ಗದಗ : ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಅವರ ಮೂರ್ತಿ ಪ್ರತಿಷ್ಠಾಪನೆ ವಿಷಯವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ತಾಲೂಕಿನ ಬಳಗಾನೂರಿನಲ್ಲಿ ನಡೆದಿದೆ. 

ಬಳಗಾನೂರ ಗ್ರಾಮದ ಬಸ್ ನಿಲ್ದಾಣದ ಹತ್ತಿರುವ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಎಂದು ಕುರುಬ ಸಮುದಾಯದ ಜನರು ನಿರ್ಧರಿಸಿದ್ದರು. ಆದರೆ, ಸ್ಥಳದಲ್ಲಿ ಜಾಗದಲ್ಲಿ ಕಿತ್ತೂರು ರಾಣಿ ಚನ್ನಮ್ಮನ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಎಂದು ಪಂಚಮ ಸಾಲಿ ಸಮುದಾಯ ಜನರು ನಿರ್ಧರಿಸಿದ್ದರು.

ಸದ್ಯ ಈ ವಿಷಯವಾಗಿಯೇ ಎರಡು ಸಮುದಾಯದ ನಡುವೆ ಜಗಳ ಪ್ರಾರಂಭವಾಗಿದೆ. ರಾತ್ರೋರಾತ್ರಿ ನಿರ್ಮಾಣವಾಗಿದ್ದ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ತೆರವುಗೊಳಿಸಿದ್ದಾರೆ. ಇದರಿಂದ ರಾಯಣ್ಣ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಗುಂಪು ಚದುರಿಸಲು ಮುಂದಾಗಿದ್ದಾರೆ. ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಪೊಲೀಸರು ಗುಂಪು ಚದುರಿಸಲು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಈ ವೇಳೆ ಕೆಲ ಕಿಡಿಗೇಡಿಗಳು ಗದಗ ಎಸಿ ರಾಯಪ್ಪ ಹಾಗೂ ಡಿವೈಎಸ್ಪಿು ಪ್ರಹ್ಲಾದ್ ಅವರ ಎರಡು ವಾಹನಕ್ಕೆ ಕಲ್ಲು ಹೊಡೆದು ಜಖಂ ಗೊಳಿಸಿದ್ದಾರೆ.

ಈ ಕುರಿತು ಎರಡು ಸಮುದಾಯದ ಹಲವರನ್ನು ಬಂಧಿಸಲಾಗಿದೆ. ಸದ್ಯ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಎಲ್ಲ ಘಟನೆಗೆ ಸಚಿವ ಸಿ.ಸಿ. ಪಾಟೀಲ್ ಅವರೇ ಕಾರಣ ಎಂದು ಕುರುಬ ಸಮುದಾಯದವರು ವಾದಿಸುತ್ತಿದ್ದಾರೆ. ಹೀಗಾಗಿ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಗ್ರಾಮೀಣಾಭಿವೃದ್ಧಿ ವಿವಿಯಿಂದ ಸಸಿ ನೆಟ್ಟು, ಸೆಲ್ಫಿ ಹಂಚಿಕೊಳ್ಳುವ ನನ್ನ ಗಿಡ ನನ್ನ ಉಸಿರು ಅಭಿಯಾನ

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಹಾಗೂ ಜಿಲ್ಲಾ ಅರಣ್ಯ ಇಲಾಖೆ ಇವರ ಸಹಯೋಗದೊಂದಿಗೆ ಜೂ.5ರಂದು ವಿಶಿಷ್ಟ ರೀತಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸಿದ್ದರಾಮಯ್ಯ ಬಿಜೆಪಿ ಜೊತೆ ಕೈ ಜೋಡಿಸಿದ್ದಾರೆ – ಪ್ರತಾಪ್ ಸಿಂಹ!

ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಜೊತೆ ಕೈ ಜೋಡಿಸಿರುವ ಗುಮಾನಿ ಇದೆ ಎಂದು ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ.

ಸಂವಾದ ನಡೆಸಿದ ಶಾಸಕ ನಡಹಳ್ಳಿ..! ಅನುದಿನವೂ ಇಷ್ಟಪಟ್ಟು ಓದಿ ಭವಿಷ್ಯ ಕಟ್ಟಿಕೊಳ್ಳಿ ಗುಲಾಬಚಂದ ಜಾಧವ;

ಉತ್ತರಪ್ರಭ ಆಲಮಟ್ಟಿ: ದಿನದ 24 ಗಂಟೆಯಲ್ಲಿ ಎಷ್ಟು ಕಾಲ ಓದ್ತಿರಾ, ಟಿವಿ ನೋಡ್ತಿರಾ, ಹರಟೆ ಹೋಡ್ತಿರಾ,…

ವಿದ್ಯಾರ್ಥಿಗಲಿಗೆ ಈ ವರ್ಷ ಸೈಕಲ್ ಸಿಗೋದು ಡೌಟ್!

ರಾಜ್ಯದ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಆರ್ಥಿಕ ಬಿಕ್ಕಟ್ಟಿನಿಂದಾಗಿ ರಾಜ್ಯ ಸರ್ಕಾರ ಈ ವರ್ಷ ಸೈಕಲ್ ಖರೀದಿಯನ್ನು ಕೈ ಬಿಡಲು ನಿರ್ಧರಿಸಿದೆ ಎನ್ನಲಾಗಿದೆ.