ಬೆಂಗಳೂರು : ಮಾಜಿ ಮೇಯರ್ ಸಂಪತ್ ರಾಜ್ ರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನವಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪರಾಧಿ ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಅವರು ಅಪರಾಧಿನೆ. ಅವರು ಯಾರೇ ಆಗಿದ್ದರೂ ಶಿಕ್ಷೆ ನೀಡಬೇಕು. ನಾನು, ನನ್ನ ರಾಜಕೀಯ ಜೀವನದಲ್ಲಿ ಯಾರೊಂದಿಗೂ ಇದುವರೆಗೂ ದ್ವೇಷದ ರಾಜಕಾರಣ ಮಾಡಿಲ್ಲ. ನಾನು ಕೇವಲ ಶಾಸಕನೆಂದು ಭಾವಿಸಿ ಕೆಲಸ ಮಾಡಿಲ್ಲ. ಜನರ ಸೇವಕನಾಗಿ ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ.

ನಾನು, ಕಾರ್ಪೊರೇಟರ್ ಗಳೊಂದಿಗೆ ಚೆನ್ನಾಗಿಯೇ ಇದ್ದೆ. ನನ್ನನ್ನು ಹತ್ಯೆ ಮಾಡುವಂತಹ ಯಾವ ಕೆಲಸಗಳನ್ನೂ ನಾನು ಮಾಡಿಲ್ಲ. ನಾನು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಜಮೀರ್ ಬಳಿ ಹೋಗಿ ಒತ್ತಾಯ ಮಾಡುತ್ತೇನೆ. ನನ್ನ ಪ್ರಾಣ ತೆಗಿಯಲು ಮುಂದಾಗಿದ್ದವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಆಗ್ರಹಿಸಿದ್ದಾರೆ.

ನಾನು ಪಕ್ಷ ಸೇರುವ ಸಂದರ್ಭದಲ್ಲಿಯೂ ಇವರು ಪ್ರತಿಭಟನೆ ಮಾಡಿದ್ದರು. ಆದರೆ, ಇವರು ಹೀಗೆ ಮಾಡುತ್ತಾರೆ ಎಂಬುವುದು ನನಗೆ ಗೊತ್ತಿಲ್ಲ. ಇಂತಹ ವ್ಯಕ್ತಿಗಳಿಂದ ಪಕ್ಷಕ್ಕೆ ಕೆಟ್ಟ ಹೆಸರು ಬರುತ್ತದೆ. ಹೀಗಾಗಿ ಇಂತಹ ವ್ಯಕ್ತಿಗಳು ಪಕ್ಷದಲ್ಲಿ ಇರಬಾರದು ಎಂದು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಲಾರಿಯಲ್ಲಿದ್ದ ಮಶೀನ್ ಗೆ ಬೆಂಕಿ

ಚಲಿಸುತ್ತಿದ್ದ ಲಾರಿಯಲ್ಲಿದ್ದ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಗೃಹ ಸಚಿವರ ತವರಲ್ಲಿ ಐಸ್ ಲಗಾ ಐಸಾ..! ಇನ್ನೂ ಸ್ವಲ್ಪ ಐಸಾ..!

ಐಸ್ ಲಗಾ ಐಸಾ..! ಇನ್ನೂ ಸ್ವಲ್ಪ ಐಸಾ..! ತಳ್ಳದೆ ಸ್ಟಾರ್ಟ್ ಆಗ್ತಿಲ್ಲಾ ಕರೊನಾ ವಾರಿಯರ್ಸ್ ರಥ..…

ಭಾರತ ಮನು ಕುಲದ ಒಳಿತಿಗಾಗಿ ಶ್ರಮಿಸುತ್ತಿದೆ – ಮೋದಿ

ಇಂದು ನಡೆದ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದ್ದಾರೆ.

ಗದಗನಲ್ಲಿ ಮತ್ತೆ ಇಬ್ಬರಿಗೆ ಕೊರೋನಾ ಪಾಸಿಟಿವ್

ಗದಗ: ಜಿಲ್ಲೆಯಲ್ಲಿ ಮತ್ತೆ ಎರಡು ಕೊರೋನಾ ಪಾಸಿಟಿವ್ ದೃಢಪಟ್ಟಿವೆ‌. ಈ ಮೂಲಕ ಸೋಂಕಿತರ ಸಂಖ್ಯೆ 20…