ಮುಂಬಯಿ : ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಪಂದ್ಯದ ಸಂದರ್ಭದಲ್ಲಿ ಸನ್‍ ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಡುವೆ ನಡೆದ ಪಂದ್ಯದ ಸಂದರ್ಭದಲ್ಲಿ ಅಂಪೈರ್ ವೈಡ್ ನೀಡಲು ಮುಂದಾಗಿ ಧೋನಿ, ಆಕ್ಷೇಪಿಸುತ್ತಿದ್ದಂತೆ ತೀರ್ಮಾನ ಬದಲಿಸಿದ್ದ ಘಟನೆ ಸದ್ಯ ಚೆರ್ಚೆಗೆ ಕಾರಣವಾಗಿದೆ.

ಸದ್ಯ ಹರ್ಭಜನ್ ಸಿಂಗ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಪಂದ್ಯದ ನಂತರ ಸನ್‍ ರೈಸರ್ಸ್ ನಯುವ ಆಟಗಾರರಿಗೆ ಧೋನಿ ಕೆಲವು ಸಲಹೆಗಳನ್ನು ನೀಡಿದ್ದರು. ಈ ಕುರಿತುಕು ಹೈದರಾಬಾದ್ ತಂಡದ ಆಟಗಾರ ಅಬ್ದುಲ್ ಸಮದ್, ಫೋಟೋವನ್ನು ಟ್ವೀಟ್ ಮಾಡಿ ಇಂಪಾರ್ಟೆಂಟ್ ಲೆಸೆನ್ಸ್ ಎಂಬ ಹಣೆ ಬರಹ ನೀಡಿದ್ದರು.

ಈ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿದ್ದ ಅಭಿಮಾನಿಯೊಬ್ಬ ಯೆಸ್ ಎಂದು ಪಂದ್ಯದಲ್ಲಿ ಅಂಪೈರ್ ತೀರ್ಮಾನ ಬದಲಿಸಿದ್ದ ಕುರಿತ ವಿಡಿಯೋವನ್ನು ರೀ ಟ್ವೀಟ್ ಮಾಡಿದ್ದರು. ಅಭಿಮಾನಿಯ ಟ್ವೀಟ್ಗೆಯ ಪ್ರತಿಕ್ರಿಯೆ ನೀಡಿದ್ದ ಹರ್ಭಜನ್ ಸಿಂಗ್, ನಗುವ ಎಮೋಜಿ ನೀಡಿ ರೀ ಟ್ವೀಟ್ ಮಾಡಿದ್ದರು.

ಹರ್ಭಜನ್ ಸಿಂಗ್ ನಗುವ ಎಮೋಜಿಗಳೊಂದಿಗೆ ಪ್ರತಿಕ್ರಿಯೆ ನೀಡಿದಕ್ಕೆ ಧೋನಿ ತಂಡದ ಅಭಿಮಾನಿಗಳು ಫುಲ್ ಗರಂ ಆಗಿದ್ದಾರೆ. ನಂಬಿಕೆ ದ್ರೋಹಿ ಎಂದು ಟೀಕೆ ಮಾಡಿ ಕಟುವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅಭಿಮಾನಿಗಳು ಕೂಡ ಭಜ್ಜಿ ವಿರುದ್ಧ ಗರಂ ಆಗಿದ್ದಾರೆ.

ಈ ಜಗಳದಲ್ಲಿ ಅಭಿಮಾನಿಗಳು, ಪಾಕಿಸ್ತಾನ ಮಾಜಿ ಆಟಗಾರ ಶಹೀದ್ ಅಫ್ರಿದಿ ಫೌಂಡೇಶನ್ಗೆರ ನೆರವು ನೀಡಲು ಟ್ವೀಟ್ ಮಾಡಿ ಮನವಿ ಮಾಡಿದ್ದ ಹರ್ಭಜನ್ ಸಿಂಗ್ ವಿಷಯ ಪ್ರಸ್ತಾಪಿಸಿ ವ್ಯಂಗ್ಯವಾಡುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಇಂದಿನ ಪಂದ್ಯದಲ್ಲಿ ಆರ್ ಸಿಬಿ, ರಾಜಸ್ಥಾನವನ್ನು ಮಣಿಸಲಿದೆಯೇ?

ಬೆಂಗಳೂರು : ಪ್ರಸಕ್ತ ಸಾಲಿನ ಐಪಿಎಲ್ ಕದನದಲ್ಲಿ ಬೆಂಗಳೂರು ತಂಡವು ಇಂದು ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ.

ಐಪಿಎಲ್ ನಲ್ಲಿ ಮತ್ತೊಂದು ದಾಖಲೆಗೆ ಸಾಕ್ಷಿಯಾದ ಕನ್ನಡಿಗ!

ದುಬೈ : ಕಿಂಗ್ಸ್ ಇಲೆವೆನ್ ಪಂಜಾಬ್‌ ತಂಡದ ನಾಯಕ ಕೆ.ಎಲ್‌. ರಾಹುಲ್‌ ಅವರು ಭಾರತದ ಪರ ಮತ್ತೊಂದು ದಾಖಲೆ ಬರೆದಿದ್ದಾರೆ.

ಕ್ರೀಡೆಗಳಿಂದ ಆರೋಗ್ಯಕರ ಭಾವನೆ

ಉತ್ತರಪ್ರಭ ಸುದ್ದಿನಿಡಗುಂದಿ: ಹಲ ಬಗೆಯ ಕ್ರೀಡೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವದರಿಂದ ನಮ್ಮ ಆರೋಗ್ಯ ರಕ್ಷಣೆ ಮಾಡಲು ಸಾಧ್ಯ…

ಧೋನಿ ವಿರುದ್ಧ ಮೂರು ಸಿಕ್ಸರ್ ಸಿಡಿಸುವ ಮೂಲಕ ಅಕ್ಷರ್ ಸೇಡು ತೀರಿಸಿಕೊಂಡರೆ?

ಶಾರ್ಜಾ : ಚೆನ್ನೈ ಸೂಪರ್ ಕಿಂಗ್ ವಿರುದ್ಧದ ಪಂದ್ಯದಲ್ಲಿ ದೆಹಲಿ ಆಟಗಾರ ಅಕ್ಷರ್ ಪಟೇಲ್ ಕೊನೆಯ ಓವರ್ ನಲ್ಲಿ ಮೂರು ಸಿಕ್ಸರ್ ಸಿಡಿಸುವ ಮೂಲಕ ಧೋನಿ ವಿರುದ್ಧದ ಸೇಡು ತೀರಿಸಿಕೊಂಡಿದ್ದಾರೆ. ಈ ಮೂಲಕ ತಂಡಕ್ಕೂ ಜಯ ತಂದು ಕೊಟ್ಟಿದ್ದಾರೆ.