ಮುಂಬಯಿ : ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಪಂದ್ಯದ ಸಂದರ್ಭದಲ್ಲಿ ಸನ್‍ ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಡುವೆ ನಡೆದ ಪಂದ್ಯದ ಸಂದರ್ಭದಲ್ಲಿ ಅಂಪೈರ್ ವೈಡ್ ನೀಡಲು ಮುಂದಾಗಿ ಧೋನಿ, ಆಕ್ಷೇಪಿಸುತ್ತಿದ್ದಂತೆ ತೀರ್ಮಾನ ಬದಲಿಸಿದ್ದ ಘಟನೆ ಸದ್ಯ ಚೆರ್ಚೆಗೆ ಕಾರಣವಾಗಿದೆ.

ಸದ್ಯ ಹರ್ಭಜನ್ ಸಿಂಗ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಪಂದ್ಯದ ನಂತರ ಸನ್‍ ರೈಸರ್ಸ್ ನಯುವ ಆಟಗಾರರಿಗೆ ಧೋನಿ ಕೆಲವು ಸಲಹೆಗಳನ್ನು ನೀಡಿದ್ದರು. ಈ ಕುರಿತುಕು ಹೈದರಾಬಾದ್ ತಂಡದ ಆಟಗಾರ ಅಬ್ದುಲ್ ಸಮದ್, ಫೋಟೋವನ್ನು ಟ್ವೀಟ್ ಮಾಡಿ ಇಂಪಾರ್ಟೆಂಟ್ ಲೆಸೆನ್ಸ್ ಎಂಬ ಹಣೆ ಬರಹ ನೀಡಿದ್ದರು.

ಈ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿದ್ದ ಅಭಿಮಾನಿಯೊಬ್ಬ ಯೆಸ್ ಎಂದು ಪಂದ್ಯದಲ್ಲಿ ಅಂಪೈರ್ ತೀರ್ಮಾನ ಬದಲಿಸಿದ್ದ ಕುರಿತ ವಿಡಿಯೋವನ್ನು ರೀ ಟ್ವೀಟ್ ಮಾಡಿದ್ದರು. ಅಭಿಮಾನಿಯ ಟ್ವೀಟ್ಗೆಯ ಪ್ರತಿಕ್ರಿಯೆ ನೀಡಿದ್ದ ಹರ್ಭಜನ್ ಸಿಂಗ್, ನಗುವ ಎಮೋಜಿ ನೀಡಿ ರೀ ಟ್ವೀಟ್ ಮಾಡಿದ್ದರು.

ಹರ್ಭಜನ್ ಸಿಂಗ್ ನಗುವ ಎಮೋಜಿಗಳೊಂದಿಗೆ ಪ್ರತಿಕ್ರಿಯೆ ನೀಡಿದಕ್ಕೆ ಧೋನಿ ತಂಡದ ಅಭಿಮಾನಿಗಳು ಫುಲ್ ಗರಂ ಆಗಿದ್ದಾರೆ. ನಂಬಿಕೆ ದ್ರೋಹಿ ಎಂದು ಟೀಕೆ ಮಾಡಿ ಕಟುವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅಭಿಮಾನಿಗಳು ಕೂಡ ಭಜ್ಜಿ ವಿರುದ್ಧ ಗರಂ ಆಗಿದ್ದಾರೆ.

ಈ ಜಗಳದಲ್ಲಿ ಅಭಿಮಾನಿಗಳು, ಪಾಕಿಸ್ತಾನ ಮಾಜಿ ಆಟಗಾರ ಶಹೀದ್ ಅಫ್ರಿದಿ ಫೌಂಡೇಶನ್ಗೆರ ನೆರವು ನೀಡಲು ಟ್ವೀಟ್ ಮಾಡಿ ಮನವಿ ಮಾಡಿದ್ದ ಹರ್ಭಜನ್ ಸಿಂಗ್ ವಿಷಯ ಪ್ರಸ್ತಾಪಿಸಿ ವ್ಯಂಗ್ಯವಾಡುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಸಾಧ್ಯ ಎಂಬುವುದು ಯಾವುದೂ ಇಲ್ಲ..! ಪಂಜಾಬ್ – ರಾಜಸ್ಥಾನ್ ಮ್ಯಾಚ್ ನೋಡಿದವರಿಗೆ ಹೀಗೆ ಅನಿಸಲೇಬೇಕು!

ಕ್ರಿಕೆಟ್ ಅಂಗಳದಲ್ಲಿ ಯಾವುದೂ ಅಸಾಧ್ಯವಲ್ಲ ಎಂಬುವುದಕ್ಕೆ ಸಾಕಷ್ಟು ಉದಾಹರಣೆಗಳು ಸಿಕ್ಕಿವೆ. ಈ ಹಿಂದೆ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿ ಸಂದರ್ಭದಲ್ಲಿ 400ಕ್ಕೂ ಅಧಿಕ ರನ್ ಟಾರ್ಗೆಟ್ ನೀಡಿದ್ದ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ದಕ್ಷಿಣ ಆಫ್ರಿಕಾ ಗೆದ್ದಂತೆ ಇಲ್ಲಿ ಪಂಜಾಬ್ ನ್ನು ಮಣಿಸಿ ರಾಜಸ್ಥಾನ್ ಗೆದ್ದು ಬೀಗಿದೆ.

ಕೋಲ್ಕತ್ತಾ, ಬೆಂಗಳೂರು ತಂಡಗಳ ಹಿಂದಿನ ಇತಿಹಾಸ ಹೇಗಿದೆ?

ಬೆಂಗಳೂರು : ಪ್ರಸಕ್ತ ಸಾಲಿನ ಐಪಿಎಲ್ ಲೀಗ್ ನಲ್ಲಿ ಸೋಮವಾರ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎದುರಿಸಲಿದೆ. ಬ್ಯಾಟ್ಸಮನ್ ಗಳ ನೆಚ್ಚಿನ ಮೈದಾನದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬ ಲೆಕ್ಕಾಚಾರ ಈಗಾಗಲೇ ಶುರುವಾಗಿದೆ.

ಹೊಸ ದಾಖಲೆ ಬರೆದ ಕ್ರಿಸ್ ಗೇಲ್!

ಕ್ರಿಕೆಟ್: ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ ಕೆರೆಬಿಯನ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್…

10 ರಂದು ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಉತ್ತರಪ್ರಭ ಸುದ್ದಿಆಲಮಟ್ಟಿ: ಆಲಮಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಎಲ್ಲ ವಯೋಮಾನದ ಗ್ರಾಮೀಣ ಕ್ರೀಡಾಸಕ್ತರಿಗಾಗಿ ದಿ,10 ರಂದು…