ಬೆಂಗಳೂರು: ರಾಜ್ಯದ ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಸಂಭವಿಸಿರುವ ಬೆಳೆ ಹಾನಿ, ಆಸ್ತಿ ನಷ್ಟಕ್ಕೆ ಸರ್ಕಾರ ತಕ್ಷಣ ವಿಶೇಷ ಅನುದಾನ ಘೋಷಣೆ ಮಾಡಬೇಕು. ನೆರೆಪೀಡಿತ ಪ್ರದೇಶಗಳ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಅಧಿಕಾರಿಗಳು ಮತ್ತು ಸಚಿವರನ್ನು ತಕ್ಷಣವೇ ನಿಯೋಜಿಸಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಮಧ್ಯಕರ್ನಾಟಕ, ಉತ್ತರ ಕರ್ನಾಟಕದಲ್ಲಿ ತೀವ್ರ ಮಳೆಯಾಗುತ್ತಿದ್ದು ಕಲಬುರಗಿ, ವಿಜಯಪುರ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಹಲವರು ಮನೆ, ಆಸ್ತಿ, ಬೆಳೆಗಳನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಮೂಲಕ ರಾಜ್ಯ ಸರ್ಕಾರದ ಗಮನ ಸೆಳೆದಿರುವ ಅವರು, ಸತತ ಎರಡು ವರ್ಷಗಳಿಂದ ನೆರೆಯಿಂದ ತತ್ತರಿಸಿರುವ ರಾಜ್ಯದ ರೈತರು ಈ ಬಾರಿ ಮತ್ತೆ ಮಳೆಯಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ, ಮನೆ-ಮಠ ಕಳೆದುಕೊಂಡು ನೆರೆಯಿಂದ ನೊಂದ ರಾಜ್ಯದ ರೈತರ ನೆರವಿಗೆ ರಾಜ್ಯ ಸರ್ಕಾರ ಧಾವಿಸುವ ಮೂಲಕ ವಿಶ್ವಾಸ ತುಂಬುವ ಕೆಲಸವನ್ನು ಸಮರೋಪಾದಿಯಲ್ಲಿ ಕೈಗೆತ್ತಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಕೋರೋನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ನೆರೆಹಾವಳಿಯಿಂದ ರೈತರು ದಿಕ್ಕೆಟ್ಟುಹೋಗಿದ್ದಾರೆ. ಉಪಚುನಾವಣೆಗಳಿಗಿಂತ ರೈತರ ಸಂಕಷ್ಟಕ್ಕೆ ಆದ್ಯತೆಯ ಮೇರೆಗೆ ಸ್ಪಂದಿಸಿ ಸರ್ಕಾರ ತನ್ನ ಹೊಣೆಗಾರಿಕೆ ಪ್ರದರ್ಶಿಸಬೇಕಾದ ತುರ್ತು ಅಗತ್ಯವಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *

You May Also Like

ಜಿಲ್ಲೆಯಲ್ಲಿ ಚೆಲ್ಲುಭತ್ತ ನಿಧಾನಕ್ಕೆ ಕಾಲೂರಿದೆ

ದಾವಣಗೆರೆ ಮತ್ತು ಹೊನ್ನಾಳಿ ತಾಲ್ಲೂಕುಗಳಲ್ಲಿ ನಾಟಿಭತ್ತಕ್ಕಿಂತ ಚೆಲ್ಲುಭತ್ತಕ್ಕೆ ರೈತರು ಪ್ರಾಮುಖ್ಯ ನೀಡುತ್ತಿದ್ದು, ಕಡಿಮೆ ವೆಚ್ಚ, ಸುಲಭ ಕೃಷಿಗೆ ಹೇಳಿ ಮಾಡಿಸಿದಂತಿರುವ ಚೆಲ್ಲುಭತ್ತ ಪದ್ಧತಿ ಜಿಲ್ಲೆಯಲ್ಲಿ ನಿಧಾನಕ್ಕೆ ಕಾಲೂರುತ್ತಿದೆ.

ಹಿರಿಯ ಅಭಿಮಾನಿ ಭೇಟಿ ಮಾಡಿ ಭಾವುಕರಾದ ಅಪ್ಪು!

ಕಾರವಾರ : ತಮ್ಮ ನೆಚ್ಚಿನ ನಾಯಕ ನಟನಿಗಾಗಿ ಹಿರಿಯ ಜೀವವೊಂದು ಬರೋಬ್ಬರಿ 12 ವರ್ಷಗಳಿಂದ ಕಾಯುತ್ತಿತ್ತು. ಕೊನೆಗೂ ಶಬರಿಗೆ, ಅಯ್ಯಪ್ಪನ ದರ್ಶನವಾದಂತೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕುಮಾರ್ ತಮ್ಮ ಅಭಿಮಾನಿಗೆ ಭೇಟಿಯಾಗಿದ್ದಾರೆ.

ವಿಜಯಪುರ ಜಿಲ್ಲೆ: ಜಲಧಾರೆ ಯೋಜನೆಗೆ 2400 ಕೋಟಿ ಹಣ – ಶಾಸಕ ಶಿವಾನಂದ ಪಾಟೀಲ

ಆಲಮಟ್ಟಿ : ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇನ್ನಷ್ಟು ಉತ್ತಮ ರೀತಿಯಲ್ಲಿ ಸಾಗಲು ಜಲ…

ಚಸ್ ಅಲ್ಲೋ ಮಾರಾಯ ಚೀಯರ್ಸ್ ಅನ್ನು ಶು..!! ಇಂಗ್ಲೀಷ್ ಬ್ಯಾಡ ಕನ್ನಡದಾಗ ಹೇಳು..!

ಶು..!, ಕರ್ನಾಟಕದಾಗ ಹುಟ್ಟಿ ಚೆಸ್ ಅಂತ ಇಂಗ್ಲೀಷ್ ನ್ಯಾಗ್ ಹೇಳ ಬ್ಯಾಡ್ರಿ ಅಂದ, ಕನ್ನಡಾಭಿಮಾನಿಗಳು ಯಾರಾದ್ರು ಕೇಳಿಸಿಕೊಂಡ್ರ ಕುಡುಕರೆಲ್ಲ ಕನ್ನಡ ಬಿಟ್ಟು ಇಂಗ್ಲೀಷ್ ಮಾತಾಡಾಕತ್ಯಾರ ಅಂತ ಸ್ಟ್ರೈಕ್ ಮಾಡಿ ಬಾರ್ ಬಂದ್ ಮಾಡಿಸಿಗಿಡಿಸ್ಯಾರೋ ಮಾರಾಯ್ರ.