ಬೆಂಗಳೂರು :  ನಟ ಚಿರಂಜೀವಿ ಸರ್ಜಾ ಅವರ 36ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಅವರ ಮಾವ ಹಾಗೂ ನಟ ಅರ್ಜುನ್ ಸರ್ಜಾ ಭಾವನಾತ್ಮಕ ಸಾಲುಗಳನ್ನು ಬರೆದು ಶುಭಾಶಯ ಕೋರಿದ್ದಾರೆ.

ಚಿರಂಜೀವಿ ಅವರ ಹುಟ್ಟು ಹಬ್ಬದ ಅಂಗವಾಗಿ ಸರ್ಜಾ ಅವರಿಗೆ ಸುದೀಪ್, ದರ್ಶನ್ ಸೇರಿದಂತೆ ಹಲವು ಗಣ್ಯರು ಶುಭಾಶಯ ತಿಳಿಸಿದ್ದಾರೆ. ಅರ್ಜುನ್ ಸರ್ಜಾ ಅವರು ಚಿರಂಜೀವಿ ಸತ್ತ ನಂತರದ ನೋವಿನ ಬಗ್ಗೆ ಬರೆದುಕೊಂಡಿದ್ದಾರೆ. 

36 ವರ್ಷಗಳ ಹಿಂದೆ ನೀನು ಹುಟ್ಟಿದಾಗ ಸಂತಸದಿಂದ ಕುಣಿದು ಕುಪ್ಪಳಿಸಿದ್ದೆ. ವಿಧಿಯ ಕ್ರೌರ್ಯವನ್ನು ನಾನು ನಂಬಿರಲಿಲ್ಲ. ಹುಟ್ಟು ಹಬ್ಬದ ದಿನದಂದು ನಾನು ಈ ರೀತಿಯ ಪದಗಳನ್ನು ಬರೆಯುತ್ತೇನೆಂದು ನನ್ನ ಹುಚ್ಚು ಕನಸುಗಳಲ್ಲಿಯೂ ಯೋಚಿಸಿರಲಿಲ್ಲ. ನನ್ನ ಸಂದೇಶದಲ್ಲಿ ಯಾವಾಗಲೂ ನೀನು ಜೊತೆಗಿರುತ್ತೀಯ ಮಗನೆ. ಲವ್ ಯು ಸೋ ಮಚ್ ಮೈ ಬೇಬಿ ಎಂದು ಬರೆದುಕೊಂಡಿದ್ದಾರೆ. ಅವರ ಪೋಸ್ಟ್ ಗೆ ಹಲವು ಅಭಿಮಾನಿಗಳು ಕಮೆಂಟ್ ಮಾಡಿ ಬೇಸರ ವ್ಯಕ್ತಪಡಿಸಿ, ಶುಭಾಶಯ ತಿಳಿಸಿದ್ದಾರೆ.

ಕಿಚ್ಚ ಸುದೀಪ್ ಟ್ವೀಟ್ ಮಾಡಿ, ಅವನನ್ನು ಕಳೆದುಕೊಂಡ, ಅವನನ್ನು ತಿಳಿದಿದ್ದ ಹಾಗೂ ಪ್ರೀತಿಸಿದ್ದ ಎಲ್ಲರಿಂದಲೂ ಅವನು ತಪ್ಪಿಸಿಕೊಂಡಂತಾಗಿದೆ ಎಂದು ಬರೆದುಕೊಂಡಿದ್ದಾರೆ. ನಟ ದರ್ಶನ್,  ಚಿರು ಜೊತೆ ನಾಯಿ ಹಿಡಿದು ನಿಂತಿರುವ ಫೋಟೋ ಪೋಸ್ಟ್ ಮಾಡಿ ಶುಭಾಶಯ ತಿಳಿಸಿದ್ದಾರೆ. 

Leave a Reply

Your email address will not be published. Required fields are marked *

You May Also Like

ಮಹೇಶ್ ಬಾಬು ಡೈಲಾಗ್ ಟಿಕ್ ಮಾಡಿದ ವಾರ್ನರ್

ಆಸ್ಟ್ರೇಲಿಯಾ ಕ್ರಿಕೇಟಿಗರೊಬ್ಬರು ಇಂಡಿಯಾದ ಚಿತ್ರನಟರೊಬ್ಬರ ಡೈಲಾಗ್ ನ್ನು ಟಿಕ್ ಟಾಕ್ ಮಾಟಿದ್ದು ಇದೀಗ ವೈರಲ್ ಆಗಿದೆ.

ರಾಕಿ ಬಾಯ್ ಚಿತ್ರವನ್ನು ಅಕ್ರಮವಾಗಿ ಪ್ರಸಾರ ಮಾಡಿದ ತೆಲುಗು ಚಾನಲ್!

ಕೆಜಿಎಫ್ ಚಿತ್ರವನ್ನು ಅಕ್ರಮವಾಗಿ ಪ್ರಸಾರ ಮಾಡಿದ್ದ ತೆಲುಗು ಟಿವಿ ಚಾನಲ್ ಒಂದರ ವಿರುದ್ಧ ಕಾನೂನು ಹೋರಾಟ ನಡೆಸಲು ಚಿತ್ರ ತಂಡ ತೀರ್ಮಾನಿಸಿದೆ.

ಅಂದು ”ಅದೇ ಕಣ್ಣು”… ಇಂದು ”ಅದೇ ಮುಖ”….!: ಅದೇ ಮುಖದೊಂದಿಗೆ ಪ್ರೇಕ್ಷಕರಿಗೆ ಲಗ್ಗೆ ಇಡಲು ಸಜ್ಜಾಗಿದ್ದಾರೆ ಸಂದೇಶ

‘ಅದೇ ಮುಖ” ಎಂಬ ಸಿನಿಮಾದ ಟೈಟಲ್. ಗಾಂಧಿನಗರದಲ್ಲಿ ಈ ಚಿತ್ರ ಹೇಗಿರಬಹುದು ಎಂಬ ಕುತೂಹಲ ಗರಿಗೆದರುವಂತೆ ಮಾಡಿದೆ.

ನಟ ಸಲ್ಮಾನ್ ಖಾನ್ ಈ ರೀತಿ ಮಾಡಿದ್ದು ಸತ್ಯವೇ? ಸರಿಯೇ?

ಮುಂಬಯಿ : ಕೊರೊನಾದ ಅಬ್ಬರದ ನಡುವೆ ಬಾಲಿವುಡ್ ನ ಒಂದೊಂದೆ ಮುಖಗಳು ಅನಾವರಣಕ್ಕೆ ಬರುತ್ತಿವೆ. ಯುವ ನಟ ಸುಶಾಂತ್‌ ಸಿಂಗ್‌ ರಜಪೂತ್‌ ನಿಧನದ ನಂತರ ಅನೇಕ ಸತ್ಯಗಳು ಹೊರ ಬರುತ್ತಿವೆ. ಪಕ್ಷಪಾತ, ಗುಂಪುಗಾರಿಕೆ, ಕೀಳು ರಾಜಕೀಯದ ಕುರಿತು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ.