ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವರ್ಷಕ್ಕಿಂತಲೂ ಈ ವರ್ಷ ಶ್ರೀಮಂತರಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಆಸ್ತಿಯ ಮೌಲ್ಯ ಕಳೆದ ವರ್ಷಕ್ಕಿಂತಲೂ ಈ ವರ್ಷ ಹೆಚ್ಚಾಗಿದೆ. ಈ ವರ್ಷ ಅವರ ಆಸ್ತಿಯ ಮೌಲ್ಯ ರೂ. 36 ಲಕ್ಷ ಹೆಚ್ಚಳವಾಗಿದೆ.

ಪ್ರತಿ ವರ್ಷದಂತೆ ಈ ವರ್ಷವೂ ಅವರ ವಾರ್ಷಿಕ ಆಸ್ತಿ ವಿವರವನ್ನು ಕಾರ್ಯಾಲಯ ಸ್ವಯಂ ಪ್ರೇರಣೆಯಿಂದ ಪ್ರಕಟಿಸಿದೆ. ಈ ವರದಿಯಲ್ಲಿ 2020ರ ಜೂ. 30ರ ವರೆಗಿನ ಮಾಹಿತಿ ಕುರಿತು ವಿವರಣೆ ನೀಡಲಾಗಿದೆ.
ಬ್ಯಾಂಕ್‌ ನಲ್ಲಿ ಹೂಡಿಕೆ ಮಾಡಿರುವುದು ಮತ್ತು ಹೂಡಿಕೆ ಮಾಡಿದ ಹಣಕ್ಕೆ ಬಡ್ಡಿ ಸಿಕ್ಕಿರುವ ಕಾರಣ ಆಸ್ತಿಯ ಮೌಲ್ಯ ಏರಿಕೆಯಾಗಿದೆ. ಪ್ರಧಾನಿ ಮೋದಿ ಯಾವುದೇ ಸಾಲ ತೆಗೆದುಕೊಂಡಿಲ್ಲ ಮತ್ತು ಅವರ ಹೆಸರಿನಲ್ಲಿ ಯಾವುದೇ ವಾಹನ ಇಲ್ಲ.

2020ರ ಜೂನ್‌ 30ರ ಸಂದರ್ಭದಲ್ಲಿ ಮೋದಿಯವರ ಬಳಿ ರೂ. 31,450 ಇತ್ತು. ಗಾಂಧಿನಗರದ ಎಸ್ ಬಿಐ ಬ್ರಾಂಚ್‌ ನಲ್ಲಿರುವ ಉಳಿತಾಯ ಖಾತೆಯಲ್ಲಿ ರೂ. 3,38,173 ಹಣ ಇದೆ. ಕಳೆದ ವರ್ಷ ಇದು ಈ ಬ್ಯಾಂಕ್ ಖಾತೆಯಲ್ಲಿ ರೂ. 4,143 ಇತ್ತು. ಈ ಬ್ಯಾಂಕಿನಲ್ಲಿ ಎಫ್‌ ಡಿಆರ್‌ ಮತ್ತು ಎಂಒಡಿ ಬ್ಯಾಲೆನ್ಸ್‌ ರೂ. 1,60,28,039 ಇದೆ. ಹಿಂದಿನ ಹಣಕಾಸು ವರ್ಷದಲ್ಲಿ ಇದು ರೂ. 1,27,81,574 ಇತ್ತು. 2019 ರ ಲೋಕಸಭಾ ಚುನಾವಣೆಯ ಅಫಿಡವಿಟ್‌ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಮಾಹಿತಿಯನ್ನು ಘೋಷಿಸಿದ್ದರು.

ಅಷ್ಟೇ ಅಲ್ಲದೇ, ಎಲ್ ಅಂಡ್ ಟಿ ಇನ್ಫ್ರಾಿಸ್ಟ್ರಕ್ಚರ್ ನಲ್ಲಿ ರೂ. 20 ಸಾವಿರ ಹೂಡಿಕೆ ಮಾಡಿದ್ದಾರೆ. ನ್ಯಾಷನಲ್ ಸೇವಿಂಗ್ ಸರ್ಟಿಫಿಕೇಟ್ ಅಡಿ ರೂ. 5,18,235 ಹೂಡಿಕೆ ಮಾಡಿದ್ದಾರೆ. ಅಲ್ಲದೇ, ರೂ. 1,59,281 ಮೌಲ್ಯದ ಎಲ್ ಐಸಿ ಪ್ರೀಮಿಯಂ ಕಟ್ಟಿದ್ದಾರೆ. ಮೋದಿ ಅವರ ಬಳಿ ನಾಲ್ಕು ಚಿನ್ನದ ಉಂಗುರಗಳಿವೆ. ಅವುಗಳ ಮೌಲ್ಯ ರೂ. 1,51,875 ಆಗಿದೆ. ಪ್ರಧಾನಿ ಅವರು, ರೂ. 1,30,488 ಪಾವತಿಸಿ, ವಸತಿ ಕಟ್ಟಡವೊಂದನ್ನು ಖರೀದಿಸಿದ್ದರು. ಈ ಭೂಮಿಯ ಮೇಲೆ ಸದ್ಯ ರೂ. 2,47,208 ಹೂಡಿಕೆ ಮಾಡಿದ್ದಾರೆ. ಸದ್ಯ ಈ ಮಾರುಕಟ್ಟೆಯ ಬೆಲೆ ರೂ. 1.1 ಕೋಟಿ ಎಂದು ಅಂದಾಜಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಕೊರೊನಾ ಸುಪರ್-ಸ್ಪ್ರೆಡರ್ ಯಾರು? : ಸುಪರ್-ಸ್ಪ್ರೇಡರ್ ಎಂದರೆ ಏನು?

ಗದಗ: ದಕ್ಷಿಣ ಕೋರಿಯಾದಲ್ಲಿ ಒಂದು ಹಂತದಲ್ಲಿ ದಿಢೀರನೆ ಸೋಂಕಿತರ ಸಂಖ್ಯೆ ಹೆಚ್ಚಿ ದೇಶವೇ ಆತಂಕಕ್ಕೆ ಈಡಾಗಲು…

ಮತದಾರನಿಗೆ ಪ್ರತಾಪಗೌಡ ಮೋಸ ಮಾಡಿದ್ದಾರೆ: ಸಿದ್ಧರಾಮಯ್ಯ.

ಕ್ಷೇತ್ರದ ಮತದಾರರಿಗೆ ಮೋಸ ಮಾಡಿರುವ ಪ್ರತಾಪಗೌಡಗೆ ಉಪ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಎರಡು ತಲೆ ಹಾವು ವಶಕ್ಕೆ – ಐವರ ಬಂಧನ!

ಮೈಸೂರು : ಎರಡು ತಲೆ ಹಾವಿನೊಂದಿಗೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಇವತ್ತಿನ ಕೊರೋನಾ ಕಾವ್ಯ ಸರಣಿಗೆ ಕವನ ಕಳುಹಿಸಿದವರು ಅರುಣಕುಮಾರ ಮ ನರಗುಂದ. ಇವರು ವೃತ್ತಿಯಲ್ಲಿ ಹಿರೇಕೆರೂರಿನಲ್ಲಿ ನ್ಯಾಯಾಂಗ ಇಲಾಖೆಯ ನೌಕರ. ವೃತ್ತಿ ನ್ಯಾಯಾಂಗ ಇಲಾಖೆ ಆದರೆ ಸಾಹಿತ್ಯ ಕೃಷಿ ಇವರ ಪ್ರವೃತ್ತಿ.