ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ – ಕಾಲೇಜುಗಳು ತೆರೆಯುವ ಮುನ್ಸೂಚನೆ ಇನ್ನೂ ಸಿಗುತ್ತಿಲ್ಲ. ಆದರೆ, ನವೆಂಬರ್ ನಲ್ಲಿ ತೆರೆಯುವ ಚಿಂತನೆ ಸರ್ಕಾರದ ಮುಂದೆ ಇದೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.

ನಗರದಲ್ಲಿ ಪ್ರತಿಭಟನೆ ನಡೆಸುತ್ತಿರುವ ಪಿಯುಸಿ ಉಪನ್ಯಾಸಕ ಅಭ್ಯರ್ಥಿಗಳನ್ನು ಭೇಟಿ ಮಾಡಿದ ನಂತರ ಮಾತನಾಡಿದ ಅವರು, ಸದ್ಯ ರಾಜ್ಯದಲ್ಲಿ ಕೊರೊನಾ ಇದ್ದರೂ ಕೌನ್ಸಲಿಂಗ್ ಮಾಡಲಾಗಿದೆ. ಹೀಗಾಗಿ ಆದೇಶ ಪತ್ರದ ಬಗ್ಗೆ ಯಾರೂ ಆತಂಕ ವ್ಯಕ್ತಪಡಿಸಬಾರದು. ಕಾಲೇಜುಗಳು ಪ್ರಾರಂಭವಾದ ಕೂಡಲೇ ಆದೇಶ ಪ್ರತಿ ನೀಡಲಾಗುವುದು ಎಂದು ಉಪನ್ಯಾಸಕರಿಗೆ ಭರವಸೆ ನೀಡಿದರು. 

ಈ ಸಂದರ್ಭದಲ್ಲಿ ಆದೇಶ ಪ್ರತಿಗೆ ಪ್ರತಿಭಟನಾ ನಿರತರು ಪಟ್ಟು ಹಿಡಿದರು. ಆಗ ನೂರಕ್ಕೆ ನೂರರಷ್ಟು ಕಾಲೇಜು ಪ್ರಾರಂಭವಾಗಲಿವೆ. ಪರೀಕ್ಷೆಗಳು ನಡೆಯಲಿವೆ. ಶೈಕ್ಷಣಿಕ ವರ್ಷವೂ ಪ್ರಾರಂಭವಾಗಲಿದೆ. ಹೀಗಾಗಿ ಯಾರಿಗೂ ಅನುಮಾನ ಬೇಡ. ನವೆಂಬರ್ ನಲ್ಲಿ ಕಾಲೇಜು ಪ್ರಾರಂಭಿಸುವ ಚಿಂತನೆ ನಡೆದಿದೆ. ಸಿಎಂ ಅವರೊಂದಿಗೆ ಮುಂದಿನ ವಾರ ಸಭೆ ನಡೆಯಲಿದ್ದು, ಕಾಲೇಜು ಪ್ರಾರಂಭಿಸುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು. 

Leave a Reply

Your email address will not be published. Required fields are marked *

You May Also Like

ಗ್ರಾಪಂ ಚುನಾವಣೆ: ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ

ಗ್ರಾಪಂ ಚುನಾವಣೆ ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಗಳಿಗೆ ಸ್ಥಳೀಯ ಎಫ್ ಎಂ.ಡಬಾಲಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ತರಬೇತಿ ಕಾರ್ಯಕ್ರಮ ನಡೆಯಿತು.

ಅರಣ್ಯ ಸಂರಕ್ಷಣಾಧಿಕಾರಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ನಡೆಸಲಿರುವ ಕರ್ನಾಟಕ  ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ…

ಆದರಳ್ಳಿ ಜನರಿಗೆ ಕ್ರಷರ್ ಕಾಟ ತಪ್ಪೇ ಇಲ್ವಂತೆ!

ಶಿವಮೊಗ್ಗದಲ್ಲಿ ಕಲ್ಲು ಗಣಿಗಾರಿಕೆಯ ಸ್ಪೋಟದಿಂದಾದ ಕರಾಳ ಘಟನೆಯ ನೆನಪು ಇನ್ನು ಹಸಿಯಾಗಿಯೇ ಇದೆ. ಈ ಮದ್ಯೆ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಕಲ್ಲು ಕ್ವಾರಿಗಳಲ್ಲಿ ಸ್ಪೋಟಕ ಬಳಸಿ ಗಣಿಗಾರಿಕೆ ಮಾಡುತ್ತಿರುವುದು ಮುಂದುವರದೇ ಇದೆ.

ಅಡರಕಟ್ಟಿ-ಬಡ್ನಿ ರಸ್ತೆಗೆ ದುರಸ್ಥಿ ಭಾಗ್ಯವೆಂದು? ಕಾಮಗಾರಿ ಮುಗಿಸಿ ಕೈತೊಳೆದುಕೊಂಡರೇ ಗುತ್ತಿಗೆದಾರ!

ಸಂಚಾರ ಸುಗಮವಾಗಿದ್ದರೆ, ಎಲ್ಲವೂ ಸೌಖ್ಯ, ಆದರೆ ಅದೇ ಸಂಚಾರ ಸಂಕಟದಿಂದ ಕೂಡಿದರೆ ಸಂಚಕಾರ ಗ್ಯಾರಂಟಿ. ಅದೆಷ್ಟೋ ಜನರು ಗುತ್ತಿಗೆ ಪಡೆದು ರಸ್ತೆ ನಿರ್ಮಾಣದಲ್ಲಿ ಗುಣಮಟ್ಟಕ್ಕಿಂತ ಕಮಾಯಿ ಮಾಡಿಕೊಂಡಿದ್ದೇ ಜಾಸ್ತಿ. ಇನ್ನು ರಸ್ತೆ ನಿರ್ಮಾಣದ ನಂತರ ನಿರ್ವಹಣೆ ಮಾಡಬೇಕಾದವರು ಆ ಕಡೆ ಮುಖಾನೂ ಮಾಡಿಲ್ಲ. ಇಂತಹ ಅದೆಷ್ಟೋ ರಸ್ತೆಗಳಿಂದ ಜನಸಾಮಾನ್ಯರಿಗೆ ಸಂಚಕಾರಕ್ಕೆ ಸಂಚಕಾರ ಬಂದಿದೆ. ಹೀಗಾಗಿ ನಿಮ್ಮ ಉತ್ತರಪ್ರಭ ಗದಗ ಜಿಲ್ಲೆಯಲ್ಲಿನ ಇಂಥ ರಸ್ತೆಗಳ ಕುರಿತು ಸಂಚಿಕೆ ರೂಪದಲ್ಲಿ ಸುದ್ದಿ ಪ್ರಸಾರ ಮಾಡಲು ಮುಂದಾಗಿದೆ.