ನವದೆಹಲಿ : ದೇಶದಲ್ಲಿ ಕೊರೊನಾ ಹಾವಳಿ ಸ್ವಲ್ಪ ಮಟ್ಟಿಗೆ ತಗ್ಗುತ್ತಿದ್ದರೂ ರಾಜ್ಯದಲ್ಲಿ ಮಾತ್ರ ಇದರ ಪ್ರಭಾವ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ತಂಡವು ರಾಜ್ಯಕ್ಕೆ ಆಗಮಿಸುತ್ತಿದೆ.

ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಕೊರೊನಾ ವೈರಸ್ ನಿಯಂತ್ರಣ ಉಸ್ತುವಾರಿಗೆ ಕೇಂದ್ರ ಸರ್ಕಾರದ ವಿಶೇಷ ತಂಡ ಆಗಮಿಸುತ್ತಿದೆ.

ಸೋಂಕು ಹೆಚ್ಚಾಗುತ್ತಿರುವ ಕೇರಳ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಛತ್ತೀಸಗಢ ರಾಜ್ಯಗಳಿಗೆ ಪ್ರತ್ಯೇಕ ತಜ್ಞರ ತಂಡಗಳನ್ನು ಕೇಂದ್ರ ಆರೋಗ್ಯ ಇಲಾಖೆ ನಿಯೋಜಿಸಿದೆ. ತಜ್ಞರ ತಂಡ ಕರ್ನಾಟಕಕ್ಕೆ ಎರಡನೇ ಬಾರಿಗೆ ಬರುತ್ತಿದ್ದು, ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ಮತ್ತು ಸಲಹೆಗಳನ್ನು ನೀಡಲಿದೆ.
ಕೇಂದ್ರದ ತಂಡದ ನಂತರ ರಾಜ್ಯದಲ್ಲಿ ಪರಿಸ್ಥಿತಿ ಸಂಪೂರ್ಣ ವಿಭಿನ್ನವಾಗಿದ್ದು ಕೈ ಮೀರಿ ಹೋಗುತ್ತಿದೆ. ಈ ಹಿನ್ನೆಲೆ ಮತ್ತೊಮ್ಮೆ ಕೇಂದ್ರ ಸರ್ಕಾರ ರಾಜ್ಯಕ್ಕೆ ತಜ್ಞರ ನಿಯೋಜನೆ ಮಾಡಿದೆ.

ರಾಜ್ಯದಲ್ಲಿ ಒಟ್ಟು 7,43,848 ಪ್ರಕರಣಗಳು ವರದಿಯಾಗಿವೆ. ಇದು ದೇಶದ ಒಟ್ಟು ಪ್ರಕರಣಗಳಲ್ಲಿ ಶೇ. 10.1ರಷ್ಟಿದೆ. ಕರ್ನಾಟಕವು ಪ್ರತಿ ಮಿಲಿಯನ್ ಜನಸಂಖ್ಯೆಗೆ 11,010 ಪ್ರಕರಣಗಳನ್ನು ಹೊಂದಿದೆ. ರಾಜ್ಯದಲ್ಲಿ 6,20,008 ರೋಗಿಗಳು ಗುಣಮುಖರಾಗಿದ್ದಾರೆ. ಚೇತರಿಕೆ ದರ ಶೇ. 83.35 ಆಗಿದೆ.

Leave a Reply

Your email address will not be published. Required fields are marked *

You May Also Like

ಮಣಿಪುರ ವಿದ್ಯಾರ್ಥಿ ಸಂಘದಿಂದ ಸಚಿವ ಸಿ.ಸಿ.ಪಾಟೀಲ್ ಸಹಾಯಕ್ಕೆ ಕೃತಜ್ಞತೆ

ಮಣಿಪುರ ರಾಜ್ಯದ ವಿದ್ಯಾರ್ಥಿಗಳ ಸಂಘಕ್ಕೆ ಸಹಾಯ ಮಾಡಿದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ ಅವರಿಗೆ ಮಣಿಪುರ ವಿದ್ಯಾರ್ಥಿ ಸಂಘ ಟ್ವೀಟ್ ಮೂಲಕ ಅಭಿನಂದಿಸಿದೆ.

ಮುಂದುವರಿದ ಸಾರಿಗೆ ನೌಕರರ ಮುಷ್ಕರ: ಬಿಕೋ ಎನ್ನುತ್ತಿದೆ ಗಜೇಂದ್ರಗಡ ಬಸ್ ನಿಲ್ದಾಣ

ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ಸಾರಿಗೆ ನೌಕರರ ಅನಿರ್ಧಿಷ್ಠಾವಧಿ ಮುಷ್ಕರ ಮೂರನೇ ದಿನಕ್ಕೆ ಮುಂದುವರೆದಿದೆ. ಹೀಗಾಗಿ ಗಜೇಂದ್ರಗಡ ಬಸ್ ನಿಲ್ದಾಣದಲ್ಲಿ ಸಾರಿಗೆ ಸಂಚಾರ ಇಲ್ಲದೇ, ಬಿಕೋ ಎನ್ನುತ್ತಿತ್ತು.

ರಾಜ್ಯದಲ್ಲಿಂದು 453 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 453 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 9150…

ಹಳ್ಳಿ ಹಕ್ಕಿ‌ ಒಂಟಿಯಾಗಲು ಬಿಡಲ್ಲ: ಸಚಿವ ಸೋಮಶೇಖರ್

ಗದಗ: ಮಾಜಿ ಸಚಿವ ಎಚ್. ವಿಶ್ವನಾಥ‌ ಅವರು ಅನಾಥರಲ್ಲ. ವಿಶ್ವನಾಥ ಸಹ ನಮ್ಮ ಜೊತೆಯಲ್ಲೇ ಇದ್ದಾರೆ.…