ಮುಂಬಯಿ : ಮೊಬೈಲ್ ಗಿಫ್ಟ್ ಕೊಡಲು ನಿರಾಕರಿಸಿದ ಅಜ್ಜಿಯ ತಲೆಯನ್ನೇ ಕತ್ತರಿಸಿ ಟೇಬಲ್ ಮೇಲಿಟ್ಟು ಮೊಮ್ಮಗ ವಿಕೃತಿ ಮೆರೆದಿರುವ ಘಟನೆ ನಡೆದಿದೆ. 

ಈ ಘಟನೆ ನಗರ ಪಶ್ಚಿಮ ಬಾಂದ್ರಾದಲ್ಲಿ ನಡೆದಿದ್ದು, ಆರೋಪಿಯನ್ನು ಕ್ರಿಸ್ಟೋಫರ್ ಡಯಾಸ್ ಎಂದು ಗುರುತಿಸಲಾಗಿದೆ. ಮೊಮ್ಮಗನಿಂದಲೇ ಹತ್ಯೆಯಾಗಿರುವ ಅಜ್ಜಿಯನ್ನು ರೋಸಿ ಎಂದು ಗುರುತಿಸಲಾಗಿದೆ. ಆರೋಪಿಯು ಡ್ರಗ್ಸ್ ಗೆ ವ್ಯಸನಿಯಾಗಿದ್ದ.

ಅಲ್ಲದೇ, ಚಿಕಿತ್ಸೆ ಕೂಡ ಪಡೆಯುತ್ತಿದ್ದ ಎನ್ನಲಾಗಿದೆ. ಈ ವ್ಯಕ್ತಿ ಥಾಣೆಯ ರೆಹಾಬ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಚಿಕಿತ್ಸೆಗೆ ಹಣದ ಕೊರತೆಯಾದ ಕಾರಣ, ಈತನನ್ನು ಪೋಷಕರು ಮನೆಗೆ ಕರೆ ತಂದಿದ್ದರು. ಡಯಾಸ್‍ ನ  ಪೋಷಕರು ಮನೆಯ ಮೊದಲ ಮಹಡಿಯಲ್ಲಿ ವಾಸಿಸುತ್ತಿದ್ದರೆ, ಕುಟುಂಬದ ಇತರ ಸದಸ್ಯರು ನೆಲ ಮಹಡಿಯಲ್ಲಿದ್ದರು. 

ರಾತ್ರಿ ಊಟವಾದ ನಂತರ ಆರೋಪಿತ, ಅಜ್ಜಿಯ ಬಳಿ ತೆರಳಿದ್ದ. ಈ ಸಂದರ್ಭದಲ್ಲಿ ಮೊಬೈಲ್ ಗಿಫ್ಟ್ ಕೊಡುವಂತೆ ಕೇಳಿದ್ದಾನೆ. ಆದರೆ, ಇದಕ್ಕೆ ಅಜ್ಜಿ ಒಪ್ಪಿಗೆ ಸೂಚಿಸಿಲ್ಲ. ಇದರಿಂದ ಕೋಪಗೊಂಡ ಪಾಪಿ ಮೊಮ್ಮಗ, ಅಜ್ಜಿ ಮಲಗಿದ ಮೇಲೆ ತಲೆಯನ್ನೇ ಕತ್ತರಿಸಿ ಕೊಲೆ ಮಾಡಿದ್ದಾನೆ. ತಲೆಯನ್ನು ಡೈನಿಂಗ್ ಟೇಬಲ್ ಮೇಲೆ ಇಟ್ಟು ವಿಕೃತಿ ಮೆರೆದಿದ್ದಾನೆ.

ಡಯಾಸ್ ಸಹೋದರ ಸಂಬಂಧಿ ನೆಲ ಮಹಡಿಗೆ ಬಂದು ನೋಡಿದ ಮೇಲೆ ಈ ಸತ್ಯ ಬಯಲಿಗೆ ಬಂದಿದೆ. ಆ ನಂತರ ಡಯಾಸ್ ತಂದೆ ಕರೆದು, ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಂತರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಅ. 17ರ ವರೆಗೆ ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

Leave a Reply

Your email address will not be published. Required fields are marked *

You May Also Like

ಜನರಿಗೆ ‘ಕೈ’ ಕೊಡುವುದರಲ್ಲಿ ಕಾಂಗ್ರೆಸ್ ಸಿದ್ಧಹಸ್ತ : ಸಿಎಂ

ಗದಗ : ಕಾಂಗ್ರೆಸ್ ಪಕ್ಷದ ಚಿಹ್ನೆ ‘ಹಸ್ತ’ವಾಗಿದ್ದು, ಜನರಿಗೆ ಕೈಕೊಡುವ ಕೆಲಸದಲ್ಲಿ ಅವರು ಸಿದ್ಧಹಸ್ತರು ಎಂದು…

ಪಾಕ್ ಸೇನೆಯಿಂದ ಗುಂಡಿನ ದಾಳಿ

ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯ ಬಳಿಯಿರುವ ಮುಂಚೂಣಿ ಠಾಣೆಗಳು ಮತ್ತು ಗ್ರಾಮಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನಿ ಸೇನೆಯು ಗುಂಡಿನ ದಾಳಿ ನಡೆಸಿದೆ ಎಂದು ಅಧಿಕಾರಿಗಳು ಇಂದು ತಿಳಿಸಿದರು.

ಬಿರೇನ್ ಸಿಂಗ್ ಮಣಿಪುರ ಸಿಎಂ ಆಗಿ ಅವಿರೋಧವಾಗಿ ಆಯ್ಕೆ

ಉತ್ತರಪ್ರಭ ಸುದ್ದಿಮಣಿಪುರ: ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಣಿಪುರದ ಹಂಗಾಮಿ ಸಿಎಂ ಎನ್ ಬಿರೇನ್ ಸಿಂಗ್…

ಸತ್ತಲ್ಲಿ 20 ಜನರಿರಬೇಕು…ಮದ್ಯಕ್ಕೆ ಮಾತ್ರ ಸಾವಿರ ಜನರಿದ್ದರೂ ಸೈ!!

ಅಂತ್ಯ ಸಂಸ್ಕಾರಕ್ಕೆ 20 ಜನರ ಸೇರುವಂತಿಲ್ಲ. ಆದರೆ, ಮದ್ಯದಂಗಡಿಯ ಮುಂದೆ 1 ಸಾವಿರ ಜನರು ನಿಲ್ಲಬಹುದೇ ಎಂದು ಕೇಂದ್ರ ಸರ್ಕಾರದ ವಿರುದ್ಧ ಶಿವಸೇನೆ ಟೀಕೆ ಮಾಡಿದೆ.