ಮುಂಬಯಿ : ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಪಂದ್ಯದ ಸಂದರ್ಭದಲ್ಲಿ ಸನ್‍ ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಡುವೆ ನಡೆದ ಪಂದ್ಯದ ಸಂದರ್ಭದಲ್ಲಿ ಅಂಪೈರ್ ವೈಡ್ ನೀಡಲು ಮುಂದಾಗಿ ಧೋನಿ, ಆಕ್ಷೇಪಿಸುತ್ತಿದ್ದಂತೆ ತೀರ್ಮಾನ ಬದಲಿಸಿದ್ದ ಘಟನೆ ಸದ್ಯ ಚೆರ್ಚೆಗೆ ಕಾರಣವಾಗಿದೆ.

ಸದ್ಯ ಹರ್ಭಜನ್ ಸಿಂಗ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಪಂದ್ಯದ ನಂತರ ಸನ್‍ ರೈಸರ್ಸ್ ನಯುವ ಆಟಗಾರರಿಗೆ ಧೋನಿ ಕೆಲವು ಸಲಹೆಗಳನ್ನು ನೀಡಿದ್ದರು. ಈ ಕುರಿತುಕು ಹೈದರಾಬಾದ್ ತಂಡದ ಆಟಗಾರ ಅಬ್ದುಲ್ ಸಮದ್, ಫೋಟೋವನ್ನು ಟ್ವೀಟ್ ಮಾಡಿ ಇಂಪಾರ್ಟೆಂಟ್ ಲೆಸೆನ್ಸ್ ಎಂಬ ಹಣೆ ಬರಹ ನೀಡಿದ್ದರು.

ಈ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿದ್ದ ಅಭಿಮಾನಿಯೊಬ್ಬ ಯೆಸ್ ಎಂದು ಪಂದ್ಯದಲ್ಲಿ ಅಂಪೈರ್ ತೀರ್ಮಾನ ಬದಲಿಸಿದ್ದ ಕುರಿತ ವಿಡಿಯೋವನ್ನು ರೀ ಟ್ವೀಟ್ ಮಾಡಿದ್ದರು. ಅಭಿಮಾನಿಯ ಟ್ವೀಟ್ಗೆಯ ಪ್ರತಿಕ್ರಿಯೆ ನೀಡಿದ್ದ ಹರ್ಭಜನ್ ಸಿಂಗ್, ನಗುವ ಎಮೋಜಿ ನೀಡಿ ರೀ ಟ್ವೀಟ್ ಮಾಡಿದ್ದರು.

ಹರ್ಭಜನ್ ಸಿಂಗ್ ನಗುವ ಎಮೋಜಿಗಳೊಂದಿಗೆ ಪ್ರತಿಕ್ರಿಯೆ ನೀಡಿದಕ್ಕೆ ಧೋನಿ ತಂಡದ ಅಭಿಮಾನಿಗಳು ಫುಲ್ ಗರಂ ಆಗಿದ್ದಾರೆ. ನಂಬಿಕೆ ದ್ರೋಹಿ ಎಂದು ಟೀಕೆ ಮಾಡಿ ಕಟುವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅಭಿಮಾನಿಗಳು ಕೂಡ ಭಜ್ಜಿ ವಿರುದ್ಧ ಗರಂ ಆಗಿದ್ದಾರೆ.

ಈ ಜಗಳದಲ್ಲಿ ಅಭಿಮಾನಿಗಳು, ಪಾಕಿಸ್ತಾನ ಮಾಜಿ ಆಟಗಾರ ಶಹೀದ್ ಅಫ್ರಿದಿ ಫೌಂಡೇಶನ್ಗೆರ ನೆರವು ನೀಡಲು ಟ್ವೀಟ್ ಮಾಡಿ ಮನವಿ ಮಾಡಿದ್ದ ಹರ್ಭಜನ್ ಸಿಂಗ್ ವಿಷಯ ಪ್ರಸ್ತಾಪಿಸಿ ವ್ಯಂಗ್ಯವಾಡುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಹಸಿರು ಜೆರ್ಸಿ ತೊಟ್ಟಾಗ ಆರ್ ಸಿಬಿಯ ಸಾಧನೆ ಏನು?

ದುಬೈ : ಭಾರೀ ಆತ್ಮವಿಶ್ವಾಸದಲ್ಲಿ ಆರ್ ಸಿಬಿ ತಂಡ ಹಸಿರು ಜೆರ್ಸಿ ತೊಟ್ಟು, ಚೆನ್ನೈ ವಿರುದ್ಧ ನಡೆದ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದ್ದಾರೆ.

ಇoದು ನಿಡಗುಂದಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಉತ್ತರಪ್ರಭ ಸುದ್ದಿನಿಡಗುಂದಿ: ಯುವಜನ ಸಬಲೀಕರಣ ಇಲಾಖೆ ಹಾಗೂ ಸರ್ಕಾರಿ ಪ್ರೌಢಶಾಲೆ ಮಣಗೂರ ಆಶ್ರಯದಲ್ಲಿ ನಿಡಗುಂದಿ ತಾಲ್ಲೂಕು…

ಐಸಿಸಿಯು ಟೆಸ್ಟ್ ನೂತನ ಪಟ್ಟಿ ಪ್ರಕಟ: ಪಾರಮ್ಯ ಮೆರೆದ ಆಸ್ಟ್ರೇಲಿಯಾ

ಐಸಿಸಿಯು ಟೆಸ್ಟ್ ರ್ಯಾಂಕಿಂಗ್ ನೂತನ ಪಟ್ಟಿ ಪ್ರಕಟಿಸಿದ್ದು, ಆಸ್ಟ್ರೇಲಿಯಾ ತನ್ನ ಪಾರಮ್ಯ ಮೆರೆದಿದೆ. ಬ್ಯಾಟಿಂಗ್ ರ್ಯಾಂಡಕಿಂಗ್‌ನಲ್ಲಿ ಇಬ್ಬರು ಹೆಚ್ಚುವರಿ ಭಾರತೀಯ ಆಟಗಾರರು ಕಾಣಿಸಿಕೊಂಡಿದ್ದಾರೆ. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲಿದ್ದ ಅದೇ 2ನೇ ಸ್ಥಾನದಲ್ಲಿದ್ದರೆ, ಬೌಲಿಂಗ್ ರ್ಯಾಂೊಕಿಂಗ್‌ನಲ್ಲಿ ವೇಗಿ ಜಸ್‌ಪ್ರೀತ್ ಬೂಮ್ರಾ 9ನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ.

ಅನಿಲ್ ಕುಂಬ್ಳೆಗೆ ಶುಭಾಶಯ ಕೋರಿ ಸಾಧನೆ ಕೊಂಡಾಡಿದ ಸುದೀಪ್!

ಬೆಂಗಳೂರು : ಕಿಚ್ಚ ಸುದೀಪ್ ಅವರು ಮಾಜಿ ಕ್ರಿಕೆಟ್ ಅನಿಲ್ ಕುಂಬ್ಳೆ ಅವರ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿ, ಅವರ ಸಾಧನೆಯನ್ನು ಕೊಂಡಾಡಿದ್ದಾರೆ.