ಬೆಂಗಳೂರು :  ನಟ ಚಿರಂಜೀವಿ ಸರ್ಜಾ ಅವರ 36ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಅವರ ಮಾವ ಹಾಗೂ ನಟ ಅರ್ಜುನ್ ಸರ್ಜಾ ಭಾವನಾತ್ಮಕ ಸಾಲುಗಳನ್ನು ಬರೆದು ಶುಭಾಶಯ ಕೋರಿದ್ದಾರೆ.

ಚಿರಂಜೀವಿ ಅವರ ಹುಟ್ಟು ಹಬ್ಬದ ಅಂಗವಾಗಿ ಸರ್ಜಾ ಅವರಿಗೆ ಸುದೀಪ್, ದರ್ಶನ್ ಸೇರಿದಂತೆ ಹಲವು ಗಣ್ಯರು ಶುಭಾಶಯ ತಿಳಿಸಿದ್ದಾರೆ. ಅರ್ಜುನ್ ಸರ್ಜಾ ಅವರು ಚಿರಂಜೀವಿ ಸತ್ತ ನಂತರದ ನೋವಿನ ಬಗ್ಗೆ ಬರೆದುಕೊಂಡಿದ್ದಾರೆ. 

36 ವರ್ಷಗಳ ಹಿಂದೆ ನೀನು ಹುಟ್ಟಿದಾಗ ಸಂತಸದಿಂದ ಕುಣಿದು ಕುಪ್ಪಳಿಸಿದ್ದೆ. ವಿಧಿಯ ಕ್ರೌರ್ಯವನ್ನು ನಾನು ನಂಬಿರಲಿಲ್ಲ. ಹುಟ್ಟು ಹಬ್ಬದ ದಿನದಂದು ನಾನು ಈ ರೀತಿಯ ಪದಗಳನ್ನು ಬರೆಯುತ್ತೇನೆಂದು ನನ್ನ ಹುಚ್ಚು ಕನಸುಗಳಲ್ಲಿಯೂ ಯೋಚಿಸಿರಲಿಲ್ಲ. ನನ್ನ ಸಂದೇಶದಲ್ಲಿ ಯಾವಾಗಲೂ ನೀನು ಜೊತೆಗಿರುತ್ತೀಯ ಮಗನೆ. ಲವ್ ಯು ಸೋ ಮಚ್ ಮೈ ಬೇಬಿ ಎಂದು ಬರೆದುಕೊಂಡಿದ್ದಾರೆ. ಅವರ ಪೋಸ್ಟ್ ಗೆ ಹಲವು ಅಭಿಮಾನಿಗಳು ಕಮೆಂಟ್ ಮಾಡಿ ಬೇಸರ ವ್ಯಕ್ತಪಡಿಸಿ, ಶುಭಾಶಯ ತಿಳಿಸಿದ್ದಾರೆ.

ಕಿಚ್ಚ ಸುದೀಪ್ ಟ್ವೀಟ್ ಮಾಡಿ, ಅವನನ್ನು ಕಳೆದುಕೊಂಡ, ಅವನನ್ನು ತಿಳಿದಿದ್ದ ಹಾಗೂ ಪ್ರೀತಿಸಿದ್ದ ಎಲ್ಲರಿಂದಲೂ ಅವನು ತಪ್ಪಿಸಿಕೊಂಡಂತಾಗಿದೆ ಎಂದು ಬರೆದುಕೊಂಡಿದ್ದಾರೆ. ನಟ ದರ್ಶನ್,  ಚಿರು ಜೊತೆ ನಾಯಿ ಹಿಡಿದು ನಿಂತಿರುವ ಫೋಟೋ ಪೋಸ್ಟ್ ಮಾಡಿ ಶುಭಾಶಯ ತಿಳಿಸಿದ್ದಾರೆ. 

Leave a Reply

Your email address will not be published. Required fields are marked *

You May Also Like

ಪಾಕ್ ರೂಪದರ್ಶಿಗೆ ಟ್ರೋಲ್ ಮಾಡುತ್ತಿರುವ ಕಿಡಿಗೇಡಿಗಳು!

ಕರಾಚಿ ವಿಮಾನ ದುರಂತದಲ್ಲಿ ಸಾವನ್ನಪ್ಪಿದ ಪಾಕ್ ರೂಪದರ್ಶಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗುತ್ತಿದೆ.

ಚಿರಂಜೀವಿ ಸರ್ಜಾ ನೆನೆದು ಭಾವನಾತ್ಮಕವಾಗಿ ಟ್ವೀಟ್ ಮಾಡಿದ ಮೇಘನಾ..!

ಬೆಂಗಳೂರು: ಇತ್ತಿಚೆಗಷ್ಟೆ ನಿಧನ ಹೊಂದಿದ ನಟ ಚಿರಂಜೀವಿ ಸರ್ಜಾ ಬಹುಬೇಗ ಮರೆಯುವಂತಹ ನಟನಲ್ಲ. ಅದರಲ್ಲೂ 10…

ಹುಡುಗನಾಗಿ ಬದಲಾದ ಖ್ಯಾತ ನಟಿಯ ಸಿಕ್ಸ್ ಪ್ಯಾಕ್ ಫೋಟೋ ಶೇರ್.

ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಎಲಿಯಟ್, ಬಾಲ್ಯದಲ್ಲಿ ತನ್ನ ದೇಹದಲ್ಲಿನ ಬದಲಾವಣೆ ಗಮನಿಸಿದಾಗ ತುಂಬ ಹಿಂಸೆ ಆಗುತ್ತಿತ್ತು. ಹುಡುಗನ ಹಾಗೆ ವರ್ತಿಸುತ್ತಿದ್ದೆ. ಹಾಲಿವುಡ್ ನಲ್ಲಿ ಖ್ಯಾತಿ ಗಳಿಸುತ್ತಿದ್ದಂತೆ ವೈಯಕ್ತಿಕ ಜೀವನದಲ್ಲಿ ತುಂಬಾ ಅಪ್ ಸೆಟ್ ಆಗುತ್ತಿದ್ದೆ ಎಂದಿದ್ದಾರೆ.

ಅಂಬರೀಷ್ 69ನೇ ಜನ್ಮದಿನ: ರೆಬೆಲ್ ಸ್ಟಾರ್ ನೆನಪು ಹಂಚಿಕೊಂಡ ದರ್ಶನ್-ಸುದೀಪ್

ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಷ್ ಅವರ 69ನೇ ಜನ್ಮದಿನ. ಪರಿಸ್ಥಿತಿ ಚೆನ್ನಾಗಿ ಇದ್ದಿದ್ದರೆ ಅಭಿಮಾನಿಗಳು ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸುತ್ತಿದ್ದರು. ಆದರೆ ಕೊವಿಡ್ ಹಾವಳಿ ಹೆಚ್ಚಿರುವುದರಿಂದ ಸೋಶಿಯಲ್ ಮೀಡಿಯಾ ಮೂಲಕವೇ ಶುಭ ಕೋರಲಾಗುತ್ತಿದೆ. ಅಂಬರೀಷ್ ಜೊತೆ ಆಪ್ತ ಒಡನಾಟ ಹೊಂದಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಕಿಚ್ಚ ಸುದೀಪ್ ಅವರು ಕೂಡ ಸಾಮಾಜಿಕ ಜಾಲತಾಣದ ಮೂಲಕ ರೆಬಲ್ ಸ್ಟಾರ್ ಬರ್ತಡೇಗೆ ವಿಶ್ ಮಾಡಿದ್ದಾರೆ.