ನವದೆಹಲಿ : ಕೊರೊನಾ ವಿಷಯದಲ್ಲಿ ನಾವು ಸೋಲು ಕಂಡಿದ್ದೇವೆ. ನಮ್ಮ ಶತೃ ರಾಷ್ಟ್ರ ಪಾಕ್ ವಿರುದ್ಧ ನಮಗೆ ಮುಖಭಂಗವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಕೊರೊನಾ ನಿಯಂತ್ರಿಸುವಲ್ಲಿ ಭಾರತವು ಪಾಕ್ ಹಾಗೂ ಅಪ್ಘಾನಿಸ್ತಾನಕ್ಕಿಂತ ಹಿಂದೆ ಬಿದ್ದಿದೆ. ಕೊರೊನಾ ನಿಯಂತ್ರಣ ವಿಫಲ ಹಾಗೂ ಆರ್ಥಿಕ ಪುನಶ್ಚೇತನ ನೀತಿಗಳ ವಿರುದ್ಧ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವರ್ಷ ಭಾರತದ ಆರ್ಥಿಕತೆಯು ಶೇ. 10.3ರಷ್ಟು ಭಾರಿ ಪ್ರಮಾಣದಲ್ಲಿ ಸಂಕುಚಿತಗೊಳ್ಳಲಿದೆ ಎಂಬ ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಹೇಳಿಕೆ ಉಲ್ಲೇಖಿಸಿ ಇದು ಸರ್ಕಾರದ ಮತ್ತೊಂದು ದೊಡ್ಡ ಸಾಧನೆ ಎಂದು ವ್ಯಂಗ್ಯವಾಡಿದ್ದಾರೆ.

ಈ ವರ್ಷ ಭಾರತದ ಆರ್ಥಿಕತೆಯು ಶೇ. 10.3ರಷ್ಟು ಭಾರಿ ಪ್ರಮಾಣದಲ್ಲಿ ಸಂಕುಚಿತಗೊಳ್ಳುವ ನಿರೀಕ್ಷೆಯಿದೆ ಎಂದು ಚಾರ್ಟ್ ತೋರಿಸಿದೆ. ಇದು ಪಟ್ಟಿಯಲ್ಲಿರುವ ಎಲ್ಲ ಇತರೆ ದೇಶಗಳಿಗಿಂತ ಅತಿ ಹೆಚ್ಚಿನ ಪ್ರಮಾಣದ ಕುಸಿತವಾಗಿದೆ. ಬಿಜೆಪಿ ಸರ್ಕಾರದ ಮತ್ತೊಂದು ಸಾಧನೆ. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಕೂಡ ಕೋವಿಡ್ ಅನ್ನು ಭಾರತಕ್ಕಿಂತ ಉತ್ತಮವಾಗಿ ನಿಭಾಯಿಸಿದೆ ಎಂದು ಗಾಂಧಿ ಚಾರ್ಟ್ ನೊಂದಿಗೆ ಟ್ವೀಟ್ ಮಾಡಿದ್ದಾರೆ.

ಬಾಂಗ್ಲಾದೇಶ, ಮ್ಯಾನ್ಮಾರ್, ನೇಪಾಳ, ಚೀನಾ, ಭೂತಾನ್, ಪಾಕಿಸ್ತಾನ, ಶ್ರೀಲಂಕಾ, ಅಫ್ಘಾನಿಸ್ತಾನ ಮತ್ತು ಭಾರತದ ಪ್ರಸಕ್ತ ಸಾಲಿನ ಐಎಂಎಫ್ ಬೆಳವಣಿಗೆಯ ಅಂದಾಜನ್ನು ತೋರಿಸುವ ಚಾರ್ಟ್ ಅನ್ನು ಟ್ಯಾಗ್ ಮಾಡುವ ಮೂಲಕ ಗಾಂಧಿ ಟ್ವಿಟ್ಟರ್ ನಲ್ಲಿ ಸರ್ಕಾರವನ್ನು ಟೀಕಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ನೀಟ್ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯಕ್ಕೆ ಇಲ್ಲ ಸ್ಥಾನ!

ನವದೆಹಲಿ : ವೈದ್ಯಕೀಯ ಪ್ರವೇಶ ಪರೀಕ್ಷೆ, ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ನೀಟ್‌ ನಲ್ಲಿ 720ಕ್ಕೆ 720 ಅಂಕಗಳನ್ನು ಗಳಿಸಿದ ಒಡಿಶಾದ ಸೋಯೆಬ್ ಅಫ್ತಾಬ್ ಅವರೊಂದಿಗೆ ದೆಹಲಿಯ ಆಕಾಂಕ್ಷ ಸಿಂಗ್ ಸಹ ಅಷ್ಟೇ ಅಂಕ ಗಳಿಸಿದ್ದರೂ ಟಾಪರ್ ಸ್ಥಾನದಿಂದ ಹಿಂದೆ ಸರಿದಿದ್ದಾರೆ.

ದೇಶದಲ್ಲಿ 73 ಲಕ್ಷದ ಗಡಿ ದಾಟಿದ ಮಹಾಮಾರಿ!

ನವದೆಹಲಿ : ದೇಶದಲ್ಲಿ ಮಹಾಮಾರಿಯ ಅಟ್ಟಹಾಸ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 63,371 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, 895 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

ಚೀನಾ ಕುತಂತ್ರ – ಸರ್ವ ಪಕ್ಷಗಳ ಸಭೆ ಕರೆದ ಪ್ರಧಾನಿ!

ಹೊಸದೆಹಲಿ: ಗಡಿಯಲ್ಲಿ ಚೀನಾ ಕಿರಿಕ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ವ ಪಕ್ಷಗಳ ಸಭೆ…

ಬಿರೇನ್ ಸಿಂಗ್ ಮಣಿಪುರ ಸಿಎಂ ಆಗಿ ಅವಿರೋಧವಾಗಿ ಆಯ್ಕೆ

ಉತ್ತರಪ್ರಭ ಸುದ್ದಿಮಣಿಪುರ: ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಣಿಪುರದ ಹಂಗಾಮಿ ಸಿಎಂ ಎನ್ ಬಿರೇನ್ ಸಿಂಗ್…