ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ – ಕಾಲೇಜುಗಳು ತೆರೆಯುವ ಮುನ್ಸೂಚನೆ ಇನ್ನೂ ಸಿಗುತ್ತಿಲ್ಲ. ಆದರೆ, ನವೆಂಬರ್ ನಲ್ಲಿ ತೆರೆಯುವ ಚಿಂತನೆ ಸರ್ಕಾರದ ಮುಂದೆ ಇದೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.

ನಗರದಲ್ಲಿ ಪ್ರತಿಭಟನೆ ನಡೆಸುತ್ತಿರುವ ಪಿಯುಸಿ ಉಪನ್ಯಾಸಕ ಅಭ್ಯರ್ಥಿಗಳನ್ನು ಭೇಟಿ ಮಾಡಿದ ನಂತರ ಮಾತನಾಡಿದ ಅವರು, ಸದ್ಯ ರಾಜ್ಯದಲ್ಲಿ ಕೊರೊನಾ ಇದ್ದರೂ ಕೌನ್ಸಲಿಂಗ್ ಮಾಡಲಾಗಿದೆ. ಹೀಗಾಗಿ ಆದೇಶ ಪತ್ರದ ಬಗ್ಗೆ ಯಾರೂ ಆತಂಕ ವ್ಯಕ್ತಪಡಿಸಬಾರದು. ಕಾಲೇಜುಗಳು ಪ್ರಾರಂಭವಾದ ಕೂಡಲೇ ಆದೇಶ ಪ್ರತಿ ನೀಡಲಾಗುವುದು ಎಂದು ಉಪನ್ಯಾಸಕರಿಗೆ ಭರವಸೆ ನೀಡಿದರು. 

ಈ ಸಂದರ್ಭದಲ್ಲಿ ಆದೇಶ ಪ್ರತಿಗೆ ಪ್ರತಿಭಟನಾ ನಿರತರು ಪಟ್ಟು ಹಿಡಿದರು. ಆಗ ನೂರಕ್ಕೆ ನೂರರಷ್ಟು ಕಾಲೇಜು ಪ್ರಾರಂಭವಾಗಲಿವೆ. ಪರೀಕ್ಷೆಗಳು ನಡೆಯಲಿವೆ. ಶೈಕ್ಷಣಿಕ ವರ್ಷವೂ ಪ್ರಾರಂಭವಾಗಲಿದೆ. ಹೀಗಾಗಿ ಯಾರಿಗೂ ಅನುಮಾನ ಬೇಡ. ನವೆಂಬರ್ ನಲ್ಲಿ ಕಾಲೇಜು ಪ್ರಾರಂಭಿಸುವ ಚಿಂತನೆ ನಡೆದಿದೆ. ಸಿಎಂ ಅವರೊಂದಿಗೆ ಮುಂದಿನ ವಾರ ಸಭೆ ನಡೆಯಲಿದ್ದು, ಕಾಲೇಜು ಪ್ರಾರಂಭಿಸುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು. 

Leave a Reply

Your email address will not be published. Required fields are marked *

You May Also Like

ನಾಳೆ ಮದುವೆ ಇತ್ತು: ಆದ್ರೆ ಇಂದು ವಧುವಿನ ತಂದೆ, ತಂಗಿಗೆ ಸೋಂಕು ಪತ್ತೆ..!

ಯಾದಗಿರಿ: ಕೊರೊನಾ ವೈರಸ್, ಈಗ ಜಿಲ್ಲೆಯ ಮದುವೆ ಮನೆಯೊಂದರ ಬಾಗಿಲಿಗೆ ತೆರಳಿದೆ. ನಾಳೆ ಮದುವೆಯಾಗಬೇಕಿದ್ದ ವಧುವಿನ…

ಕುಡಿದ ಮತ್ತಿನಲ್ಲಿ ಮಹಿಳೆಯ ಜೀವಕ್ಕೆ ಕುತ್ತು ತಂದ ಪೊಲೀಸ್!

ನವದೆಹಲಿ : ಕುಡಿದ ಮತ್ತಿನಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು ವೇಗವಾಗಿ ಕಾರು ಚಲಾಯಿಸಿ…

ವಲಸೆ ಕಾರ್ಮಿಕರಿಗೆ ವಸತಿ ಸೌಕರ್ಯ: 2 ಎಕರೆ ನಿವೇಶನ ವ್ಯವಸ್ಥೆಗೆ ಚಿಂತನೆ

ಹೊರರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಉದ್ಯೋಗ ಅರಸಿ ಮಂಗಳೂರಿಗೆ ಆಗಮಿಸುವ ಕಾರ್ಮಿಕರಿಗೆ ಸೂಕ್ತ ವಸತಿ ವ್ಯವಸ್ಥೆಯನ್ನು ಸರಕಾರದ ವತಿಯಿಂದಲೇ ಮಾಡಿ ಕೊಡಲು ನಿರ್ಧರಿಸಲಾಗಿದ್ದು, ಯೋಜನೆ ಸಿದ್ಧಪಡಿಸಲಾಗುತ್ತಿದೆ.

ಕೊರೊನಾ ಸೋಂಕು: ಗದಗನಲ್ಲಿಂದು ಇಬ್ಬರು ಬಿಡುಗಡೆ

ಗದಗ: ಜಿಲ್ಲೆಯಲ್ಲಿ ಕೊವಿಡ್-19 ಸೋಂಕಿನಿಂದ ಗುಣಮುಖರಾಗಿ ಇಂದು ಮತ್ತಿಬ್ಬರು ಬಿಡುಗಡೆ ಹೊಂದಿದರು. ಪಿ-1745(17 ವರ್ಷ), ಪಿ-1795 (16 ವರ್ಷ) ಇಬ್ಬರು ಯುವಕರು ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು.