ಬೆಂಗಳೂರು : ರಾಜ್ಯದಲ್ಲಿ ಮಳೆರಾಯನ ಅಟ್ಟಹಾಸ ಮುಂದುವರೆದಿದ್ದು, ಇಂದು 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಮಳಾಯಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ. ಅ. 16 ರಂದು ಕೆಲವು ಪ್ರದೇಶಗಳಲ್ಲಿ ಸಾಧಾರಣದಿಂದ ಕೂಡಿದ ಭಾರಿ ಮಳೆಯಾಗುವ ಸಾದ್ಯತೆ ಇದೆ. ಕರ್ನಾಟಕದ ಕರಾವಳಿಯ ಹಲವು ಪ್ರದೇಶಗಳಲ್ಲಿ, ಗೋವಾ ಮತ್ತು ಕೊಂಕಣ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ನಿನ್ನೆ ಸಿದ್ದಾಪುರ, ಗೋಕರ್ಣ, ಕುಡಚಿ, ಶೃಂಗೇರಿ,ವಿಟ್ಲ, ಹಿರೇಕೆರೂರು, ಪಣಂಬೂರು, ಧಾರವಾಡ, ಕೂಡ್ಲಿಗಿ, ದಾವಣಗೆರೆ, ಮಂಕಿ, ಕದ್ರ, ಕಾರವಾರ, ಹೊನ್ನಾವರ, ಶಿರಾಲಿ, ಭರಮಸಾಗರ, ಚಿಕ್ಕಮಗಳೂರು, ಅಜ್ಜಂಪುರ,ಸೋಮವಾರಪೇಟೆಯಲ್ಲಿ ಹೆಚ್ಚಿನ ಮಳೆಯಾಗಿದೆ. 

Leave a Reply

Your email address will not be published. Required fields are marked *

You May Also Like

ಧರಣಿ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ರೈತರಿಂದ ತರಾಟೆಗೆ

ಎನ್ ಆರ್ ಬಿ ಸಿ 5ಎ ನಾಲಾ ಯೋಜನೆ ಜಾರಿಗಾಗಿ ಕಳೆದ 9 ದಿನಗಳಿಂದ ಪಾಮನಕೆಲ್ಲೂರಿನಲ್ಲಿ ನಡೆದ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ರೈತರು ತರಾಟೆಗೆ ತಗೆದುಕೊಂಡ ಘಟನೆ ನಡೆಯಿತು.

ಮದುವೆಯಾಗುವುದಾಗಿ 46 ವರ್ಷದ ಮಹಿಳೆಗೆ ವಂಚನೆ!

ಮದುವೆಯಾಗುವುದಾಗಿ ನಂಬಿಸಿ 46 ವರ್ಷದ ಮಹಿಳೆಗೆ ರೂ.5.6 ಲಕ್ಷ ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ.

ರಾಜ್ಯದಲ್ಲಿಂದು 337 ಕೊರೊನಾ ಪಾಸಿಟಿವ್, ಮೃತ ಪಟ್ಟವರ ಸಂಖ್ಯೆ 10 : ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 337 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 8281…

ಕೊರೋನಾ ವಾರಿಯರ್ಸ್ ಗೆ ಗ್ರಾಮಸ್ಥರಿಂದ ಗೌರವ

ಹಾವೇರಿ: ಕೊರೊನಾ ವಾರಿಯರ್ಸ್ ಸೇವೆ ಸ್ಮರಿಸಿ ಅವರನ್ನು ಇಂದು ಹಾವೇರಿ ಜಿಲ್ಲೆಯಲ್ಲಿ ಗೌರವಿಸಲಾಯಿತು.ಆಶಾ ಕಾರ್ಯಕರ್ತೆಯರು, ಆರೋಗ್ಯ…