ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ – ಕಾಲೇಜುಗಳು ತೆರೆಯುವ ಮುನ್ಸೂಚನೆ ಇನ್ನೂ ಸಿಗುತ್ತಿಲ್ಲ. ಆದರೆ, ನವೆಂಬರ್ ನಲ್ಲಿ ತೆರೆಯುವ ಚಿಂತನೆ ಸರ್ಕಾರದ ಮುಂದೆ ಇದೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.

ನಗರದಲ್ಲಿ ಪ್ರತಿಭಟನೆ ನಡೆಸುತ್ತಿರುವ ಪಿಯುಸಿ ಉಪನ್ಯಾಸಕ ಅಭ್ಯರ್ಥಿಗಳನ್ನು ಭೇಟಿ ಮಾಡಿದ ನಂತರ ಮಾತನಾಡಿದ ಅವರು, ಸದ್ಯ ರಾಜ್ಯದಲ್ಲಿ ಕೊರೊನಾ ಇದ್ದರೂ ಕೌನ್ಸಲಿಂಗ್ ಮಾಡಲಾಗಿದೆ. ಹೀಗಾಗಿ ಆದೇಶ ಪತ್ರದ ಬಗ್ಗೆ ಯಾರೂ ಆತಂಕ ವ್ಯಕ್ತಪಡಿಸಬಾರದು. ಕಾಲೇಜುಗಳು ಪ್ರಾರಂಭವಾದ ಕೂಡಲೇ ಆದೇಶ ಪ್ರತಿ ನೀಡಲಾಗುವುದು ಎಂದು ಉಪನ್ಯಾಸಕರಿಗೆ ಭರವಸೆ ನೀಡಿದರು. 

ಈ ಸಂದರ್ಭದಲ್ಲಿ ಆದೇಶ ಪ್ರತಿಗೆ ಪ್ರತಿಭಟನಾ ನಿರತರು ಪಟ್ಟು ಹಿಡಿದರು. ಆಗ ನೂರಕ್ಕೆ ನೂರರಷ್ಟು ಕಾಲೇಜು ಪ್ರಾರಂಭವಾಗಲಿವೆ. ಪರೀಕ್ಷೆಗಳು ನಡೆಯಲಿವೆ. ಶೈಕ್ಷಣಿಕ ವರ್ಷವೂ ಪ್ರಾರಂಭವಾಗಲಿದೆ. ಹೀಗಾಗಿ ಯಾರಿಗೂ ಅನುಮಾನ ಬೇಡ. ನವೆಂಬರ್ ನಲ್ಲಿ ಕಾಲೇಜು ಪ್ರಾರಂಭಿಸುವ ಚಿಂತನೆ ನಡೆದಿದೆ. ಸಿಎಂ ಅವರೊಂದಿಗೆ ಮುಂದಿನ ವಾರ ಸಭೆ ನಡೆಯಲಿದ್ದು, ಕಾಲೇಜು ಪ್ರಾರಂಭಿಸುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು. 

Leave a Reply

Your email address will not be published. Required fields are marked *

You May Also Like

ಹಾಲಕೆರೆ ಅಭಿನವ ಅನ್ನದಾನ ಶ್ರೀ ಗಳು ಲಿಂಗೈಕ್ಯ

ಲಿಂಗೈಕ್ಯ ಶ್ರೀ ಗಳ ಅಗಲಿಕೆ ರೋಣ ಕ್ಷೇತ್ರದ ಶಾಸಕ ಕಳಕಪ್ಪ ಜಿ,ಬಂಡಿ ಹಾಗೂ ಮಾಜಿ ಶಾಸಕ ಜಿ,ಎಸ್,ಪಾಟೀಲ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದರು.

ವಿದ್ಯುತ್ ನಿಲುಗಡೆ

110 ಕೆವ್ಹಿ ಶಿರಹಟ್ಟಿ ಉಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ಮಾ.16 ರಂದು ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಚೀನಾ – ಭಾರತೀಯ ಸೈನಿಕರ ನಡುವೆ ಸಂಘರ್ಷ – 76 ಸೈನಿಕರಿಗೆ ಗಾಯ!

ಹೊಸದೆಹಲಿ: ಲಡಾಖ್‌ನ ಗಲ್ವಾನ್‌ ಕಣಿವೆ ಭಾರತ ಹಾಗೂ ಚೀನಾ ಸೈನಿಕರ ನಡುವೆ ನಡೆದ ಕಾಳಗದಲ್ಲಿ 76…

ಗದಗ ಜಿಲ್ಲೆಯಲ್ಲಿಂದು 30 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 30 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 170…