ನವದೆಹಲಿ : ಕೊರೊನಾ ವಿಷಯದಲ್ಲಿ ನಾವು ಸೋಲು ಕಂಡಿದ್ದೇವೆ. ನಮ್ಮ ಶತೃ ರಾಷ್ಟ್ರ ಪಾಕ್ ವಿರುದ್ಧ ನಮಗೆ ಮುಖಭಂಗವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಕೊರೊನಾ ನಿಯಂತ್ರಿಸುವಲ್ಲಿ ಭಾರತವು ಪಾಕ್ ಹಾಗೂ ಅಪ್ಘಾನಿಸ್ತಾನಕ್ಕಿಂತ ಹಿಂದೆ ಬಿದ್ದಿದೆ. ಕೊರೊನಾ ನಿಯಂತ್ರಣ ವಿಫಲ ಹಾಗೂ ಆರ್ಥಿಕ ಪುನಶ್ಚೇತನ ನೀತಿಗಳ ವಿರುದ್ಧ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವರ್ಷ ಭಾರತದ ಆರ್ಥಿಕತೆಯು ಶೇ. 10.3ರಷ್ಟು ಭಾರಿ ಪ್ರಮಾಣದಲ್ಲಿ ಸಂಕುಚಿತಗೊಳ್ಳಲಿದೆ ಎಂಬ ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಹೇಳಿಕೆ ಉಲ್ಲೇಖಿಸಿ ಇದು ಸರ್ಕಾರದ ಮತ್ತೊಂದು ದೊಡ್ಡ ಸಾಧನೆ ಎಂದು ವ್ಯಂಗ್ಯವಾಡಿದ್ದಾರೆ.

ಈ ವರ್ಷ ಭಾರತದ ಆರ್ಥಿಕತೆಯು ಶೇ. 10.3ರಷ್ಟು ಭಾರಿ ಪ್ರಮಾಣದಲ್ಲಿ ಸಂಕುಚಿತಗೊಳ್ಳುವ ನಿರೀಕ್ಷೆಯಿದೆ ಎಂದು ಚಾರ್ಟ್ ತೋರಿಸಿದೆ. ಇದು ಪಟ್ಟಿಯಲ್ಲಿರುವ ಎಲ್ಲ ಇತರೆ ದೇಶಗಳಿಗಿಂತ ಅತಿ ಹೆಚ್ಚಿನ ಪ್ರಮಾಣದ ಕುಸಿತವಾಗಿದೆ. ಬಿಜೆಪಿ ಸರ್ಕಾರದ ಮತ್ತೊಂದು ಸಾಧನೆ. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಕೂಡ ಕೋವಿಡ್ ಅನ್ನು ಭಾರತಕ್ಕಿಂತ ಉತ್ತಮವಾಗಿ ನಿಭಾಯಿಸಿದೆ ಎಂದು ಗಾಂಧಿ ಚಾರ್ಟ್ ನೊಂದಿಗೆ ಟ್ವೀಟ್ ಮಾಡಿದ್ದಾರೆ.

ಬಾಂಗ್ಲಾದೇಶ, ಮ್ಯಾನ್ಮಾರ್, ನೇಪಾಳ, ಚೀನಾ, ಭೂತಾನ್, ಪಾಕಿಸ್ತಾನ, ಶ್ರೀಲಂಕಾ, ಅಫ್ಘಾನಿಸ್ತಾನ ಮತ್ತು ಭಾರತದ ಪ್ರಸಕ್ತ ಸಾಲಿನ ಐಎಂಎಫ್ ಬೆಳವಣಿಗೆಯ ಅಂದಾಜನ್ನು ತೋರಿಸುವ ಚಾರ್ಟ್ ಅನ್ನು ಟ್ಯಾಗ್ ಮಾಡುವ ಮೂಲಕ ಗಾಂಧಿ ಟ್ವಿಟ್ಟರ್ ನಲ್ಲಿ ಸರ್ಕಾರವನ್ನು ಟೀಕಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಪರೀಕ್ಷೆ: ದೇಶಾದ್ಯಂತ ಸಮಂಜಸ ದರ ನಿಗದಿಗೆ ಸುಪ್ರೀಂ ಸೂಚನೆ

ದೆಹಲಿ: ಕೊರೊನಾ ಪರೀಕ್ಷೆಗೆ ಸಮಂಜಸ ದರ ನಿಗದಿಮಾಡಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಭೂಷಣ್ ಹೇಳಿದ್ದಾರೆ.…

ಸ್ವಪ್ನ ಸುಂದರಿ ಸಾಗಿಸಿದ್ದು 30 ಅಲ್ಲ, 180 ಕೆಜಿ ಚಿನ್ನವಂತೆ!

ಯುಎಇಯಿಂದ 30 ಕೆಜಿ ಚಿನ್ನ ಸಾಗಿಸಿದ ಆರೋಪ ಎದುರಿಸುತ್ತಿರುವ ಸ್ವಪ್ನ ಟೀಮ್ ಇದೇ ಮಾದರಿಯಲ್ಲಿ ಒಟ್ಟು 180 ಕೆಜಿ ಚಿನ್ನ ಸಾಗಿಸಿದೆ ಎನ್ನಲಾಗಿದೆ.ಯುಎಇಯಿಂದ ಕೇರಳಕ್ಕೆ 30 ಕೆಜಿ ಚಿನ್ನವನ್ನು

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: 32 ಆರೋಪಿಗಳು ಖುಲಾಸೆ

ವಿವಾದಕ್ಕೆ ಸಂಬಂಧಿಸಿದಂತೆ ಆಪಾದಿತ ಎಲ್ಲಾ 32 ಮಂದಿ ಆರೋಪಿಗಳನ್ನು ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ. ಈ ಮೂಲಕ ಕೋರ್ಟ್ ನೀಡಿದ ಈ ತೀರ್ಪು ನಿಂದಾಗಿ 28 ವರ್ಷಗಳ ಸುದೀರ್ಘ ಪ್ರಕರಣಕ್ಕೆ ತೆರೆ ಎಳೆದಂತಾಗಿದೆ. ಹಾಗೇ ಪ್ರಕರಣದ ಪ್ರಮುಖ ದೋಷಿಗಳಾದ ಅಡ್ವಾಣಿ, ಉಮಾಭಾರತಿ, ಮುರುಳಿ ಮನೋಹರ್ ಜೋಷಿ ಸೇರಿದಂತೆ ಇತರರು ನಿರಾಳರಾಗಿದ್ದಾರೆ.

ನವದೆಹಲಿ : ದೇಶದ ಮೆಟ್ರೋ ನಗರಗಳು ರೆಡ್ ಜೋನ್ ನಲ್ಲಿ: ಆರೋಗ್ಯ ಸಚಿವಾಲಯ ನಿರ್ಧಾರ

ದೇಶದಲ್ಲಿನ ಎಲ್ಲ ಮೆಟ್ರೋ ನಗರಗಳನ್ನು ರೆಡ್ ಜೋನ್ ನಲ್ಲಿರಿಸಲು ಕೇಂದ್ರ ಆರೋಗ್ಯ ಸಚಿವಾಲಯ ನಿರ್ಧರಿಸಿದೆ.