ಅಬುಧಾಬಿ : ಕೆ.ಎಲ್. ರಾಹುಲ್ ಅವರು ಮುಂದಿನ ಐಪಿಎಲ್ ನಲ್ಲಿ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಹಾಗೂ ಎಬಿಡಿ ವಿಲಿಯರ್ಸ್ ಅವರನ್ನು ಕೈ ಬಿಡಬೇಕು ಎಂದು ಹೇಳಿದ್ದಾರೆ.

ಆರಂಭದಲ್ಲಿ ನಾನು ನರ್ಸವಸ್ ಆಗಿದ್ದೆ. ಸದ್ಯ ಸಂತೋಷದಿಂದ ನಾನು ಟೂರ್ನಿ ಎದುರಿಸಿದ್ದೇನೆ. ಟೂರ್ನಿ ಆರಂಭವಾದ ಬಳಿಕ ಎಲ್ಲಾ ಸಂದೇಹಗಳು, ಭಯ ದೂರವಾಗಿವೆ. ಮಹಿ ಭಾಯ್ ಹಾಗೂ ನಿಮ್ಮಿಂದ ಆರಂಭದಿಂದಲೂ ಸಾಕಷ್ಟು ಕಲಿತ್ತಿದ್ದೇನೆ ಎಂದು ಕೊಹ್ಲಿಗೆ ಹೇಳಿದ್ದಾರೆ.

ಐಪಿಎಲ್ ನೀವು ನೋಡಲು ಬಯಸುವ ಬದಲಾವಣೆಗಳು ಯಾವುವು ಎಂದು ಕೇಳಿದ್ದ ಕೊಹ್ಲಿ ಅವರ ಪ್ರಶ್ನೆಗೆ ರಾಹುಲ್ ಉತ್ತರಿಸಿದ್ದಾರೆ. ಐಪಿಎಲ್‍ ನಲ್ಲಿ 5 ಸಾವಿರ ರನ್ ಗಳಿಸಿದ ಆಟಗಾರರನ್ನು ಬ್ಯಾನ್ ಮಾಡಬೇಕು. ಈ ಸಾಲಿನಲ್ಲಿ ಕೊಹ್ಲಿ ಹಾಗೂ ಎಬಿಡಿ ಸೇರಿದ್ದಾರೆ. ಹೀಗಾದರೆ ಸಾಧನೆ ಮಾಡಲು ಉಳಿದವರಿಗೂ ಅವಕಾಶ ಸಿಗಲಿದೆ ಎಂದು ಕೊಹ್ಲಿ ಕಾಲು ಎಳೆದಿದ್ದಾರೆ. 

ಯಾವುದೇ ಆಟಗಾರ 100 ಮೀಟರ್ ಗೂ ಹೆಚ್ಚು ದೂರ ಸಿಕ್ಸರ್ ಸಿಡಿಸಿದರೆ ಅದಕ್ಕೆ ಹೆಚ್ಚು ರನ್ ನೀಡುವ ವ್ಯವಸ್ಥೆ ಮಾಡಬೇಕು ಎಂದು ಕೂಡ ರಾಹುಲ್ ಹೇಳಿದ್ದಾರೆ. 

ನಾಯಕತ್ವ ವಹಿಸಿಕೊಳ್ಳುವುದು ನಮ್ಮ ವ್ಯಕ್ತಿತ್ವವನ್ನು ವೇಗವಾಗಿ ಬೆಳೆಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ರಾಹುಲ್ ಹೇಳಿದ್ದಾರೆ. ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ಪಂಜಾಬ್ ತಂಡ ಉತ್ತಮವಾಗಿ ಆಡುತ್ತಿದ್ದರೂ ಸೋಲು ಅವರ ಬೆನ್ನು ಬಿದ್ದಿದೆ. 7 ಪಂದ್ಯಗಳನ್ನು ಆಡಿರುವ ಪಂಜಾಬ್ ತಂಡ ಕೇವಲ ಒಂದು ಗೆಲುವು ಮಾತ್ರ ದಾಖಲಿಸಿದೆ. 

Leave a Reply

Your email address will not be published. Required fields are marked *

You May Also Like

ಕ್ರಿಕೆಟ್ ನಲ್ಲಿ ಧೋನಿ ಸ್ಥಾನದಲ್ಲಿ ಧೋನಿ ಮಾತ್ರ ಇದ್ದಾರೆ…ಬೇರೆ ಯಾರೂ ಇಲ್ಲ ಎಂದ ರಾಹುಲ್!

ನಾಲ್ಕು ಬಾರಿ ಚಾಂಪಿಯನ್ ಆಗಿರುವ ಮುಂಬಯಿ ಇಂಡಿಯನ್ಸ್ ತಂಡದ ವಿರುದ್ಧ ಎರಡು ಸೂಪರ್ ಓವರ್ ಆಡಿ ಭರ್ಜರಿಯಾಗಿ ಗೆದ್ದು ಬೀಗಿರುವ ಖುಷಿಯಲ್ಲಿರುವ ಪ್ರೀತಿಯ ಹುಡುಗರು, ಈಗ ಆತ್ಮವಿಶ್ವಾಸದಲ್ಲಿದ್ದಾರೆ.

ನಿಡಗುಂದಿ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟ
ಸದೃಢ ಮನಸ್ಸು ವಿಕಸನಕ್ಕೆ ಕ್ರೀಡೆಗಳು ಸಹಕಾರಿ- ಬಿ.ಟಿ.ಗೌಡರ

ಉತ್ತರಪ್ರಭ ಸುದ್ದಿ ನಿಡಗುಂದಿ: ಕ್ರೀಡೆಗಳಿಂದ ಸದೃಢ ದೇಹ,ಮನಸ್ಸು ಹೊಂದಬಹುದು. ಅವು ಶಾರೀರಿಕ ವಿಕಸನಕ್ಕೆ ಪ್ರೇರಕವಾಗಿವೆ ಎಂದು…

ಸೋಲಿನ ಸುಳಿಗೆ ಸಿಲುಕಿದ ಧೋನಿ ವಿರುದ್ಧ ಟೀಕೆಗಳ ಮಹಾಪೂರ!

ಬೆಂಗಳೂರು : ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಳಪೆ ಪ್ರದರ್ಶನ ತೋರುತ್ತಿರುವುದಕ್ಕೆ ಭಾರೀ ಟೀಕೆಗಳು ವ್ಯಕ್ತವಾಗುತ್ತಿವೆ.

ಐಪಿಎಲ್ ನಲ್ಲಿ ಮತ್ತೊಂದು ದಾಖಲೆಗೆ ಸಾಕ್ಷಿಯಾದ ಕನ್ನಡಿಗ!

ದುಬೈ : ಕಿಂಗ್ಸ್ ಇಲೆವೆನ್ ಪಂಜಾಬ್‌ ತಂಡದ ನಾಯಕ ಕೆ.ಎಲ್‌. ರಾಹುಲ್‌ ಅವರು ಭಾರತದ ಪರ ಮತ್ತೊಂದು ದಾಖಲೆ ಬರೆದಿದ್ದಾರೆ.