ಬೆಂಗಳೂರು: ವಿಪರೀತ ಮಳೆಯಿಂದಾಗಿ ರೈತರು ಬೆಳೆದ ಈರುಳ್ಳಿ ಹೊಲದಲ್ಲಿಯೇ ಕೊಳೆಯುತ್ತಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ಈರುಳ್ಳಿಯ ಬೆಲೆ ಗಗನಕ್ಕೆ ಏರುತ್ತಿದೆ.

ಮಳೆಯಿಂದಾಗಿ ಸದ್ಯ ಮಾರುಕಟ್ಟೆಗೆ ಬರಬೇಕಿದ್ದ ಈರುಳ್ಳಿ ನಾಶವಾಗಿದೆ. ವಿಪರೀತ ಮಳೆಯಿಂದಾಗಿ ಹೊಲದಲ್ಲಿ ಬೆಳೆದ ಈರುಳ್ಳಿ, ಭೂಮಿಯಲ್ಲಿಯೇ ಕೊಳೆಯುತ್ತಿದೆ. ಹಿಂದಿನ ವರ್ಷವೂ ಈರುಳ್ಳಿಯ ಪರಿಸ್ಥಿತಿ ಇದೇ ಆಗಿತ್ತು. ಈ ಹಿನ್ನೆಲೆಯಲ್ಲಿ ಆ ಸಂದರ್ಭದಲ್ಲಿ ಈರುಳ್ಳಿ ಕೆಜಿಗೆ ರೂ. 100ರ ಆಸುಪಾಸಿನಲ್ಲಿ ಮಾರಾಟವಾಗಿತ್ತು. ಈ ವರ್ಷವೂ ಈರುಳ್ಳಿಯ ಪರಿಸ್ಥಿತಿ ಹಳೆಯ ವರ್ಷದಂತೆಯೇ ಆಗಲಿದೆ ಎಂದು ಮಾರುಕಟ್ಟೆಯಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ.

ಚಿಲ್ಲರೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಈರುಳ್ಳಿ ಕೊರತೆ ನೀಗಿಸುವ ನಿಟ್ಟಿನಲ್ಲಿ ಸರ್ಕಾರ, ಈಜಿಪ್ಟ್ ನಿಂದ ಆಮದು ಮಾಡಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಸದ್ಯ ಮಳೆಯಿಂದಾಗಿ ಅಳಿದುಳಿದ ಡ್ಯಾಮೇಜ್ ಈರುಳ್ಳಿಯನ್ನು ಮಾರುಕಟ್ಟೆಗೆ ರೈತರು ತರುತ್ತಿದ್ದಾರೆ. ಆದರೆ, ಗುಣಮಟ್ಟದ ಈರುಳ್ಳಿ ಮಾತ್ರ ಮಾರುಕಟ್ಟೆಗೆ ಬರುತ್ತಿಲ್ಲ. ಒಂದು ವೇಳೆ ಮಹಾರಾಷ್ಟ್ರ ರಾಜ್ಯದಿಂದ ಉಳಿದ ಈರುಳ್ಳಿ ಬಂದರೆ, ಎರಡ್ಮೂರು ತಿಂಗಳಲ್ಲಿ ಬೆಲೆ ಏರಿಳಿತ ಕಾಣಲಿದೆ. ಆಗ ಗ್ರಾಹಕರು ನೆಮ್ಮದಿಯ ಉಸಿರು ಬಿಡಬಹುದು ಎನ್ನಲಾಗಿದೆ. 

ಸದ್ಯ ಮಾರುಕಟ್ಟೆಯಲ್ಲಿ ಈರುಳ್ಳಿ ರೂ. 75ರಿಂದ 100ರ ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಈ ದರ ಮುಂದಿನ ದಿನಗಳಲ್ಲಿ ಇನ್ನೂ ಏರಿಕೆ ಕಾಣುವ ಸಾಧ್ಯತೆ ಇದೆ ಎನ್ನಲಾಗಿದೆ. 

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 925 ಕ್ಕೆ ಏರಿಕೆ

ಬೆಂಗಳೂರು: ಇಂದಿನ 63 ಪ್ರಕರಣಗಳು ಸೇರಿ ರಾಜ್ಯದಲ್ಲಿ ಪತ್ತೆಯಾಗಿರುವ ಒಟ್ಟು ಪ್ರಕರಣಗಳ ಸಂಖ್ಯೆ 925 ಕ್ಕೆ…

ಕೊರೊನಾ ಬಿಕ್ಕಟ್ಟು – ಹೊಸ ಮಾರ್ಗಸೂಚಿಯ ಮೊರೆ ಹೋದ ಸರ್ಕಾರ!

ಬೆಂಗಳೂರು: ಸದ್ಯ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಹೀಗಾಗಿ ಬೇರೆ ಬೇರೆ ರಾಜ್ಯಗಳಿಂದಲೂ ಜನರು ರಾಜ್ಯಕ್ಕೆ…

ನಾನು ಎಸ್ಕಾರ್ಟ್ ನಲ್ಲಿ ಓಡಾಡುವುದು ಕೆಲವರಿಗೆ ಬೇಸರ ತಂದಿರಬಹುದು: ಸಚಿವ ಡಾ. ನಾರಾಯಣಗೌಡ

ನಾನು ತಳಮಟ್ಟದಿಂದ ಬಂದವನು. ಯಾರ ಬಗ್ಗೆಯೂ ಲಘುವಾಗಿ ಮಾತಾಡಲ್ಲ. ನಾಗಮಂಗಲ ಶಾಸಕ ಸುರೇಶ್ ಗೌಡ ಅವರ ಬಗ್ಗೆ ನಾನು ಸಿಡಿ ವಿಚಾರ ಏನು ಹೇಳಿಲ್ಲ. ಅವರು ಏಕೆ ಹಾಗೆ ಮಾತಾಡಿದ್ರೊ ನನಗೆ ಗೊತ್ತಿಲ್ಲ.

ಅಡರಕಟ್ಟಿ-ಬಡ್ನಿ ರಸ್ತೆಗೆ ದುರಸ್ಥಿ ಭಾಗ್ಯವೆಂದು? ಕಾಮಗಾರಿ ಮುಗಿಸಿ ಕೈತೊಳೆದುಕೊಂಡರೇ ಗುತ್ತಿಗೆದಾರ!

ಸಂಚಾರ ಸುಗಮವಾಗಿದ್ದರೆ, ಎಲ್ಲವೂ ಸೌಖ್ಯ, ಆದರೆ ಅದೇ ಸಂಚಾರ ಸಂಕಟದಿಂದ ಕೂಡಿದರೆ ಸಂಚಕಾರ ಗ್ಯಾರಂಟಿ. ಅದೆಷ್ಟೋ ಜನರು ಗುತ್ತಿಗೆ ಪಡೆದು ರಸ್ತೆ ನಿರ್ಮಾಣದಲ್ಲಿ ಗುಣಮಟ್ಟಕ್ಕಿಂತ ಕಮಾಯಿ ಮಾಡಿಕೊಂಡಿದ್ದೇ ಜಾಸ್ತಿ. ಇನ್ನು ರಸ್ತೆ ನಿರ್ಮಾಣದ ನಂತರ ನಿರ್ವಹಣೆ ಮಾಡಬೇಕಾದವರು ಆ ಕಡೆ ಮುಖಾನೂ ಮಾಡಿಲ್ಲ. ಇಂತಹ ಅದೆಷ್ಟೋ ರಸ್ತೆಗಳಿಂದ ಜನಸಾಮಾನ್ಯರಿಗೆ ಸಂಚಕಾರಕ್ಕೆ ಸಂಚಕಾರ ಬಂದಿದೆ. ಹೀಗಾಗಿ ನಿಮ್ಮ ಉತ್ತರಪ್ರಭ ಗದಗ ಜಿಲ್ಲೆಯಲ್ಲಿನ ಇಂಥ ರಸ್ತೆಗಳ ಕುರಿತು ಸಂಚಿಕೆ ರೂಪದಲ್ಲಿ ಸುದ್ದಿ ಪ್ರಸಾರ ಮಾಡಲು ಮುಂದಾಗಿದೆ.