ಸಂಪತ್ ರಾಜ್ ನನ್ನು ಪಕ್ಷದಿಂದ ಉಚ್ಛಾಟಿಸಬೇಕು – ಅಖಂಡ ಶ್ರೀನಿವಾಸಮೂರ್ತಿ

ಬೆಂಗಳೂರು : ಮಾಜಿ ಮೇಯರ್ ಸಂಪತ್ ರಾಜ್ ರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನವಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪರಾಧಿ ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಅವರು ಅಪರಾಧಿನೆ. ಅವರು ಯಾರೇ ಆಗಿದ್ದರೂ ಶಿಕ್ಷೆ ನೀಡಬೇಕು. ನಾನು, ನನ್ನ ರಾಜಕೀಯ ಜೀವನದಲ್ಲಿ ಯಾರೊಂದಿಗೂ ಇದುವರೆಗೂ ದ್ವೇಷದ ರಾಜಕಾರಣ ಮಾಡಿಲ್ಲ. ನಾನು ಕೇವಲ ಶಾಸಕನೆಂದು ಭಾವಿಸಿ ಕೆಲಸ ಮಾಡಿಲ್ಲ. ಜನರ ಸೇವಕನಾಗಿ ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ.

ನಾನು, ಕಾರ್ಪೊರೇಟರ್ ಗಳೊಂದಿಗೆ ಚೆನ್ನಾಗಿಯೇ ಇದ್ದೆ. ನನ್ನನ್ನು ಹತ್ಯೆ ಮಾಡುವಂತಹ ಯಾವ ಕೆಲಸಗಳನ್ನೂ ನಾನು ಮಾಡಿಲ್ಲ. ನಾನು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಜಮೀರ್ ಬಳಿ ಹೋಗಿ ಒತ್ತಾಯ ಮಾಡುತ್ತೇನೆ. ನನ್ನ ಪ್ರಾಣ ತೆಗಿಯಲು ಮುಂದಾಗಿದ್ದವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಆಗ್ರಹಿಸಿದ್ದಾರೆ.

ನಾನು ಪಕ್ಷ ಸೇರುವ ಸಂದರ್ಭದಲ್ಲಿಯೂ ಇವರು ಪ್ರತಿಭಟನೆ ಮಾಡಿದ್ದರು. ಆದರೆ, ಇವರು ಹೀಗೆ ಮಾಡುತ್ತಾರೆ ಎಂಬುವುದು ನನಗೆ ಗೊತ್ತಿಲ್ಲ. ಇಂತಹ ವ್ಯಕ್ತಿಗಳಿಂದ ಪಕ್ಷಕ್ಕೆ ಕೆಟ್ಟ ಹೆಸರು ಬರುತ್ತದೆ. ಹೀಗಾಗಿ ಇಂತಹ ವ್ಯಕ್ತಿಗಳು ಪಕ್ಷದಲ್ಲಿ ಇರಬಾರದು ಎಂದು ಮನವಿ ಮಾಡಿದ್ದಾರೆ.

Exit mobile version