ಬೆಂಗಳೂರು :  ನಟ ಚಿರಂಜೀವಿ ಸರ್ಜಾ ಅವರ 36ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಅವರ ಮಾವ ಹಾಗೂ ನಟ ಅರ್ಜುನ್ ಸರ್ಜಾ ಭಾವನಾತ್ಮಕ ಸಾಲುಗಳನ್ನು ಬರೆದು ಶುಭಾಶಯ ಕೋರಿದ್ದಾರೆ.

ಚಿರಂಜೀವಿ ಅವರ ಹುಟ್ಟು ಹಬ್ಬದ ಅಂಗವಾಗಿ ಸರ್ಜಾ ಅವರಿಗೆ ಸುದೀಪ್, ದರ್ಶನ್ ಸೇರಿದಂತೆ ಹಲವು ಗಣ್ಯರು ಶುಭಾಶಯ ತಿಳಿಸಿದ್ದಾರೆ. ಅರ್ಜುನ್ ಸರ್ಜಾ ಅವರು ಚಿರಂಜೀವಿ ಸತ್ತ ನಂತರದ ನೋವಿನ ಬಗ್ಗೆ ಬರೆದುಕೊಂಡಿದ್ದಾರೆ. 

36 ವರ್ಷಗಳ ಹಿಂದೆ ನೀನು ಹುಟ್ಟಿದಾಗ ಸಂತಸದಿಂದ ಕುಣಿದು ಕುಪ್ಪಳಿಸಿದ್ದೆ. ವಿಧಿಯ ಕ್ರೌರ್ಯವನ್ನು ನಾನು ನಂಬಿರಲಿಲ್ಲ. ಹುಟ್ಟು ಹಬ್ಬದ ದಿನದಂದು ನಾನು ಈ ರೀತಿಯ ಪದಗಳನ್ನು ಬರೆಯುತ್ತೇನೆಂದು ನನ್ನ ಹುಚ್ಚು ಕನಸುಗಳಲ್ಲಿಯೂ ಯೋಚಿಸಿರಲಿಲ್ಲ. ನನ್ನ ಸಂದೇಶದಲ್ಲಿ ಯಾವಾಗಲೂ ನೀನು ಜೊತೆಗಿರುತ್ತೀಯ ಮಗನೆ. ಲವ್ ಯು ಸೋ ಮಚ್ ಮೈ ಬೇಬಿ ಎಂದು ಬರೆದುಕೊಂಡಿದ್ದಾರೆ. ಅವರ ಪೋಸ್ಟ್ ಗೆ ಹಲವು ಅಭಿಮಾನಿಗಳು ಕಮೆಂಟ್ ಮಾಡಿ ಬೇಸರ ವ್ಯಕ್ತಪಡಿಸಿ, ಶುಭಾಶಯ ತಿಳಿಸಿದ್ದಾರೆ.

ಕಿಚ್ಚ ಸುದೀಪ್ ಟ್ವೀಟ್ ಮಾಡಿ, ಅವನನ್ನು ಕಳೆದುಕೊಂಡ, ಅವನನ್ನು ತಿಳಿದಿದ್ದ ಹಾಗೂ ಪ್ರೀತಿಸಿದ್ದ ಎಲ್ಲರಿಂದಲೂ ಅವನು ತಪ್ಪಿಸಿಕೊಂಡಂತಾಗಿದೆ ಎಂದು ಬರೆದುಕೊಂಡಿದ್ದಾರೆ. ನಟ ದರ್ಶನ್,  ಚಿರು ಜೊತೆ ನಾಯಿ ಹಿಡಿದು ನಿಂತಿರುವ ಫೋಟೋ ಪೋಸ್ಟ್ ಮಾಡಿ ಶುಭಾಶಯ ತಿಳಿಸಿದ್ದಾರೆ. 

Leave a Reply

Your email address will not be published. Required fields are marked *

You May Also Like

ನಟ ಜಗ್ಗೇಶ್ ವಿರುದ್ಧ ದೂರು ದಾಖಲಿಸಿದ ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥ ಸಂದೀಪ್

ಬೆಂಗಳೂರು: ಜಗ್ಗೇಶ್ ವಿರುದ್ಧ ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥ ಸಂದೀಪ್ ಅಣಬೇರು ಸೈಬರ್ ಕ್ರೈಂ ಕೇಂದ್ರದಲ್ಲಿ…

ಪುನೀತ್‌ಗೆ ‘ಕರ್ನಾಟಕ ರತ್ನ’- ಶೀಘ್ರದಲ್ಲಿಯೇ ದಿನಾಂಕ ನಿಗದಿ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ನಟ ದಿವಂಗತ ಪುನೀತ್ ರಾಜ್‌ಕುಮಾರ್‌ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಕೊಡುವ ಸಂಬಂಧ ಆದಷ್ಟು…

ಮದುವೆಗೆ ಸಿದ್ಧತೆ ನಡೆಸಿದ ಕಾಜಲ್ ಅಗರ್ವಾಲ್! ಭಾವಿ ಪತಿಯೊಂದಿಗಿನ ಫೋಟೋ ಶೇರ್!

ಹೈದರಾಬಾದ್ : ನಟಿ ಕಾಜಲ್ ಅಗರ್ವಾಲ್ ಅವರು ಸದ್ಯದಲ್ಲಿಯೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ತಮ್ಮ ಕಾಜಲ್ ಅವರು ಇಲ್ಲಿಯವರೆಗೂ ತಮ್ಮ ಭಾವಿ ಪತಿಯನ್ನು ಪರಿಚಯಿಸಿರಲಿಲ್ಲ. ನಟಿ ಇದೀಗ ಅವರ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಒಳ್ಳೆಯ ಅವಕಾಶಗಳು ಸಿಕ್ಕರೆ ಕನ್ನಡದಲ್ಲಿಯೂ ನಟಿಸುವೆ – ಸಂಯುಕ್ತಾ!

ಬೆಂಗಳೂರು : ಲಾಕ್ ಡೌನ್ ಇದ್ದರೂ ಅಭಿಮಾನಿಗಳೊಂದಿಗೆ ತಮ್ಮ ಒಡನಾಟ ಇಟ್ಟುಕೊಂಡಿರುವ ನಟಿ ಸಂಯುಕ್ತಾ ಹೆಗ್ಡೆ…