ಮುಂಬಯಿ : ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣದ ತನಿಖೆಗೆ ಅಂತ್ಯ ಹಾಡಲು ಸಿಬಿಐ ನಿರ್ಧರಿಸಿದೆ.

ನಟ ಸುಶಾಂತ್ ಸಾವಿನ ಪ್ರಕರಣದಲ್ಲಿ ಯಾವುದೇ ವ್ಯಕ್ತಿಯ ಕೈವಾಡ ಇರುವ ಕುರಿತು ಪುರಾವೆ ಸಿಕ್ಕಿಲ್ಲ ಎಂದು ತಂಡ ಅಭಿಪ್ರಾಯಪಟ್ಟಿದೆ ಎಂದು ತಿಳಿದು ಬಂದಿದೆ.

ತನಿಖೆಯಲ್ಲಿ ಸಿಕ್ಕಷ್ಟು ಮಾಹಿತಿಗಳನ್ನು ಶೀಘ್ರದಲ್ಲಿಯೇ ನ್ಯಾಯಾಲಯಕ್ಕೆ ಸಲ್ಲಿಸಲು ಸಿಬಿಐ ತಯಾರಿ ನಡೆಸಿದೆ. ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ ಅವರ ವಿರುದ್ಧದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಗಳ ಕುರಿತು ಮುಂದಿನ ಕ್ರಮ ತೆಗೆದುಕೊಳ್ಳುವುದರ ಕುರಿತು ನ್ಯಾಯಾಲಯ ನಿರ್ಧರಿಸುವ ಸಾಧ್ಯತೆ ಇದೆ.

ಸುಶಾಂತ್ ಸಿಂಗ್ ರಜಪೂತ್ ಅವರದ್ದು ಆತ್ಮಹತ್ಯೆಯೇ ಹೊರತು, ಕೊಲೆಯಲ್ಲ ಎಂದು ಏಮ್ಸ್ ಸಮಿತಿ ವರದಿ ನೀಡಿದ ಬೆನ್ನಲ್ಲಿಯೇ ಸಿಬಿಐ ತನ್ನ ತನಿಖೆಯನ್ನು ಮುಕ್ತಾಯಗೊಳಿಸಿ ವರದಿ ಸಲ್ಲಿಸಲು ಮುಂದಾಗಿದೆ ಎಂದು ತಿಳಿದು ಬಂದಿದೆ.

ಜೂ. 14ರಂದು ಮುಂಬಯಿನ ಬಾಂದ್ರಾದಲ್ಲಿರುವ ಅಪಾರ್ಟ್‌ ಮೆಂಟ್‌ ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಪೊಲೀಸರು ಇದು ಆತ್ಮಹತ್ಯೆ ಅಲ್ಲ ಎಂದು ಘೋಷಿಸಿದ್ದರು. ಅಲ್ಲದೇ, ಪೊಲೀಸರ ತನಿಖೆ ಇನ್ನೂ ಪ್ರಗತಿಯಲ್ಲಿರುವಾಗಲೇ ಪ್ರಕರಣವು ಸಿಬಿಐ ಕೈಯಲ್ಲಿ ಸಿಕ್ಕಿತ್ತು. ಈ ಸಂದರ್ಭದಲ್ಲಿಯೇ ಜಾರಿ ನಿರ್ದೇಶನಾಲಯ ಮತ್ತು ಮಾದ ಕವಸ್ತು ನಿಯಂತ್ರಣ ಸಂಸ್ಥೆಗಳು ಅಕ್ರಮ, ವರ್ಗಾವಣೆ ಹಾಗೂ ಮಾದಕವಸ್ತು ಸಾಗಣೆಯ ಆಯಾಮಗಳಲ್ಲಿ ತನಿಖೆ ಪ್ರಾರಂಭಿಸಿದ್ದವು.

Leave a Reply

Your email address will not be published. Required fields are marked *

You May Also Like

ಕನ್ನಡ ಚಿತ್ರ ರಂಗದ ಹಿರಿಯ ಕಲಾವಿದ ಹುಲಿವಾನ್ ಗಂಗಾಧರಯ್ಯ ನಿಧನ!

ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಹುಲಿವಾನ್ ಗಂಗಾಧರಯ್ಯ (70) ನಿಧನ ಹೊಂದಿದ್ದಾರೆ. ನಿನ್ನೆ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಉಸಿರಾಟ ತೊಂದರೆಯಿಂದ ನಟ ಚಿರಂಜೀವಿ ಸರ್ಜಾ ಸಾವು..!

ನಟ ಚಿರಂಜೀವಿ ಸರ್ಜಾ ಉಸಿರಾಟದ ತೊಂದರೆ ಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದರು.

ಅಭಿಮಾನಿಗಳಲ್ಲಿ ಗೋಲ್ಡನ್ ಸ್ಟಾರ್ ಮನವಿ ಮಾಡಿದ್ದೇನು?

ಬೆಂಗಳೂರು : ಗೋಲ್ಡನ್ ಸ್ಟಾರ್ ಗಣೇಶ್ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಜು. 2ರಂದು ಗೋಲ್ಡನ್…

ಕಿರಿಕ್ ಬೆಡಗಿಗೆ ವಿಜಯ್ ಕಳುಹಿಸಿದ ಸಂದೇಶವೇನು?

ಬೆಂಗಳೂರು: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಅವರಿಗೆ ವಿಜಯ್ ದೇವರಕೊಂಡ ಸಂದೇಶ ಕಳುಹಿಸಿದ್ದಾರೆ. ಹೈದರಾಬಾದ್ಗೆ ಬಾ…