿನಿಮಾ ಚಿತ್ರಿಕರಣ ಅರ್ಧಕ್ಕೇ ಸ್ಥಗಿತಗೊಂಡಿತ್ತು. ಆಗಸ್ಟ್ ಅಷ್ಟೊತ್ತಿಗೆ ಚಿತ್ರಿಕರಣಕ್ಕೆ ಅವಕಾಶ ಸಿಗಬಹುದು ಎಂಬ ನಿರೀಕ್ಷೆಯಿಂದ ಚಿತ್ರತಂಡ ಚಿತ್ರಿಕರಣದ ತಯಾರಿ ನಡೆಸಿದೆ. ಕೊರೊನಾ ಕಾರಣದಿಂದ ಹಲವು ಮುಂಜಾಗೃತ ಕ್ರಮಗಳ ಮೂಲಕ ಸರ್ಕಾರ‌ ಚಿತ್ರಿಕರಣಕ್ಕೆ ಅನುಮತಿ ನೀಡಿದರೆ ಚಿತ್ರಿಕರಣ ಆರಂಭಿಸುವ ತಯಾರಿಯಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಇದ್ದಾರೆ.

ನಟ ಧ್ರುವ ಸರ್ಜಾ ಸಿನಿಪ್ರಿಯರ ಕ್ಷಮೆ ಯಾಚಿಸಿದ್ದು ಯಾಕೆ ಗೊತ್ತಾ?

ನಟ ಧ್ರುವ ಸರ್ಜಾ ಟಾಲಿವುಡ್ ಸಿನಿಪ್ರೀಯರಿಗೆ ಕ್ಷಮೆಯಾಚಿಸಿದ್ದಾರೆ. ಅರೇ ಯಾಕೆ ಧ್ರುವಾ ಸರ್ಜಾ ಕ್ಷಮೆಯಾಚಿಸಿದ್ದಾರೆ ಎನ್ನುವ ಕುತೂಹಲು ಮೂಡುವುದು ಸಹಜ. ಇದೇ ಮೊದಲ ಬಾರಿ ತೆಲುಗು ಪ್ರೇಕ್ಷಕರಿಗೆ ಮುಂದೆ ಧ್ರುವ ಬರಲಿದ್ದಾರೆ. ಇಂತಹ ಸಂದರ್ಭದಲ್ಲಿ ಧ್ರುವ ಕ್ಷಮೆಯಾಚಿಸಿದ್ದು ಇನ್ನಷ್ಟು ಕುತೂಹಲ ಹೆಚ್ಚಿಸಿದೆ.