ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ – ಕಾಲೇಜುಗಳು ತೆರೆಯುವ ಮುನ್ಸೂಚನೆ ಇನ್ನೂ ಸಿಗುತ್ತಿಲ್ಲ. ಆದರೆ, ನವೆಂಬರ್ ನಲ್ಲಿ ತೆರೆಯುವ ಚಿಂತನೆ ಸರ್ಕಾರದ ಮುಂದೆ ಇದೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.

ನಗರದಲ್ಲಿ ಪ್ರತಿಭಟನೆ ನಡೆಸುತ್ತಿರುವ ಪಿಯುಸಿ ಉಪನ್ಯಾಸಕ ಅಭ್ಯರ್ಥಿಗಳನ್ನು ಭೇಟಿ ಮಾಡಿದ ನಂತರ ಮಾತನಾಡಿದ ಅವರು, ಸದ್ಯ ರಾಜ್ಯದಲ್ಲಿ ಕೊರೊನಾ ಇದ್ದರೂ ಕೌನ್ಸಲಿಂಗ್ ಮಾಡಲಾಗಿದೆ. ಹೀಗಾಗಿ ಆದೇಶ ಪತ್ರದ ಬಗ್ಗೆ ಯಾರೂ ಆತಂಕ ವ್ಯಕ್ತಪಡಿಸಬಾರದು. ಕಾಲೇಜುಗಳು ಪ್ರಾರಂಭವಾದ ಕೂಡಲೇ ಆದೇಶ ಪ್ರತಿ ನೀಡಲಾಗುವುದು ಎಂದು ಉಪನ್ಯಾಸಕರಿಗೆ ಭರವಸೆ ನೀಡಿದರು. 

ಈ ಸಂದರ್ಭದಲ್ಲಿ ಆದೇಶ ಪ್ರತಿಗೆ ಪ್ರತಿಭಟನಾ ನಿರತರು ಪಟ್ಟು ಹಿಡಿದರು. ಆಗ ನೂರಕ್ಕೆ ನೂರರಷ್ಟು ಕಾಲೇಜು ಪ್ರಾರಂಭವಾಗಲಿವೆ. ಪರೀಕ್ಷೆಗಳು ನಡೆಯಲಿವೆ. ಶೈಕ್ಷಣಿಕ ವರ್ಷವೂ ಪ್ರಾರಂಭವಾಗಲಿದೆ. ಹೀಗಾಗಿ ಯಾರಿಗೂ ಅನುಮಾನ ಬೇಡ. ನವೆಂಬರ್ ನಲ್ಲಿ ಕಾಲೇಜು ಪ್ರಾರಂಭಿಸುವ ಚಿಂತನೆ ನಡೆದಿದೆ. ಸಿಎಂ ಅವರೊಂದಿಗೆ ಮುಂದಿನ ವಾರ ಸಭೆ ನಡೆಯಲಿದ್ದು, ಕಾಲೇಜು ಪ್ರಾರಂಭಿಸುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು. 

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 388 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು ಕೊರೊನಾ ಪಾಸಿಟಿವ್ 388 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 3796 ಕ್ಕೆ ಏರಿಕೆಯಾದಂತಾಗಿದೆ.

ಸೆಪ್ಟಂಬರ್ ಮೊದಲ ವಾರದಲ್ಲಿ ಪದವಿ ತರಗತಿಗಳು ಆರಂಭ

ಈಗಾಗಲೇ ಸಾಕಷ್ಟು ಚರ್ಚೆಗೆ ಗ್ರಾಮಸವಾದ ವಿಷಯ ಶೈಕ್ಷಣಿಕ ವರ್ಷದ ತರಗತಿಗಳು ಆರಂಭವಾಗುವುದು ಯಾವಾಗ ಎನ್ನುವುದು. ಈ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪಾಲಕರು ತರಗತಿಗಳು ಯಾವಾಗ ಆರಂಭವಾಗುತ್ತೆವೆಯೋ ಎನ್ನುವುದನ್ನೇ ಎದುರು ನೋಡುತ್ತಿದ್ದರು.

ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ಮಾಹಿತಿ

ಈಗಾಗಲೇ ರಾಜ್ಯದ ಬಹುತೇಕ ಕಡೆಗಳಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಪ್ರವಾಹ ಭೀತಿ ಜನರನ್ನು ಆವರಿಸಿದೆ. ಇನ್ನು ಜಲಾಶಯಗಳಲ್ಲಿಯೂ ಕೂಡ ಹೆಚ್ಚು ನೀರು ಸಂಗ್ರಹವಾಗುತ್ತಿದೆ. ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ, ಒಳಹರಿವು ಮೊದಲಾದ ಮಾಹಿತಿ ಇಲ್ಲಿದೆ