ಮುಂಬಯಿ : ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಪಂದ್ಯದ ಸಂದರ್ಭದಲ್ಲಿ ಸನ್‍ ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಡುವೆ ನಡೆದ ಪಂದ್ಯದ ಸಂದರ್ಭದಲ್ಲಿ ಅಂಪೈರ್ ವೈಡ್ ನೀಡಲು ಮುಂದಾಗಿ ಧೋನಿ, ಆಕ್ಷೇಪಿಸುತ್ತಿದ್ದಂತೆ ತೀರ್ಮಾನ ಬದಲಿಸಿದ್ದ ಘಟನೆ ಸದ್ಯ ಚೆರ್ಚೆಗೆ ಕಾರಣವಾಗಿದೆ.

ಸದ್ಯ ಹರ್ಭಜನ್ ಸಿಂಗ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಪಂದ್ಯದ ನಂತರ ಸನ್‍ ರೈಸರ್ಸ್ ನಯುವ ಆಟಗಾರರಿಗೆ ಧೋನಿ ಕೆಲವು ಸಲಹೆಗಳನ್ನು ನೀಡಿದ್ದರು. ಈ ಕುರಿತುಕು ಹೈದರಾಬಾದ್ ತಂಡದ ಆಟಗಾರ ಅಬ್ದುಲ್ ಸಮದ್, ಫೋಟೋವನ್ನು ಟ್ವೀಟ್ ಮಾಡಿ ಇಂಪಾರ್ಟೆಂಟ್ ಲೆಸೆನ್ಸ್ ಎಂಬ ಹಣೆ ಬರಹ ನೀಡಿದ್ದರು.

ಈ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿದ್ದ ಅಭಿಮಾನಿಯೊಬ್ಬ ಯೆಸ್ ಎಂದು ಪಂದ್ಯದಲ್ಲಿ ಅಂಪೈರ್ ತೀರ್ಮಾನ ಬದಲಿಸಿದ್ದ ಕುರಿತ ವಿಡಿಯೋವನ್ನು ರೀ ಟ್ವೀಟ್ ಮಾಡಿದ್ದರು. ಅಭಿಮಾನಿಯ ಟ್ವೀಟ್ಗೆಯ ಪ್ರತಿಕ್ರಿಯೆ ನೀಡಿದ್ದ ಹರ್ಭಜನ್ ಸಿಂಗ್, ನಗುವ ಎಮೋಜಿ ನೀಡಿ ರೀ ಟ್ವೀಟ್ ಮಾಡಿದ್ದರು.

ಹರ್ಭಜನ್ ಸಿಂಗ್ ನಗುವ ಎಮೋಜಿಗಳೊಂದಿಗೆ ಪ್ರತಿಕ್ರಿಯೆ ನೀಡಿದಕ್ಕೆ ಧೋನಿ ತಂಡದ ಅಭಿಮಾನಿಗಳು ಫುಲ್ ಗರಂ ಆಗಿದ್ದಾರೆ. ನಂಬಿಕೆ ದ್ರೋಹಿ ಎಂದು ಟೀಕೆ ಮಾಡಿ ಕಟುವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅಭಿಮಾನಿಗಳು ಕೂಡ ಭಜ್ಜಿ ವಿರುದ್ಧ ಗರಂ ಆಗಿದ್ದಾರೆ.

ಈ ಜಗಳದಲ್ಲಿ ಅಭಿಮಾನಿಗಳು, ಪಾಕಿಸ್ತಾನ ಮಾಜಿ ಆಟಗಾರ ಶಹೀದ್ ಅಫ್ರಿದಿ ಫೌಂಡೇಶನ್ಗೆರ ನೆರವು ನೀಡಲು ಟ್ವೀಟ್ ಮಾಡಿ ಮನವಿ ಮಾಡಿದ್ದ ಹರ್ಭಜನ್ ಸಿಂಗ್ ವಿಷಯ ಪ್ರಸ್ತಾಪಿಸಿ ವ್ಯಂಗ್ಯವಾಡುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಸೇಡು ತೀರಿಸಿಕೊಳ್ಳುವುದರ ಮೂಲಕ ಗೆಲುವಿನ ಲಯ ಕಂಡುಕೊಂಡ ಚೆನ್ನೈ!

ದುಬೈ : ಆರ್ ಸಿಬಿ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎಂಟು ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ. ಈ ಮೂಲಕ ತನ್ನ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ.

ಹೈದರಾಬಾದ್ ತಂಡವನ್ನು ರೈಡ್ ಮಾಡಿ ಮೊದಲ ಜಯ ದಾಖಲಿಸಿದ ಕೋಲ್ಕತ್ತಾ!

ಶಾರ್ಜಾ : ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ತನ್ನ ಮೊದಲ…

ನಾನು ಧೋನಿ ಪಂದ್ಯ ವೀಕ್ಷಿಸಲು ಯುಎಇಗೆ ಹೋಗಲು ಯೋಚಿಸುತ್ತಿದ್ದೇನೆ

2005ರಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಪಂದ್ಯವೊಂದರಲ್ಲಿ ಭಾರತೀಯ ಕ್ರಿಕೆಟ್ ನ ಮಾಜಿ ನಾಯಕ ಎಂ.ಎಸ್. ಧೋನಿ 123 ಎಸೆತಗಳಿಗೆ 148 ರನ್ ಬಾರಿಸಿದ್ದರು. ಇದು ಅವರ ಮೊದಲ ಏಕದಿನ ಶತಕವಾಗಿತ್ತು.

ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ ಅಗತ್ಯ ಪ್ರೋ. P. S. ಅಣ್ಣಿಗೇರಿ

ನರಗುಂದ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ ಬೆಳೆಸಲು ಶ್ರೀ ಸಿದ್ದೇಶ್ವರ ಪ್ರಥಮ ದರ್ಜೆ ಕಾಲೇಜು ನರಗುಂದ ಕಾಲೇಜಿನಲ್ಲಿ…