ಅಬುಧಾಬಿ : ಕೆ.ಎಲ್. ರಾಹುಲ್ ಅವರು ಮುಂದಿನ ಐಪಿಎಲ್ ನಲ್ಲಿ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಹಾಗೂ ಎಬಿಡಿ ವಿಲಿಯರ್ಸ್ ಅವರನ್ನು ಕೈ ಬಿಡಬೇಕು ಎಂದು ಹೇಳಿದ್ದಾರೆ.

ಆರಂಭದಲ್ಲಿ ನಾನು ನರ್ಸವಸ್ ಆಗಿದ್ದೆ. ಸದ್ಯ ಸಂತೋಷದಿಂದ ನಾನು ಟೂರ್ನಿ ಎದುರಿಸಿದ್ದೇನೆ. ಟೂರ್ನಿ ಆರಂಭವಾದ ಬಳಿಕ ಎಲ್ಲಾ ಸಂದೇಹಗಳು, ಭಯ ದೂರವಾಗಿವೆ. ಮಹಿ ಭಾಯ್ ಹಾಗೂ ನಿಮ್ಮಿಂದ ಆರಂಭದಿಂದಲೂ ಸಾಕಷ್ಟು ಕಲಿತ್ತಿದ್ದೇನೆ ಎಂದು ಕೊಹ್ಲಿಗೆ ಹೇಳಿದ್ದಾರೆ.

ಐಪಿಎಲ್ ನೀವು ನೋಡಲು ಬಯಸುವ ಬದಲಾವಣೆಗಳು ಯಾವುವು ಎಂದು ಕೇಳಿದ್ದ ಕೊಹ್ಲಿ ಅವರ ಪ್ರಶ್ನೆಗೆ ರಾಹುಲ್ ಉತ್ತರಿಸಿದ್ದಾರೆ. ಐಪಿಎಲ್‍ ನಲ್ಲಿ 5 ಸಾವಿರ ರನ್ ಗಳಿಸಿದ ಆಟಗಾರರನ್ನು ಬ್ಯಾನ್ ಮಾಡಬೇಕು. ಈ ಸಾಲಿನಲ್ಲಿ ಕೊಹ್ಲಿ ಹಾಗೂ ಎಬಿಡಿ ಸೇರಿದ್ದಾರೆ. ಹೀಗಾದರೆ ಸಾಧನೆ ಮಾಡಲು ಉಳಿದವರಿಗೂ ಅವಕಾಶ ಸಿಗಲಿದೆ ಎಂದು ಕೊಹ್ಲಿ ಕಾಲು ಎಳೆದಿದ್ದಾರೆ. 

ಯಾವುದೇ ಆಟಗಾರ 100 ಮೀಟರ್ ಗೂ ಹೆಚ್ಚು ದೂರ ಸಿಕ್ಸರ್ ಸಿಡಿಸಿದರೆ ಅದಕ್ಕೆ ಹೆಚ್ಚು ರನ್ ನೀಡುವ ವ್ಯವಸ್ಥೆ ಮಾಡಬೇಕು ಎಂದು ಕೂಡ ರಾಹುಲ್ ಹೇಳಿದ್ದಾರೆ. 

ನಾಯಕತ್ವ ವಹಿಸಿಕೊಳ್ಳುವುದು ನಮ್ಮ ವ್ಯಕ್ತಿತ್ವವನ್ನು ವೇಗವಾಗಿ ಬೆಳೆಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ರಾಹುಲ್ ಹೇಳಿದ್ದಾರೆ. ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ಪಂಜಾಬ್ ತಂಡ ಉತ್ತಮವಾಗಿ ಆಡುತ್ತಿದ್ದರೂ ಸೋಲು ಅವರ ಬೆನ್ನು ಬಿದ್ದಿದೆ. 7 ಪಂದ್ಯಗಳನ್ನು ಆಡಿರುವ ಪಂಜಾಬ್ ತಂಡ ಕೇವಲ ಒಂದು ಗೆಲುವು ಮಾತ್ರ ದಾಖಲಿಸಿದೆ. 

Leave a Reply

Your email address will not be published. Required fields are marked *

You May Also Like

ಹಾರ್ದಿಕ್ ಪಾಂಡ್ಯಗೆ ಗೆಳತಿಯ ಸಂದೇಶ!

ಮುಂಬಯಿ : ನೀವು ನನ್ನ ಪೂರ್ಣಗೊಳಿಸಿದ್ದೀರಿ ಎಂದು ಭಾರತ ಕ್ರಿಕೆಟ್ ತಂಡದ ಆಲ್ರೌಂವಡರ್ ಹಾರ್ದಿಕ್ ಪಾಂಡ್ಯ ಅವರ ಗೆಳತಿ ನತಾಶಾ ಸ್ಟಾಂಕೋವಿಕ್ ಹೇಳಿದ್ದಾರೆ.

ಅಸಾಧ್ಯ ಎಂಬುವುದು ಯಾವುದೂ ಇಲ್ಲ..! ಪಂಜಾಬ್ – ರಾಜಸ್ಥಾನ್ ಮ್ಯಾಚ್ ನೋಡಿದವರಿಗೆ ಹೀಗೆ ಅನಿಸಲೇಬೇಕು!

ಕ್ರಿಕೆಟ್ ಅಂಗಳದಲ್ಲಿ ಯಾವುದೂ ಅಸಾಧ್ಯವಲ್ಲ ಎಂಬುವುದಕ್ಕೆ ಸಾಕಷ್ಟು ಉದಾಹರಣೆಗಳು ಸಿಕ್ಕಿವೆ. ಈ ಹಿಂದೆ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿ ಸಂದರ್ಭದಲ್ಲಿ 400ಕ್ಕೂ ಅಧಿಕ ರನ್ ಟಾರ್ಗೆಟ್ ನೀಡಿದ್ದ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ದಕ್ಷಿಣ ಆಫ್ರಿಕಾ ಗೆದ್ದಂತೆ ಇಲ್ಲಿ ಪಂಜಾಬ್ ನ್ನು ಮಣಿಸಿ ರಾಜಸ್ಥಾನ್ ಗೆದ್ದು ಬೀಗಿದೆ.

ಕ್ಯಾಪ್ಟನ್ ಕೂಲ್ ಗೆ ಕ್ರೀಕೆಟ್ ದಿಗ್ಗಜರ ಅಭಿನಂದನೆ

ಕ್ರೀಕೆಟ್ ನಲ್ಲಿ ಭಾರತದ ಸಾಧನೆಯನ್ನು ಹೆಚ್ಚಿಸಿದ ಕೀರ್ತಿ ಎಂ.ಎಸ್.ಧೋನಿ ಅವರಿಗೆ ಸಲ್ಲುತ್ತದೆ. ಇತ್ತಿಚೆಗಷ್ಟೆ ವೃತ್ತಿ ಜೀವನಕ್ಕೆ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದ ಧೋನಿ ನಡೆಯಿಂದ ಅಭಿಮಾನಿಗಳಿಗೆ ಬೇಸರ ಮೂಡಿತ್ತು. ಧೋನಿ ಕ್ರೀಡಾ ಸಾಧನೆ ಬಗ್ಗೆ ಬಿಸಿಸಿಐ ಮೆಚ್ಚುಗೆ ವ್ಯಕ್ತ ಪಡಿಸಿದೆ.

ವಿರಾಟ್ ಕೊಹ್ಲಿ ಬಗ್ಗೆ ಕೋಚ್ ಹೇಳಿದ್ದೇನು?

ಮುಂಬಯಿ : ಭಾರತ ತಂಡದ ನಾಯಕ ವಿರಾಟ್ ಪರಿಸ್ಥಿತಿಗೆ ತಕ್ಕಂತೆ ತಮ್ಮ ಆಟ ಬದಲಾಯಿಸುತ್ತಾರೆ. ಇದೇ…