ಲಕ್ಷ್ಮೇಶ್ವರ: ಪದವೀಧರರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ ಗೆಲುವಿಗೆ ಬಿಜೆಪಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು.

ಅವರು ಲಕ್ಷ್ಮೇಶ್ವರ ಪಟ್ಟಣದ ಅಗಡಿ ಇಂಜಿನಿಯರಿಂಗ್ ಕಾಲೇಜನಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಬಿಜೆಪಿ ಸರ್ಕಾರವು ದೇಶವನ್ನು ಕಟ್ಟುವ ಕೆಲಸ ಮಾಡುತ್ತಿದೆ. ದೇಶವನ್ನು ಮುನ್ನಡೆಸಲು ಬಿಜೆಪಿ ಪಕ್ಷವು ಬಿಟ್ಟು ಬೇರೆ ಯಾವ ಪಕ್ಷವು ಕೆಲಸಮಾಡಲಾರವು. ನರೇಂದ್ರ ಮೋದಿ ಸರ್ಕಾರವು ದೇಶದ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳ ತರುವಲ್ಲಿ ಯಶಸ್ವಿಯಾಗಿದೆ. ಎಲ್ಲಾ ಚುನಾವಣೆಯಲ್ಲಿ ನಾಡಿನ ಜನತೆ ನಮಗೆ ಆರ್ಶಿರ್ವಾದ ಮಾಡಿದ್ದಿರಿ. ವಿಧಾನ ಪರಿಷತ್ ಚುನಾವಣೆಯಲ್ಲಿ ಈ ಬಾರಿಯು ಸಂಕನೂರ ಗೆಲುವಿಗೆ ಸಹಕರಿಸುವಂತೆ ಮನವಿ ಮಾಡಿದರು.

ಎರಡನೇ ಬಾರಿ ಚುನಾವಣೆ ಗೆ ಸ್ಪರ್ದಿಸುತ್ತಿರುವ ಸಂಕನೂರ ಅವರು ಹಿಂದಿನ ಚುನಾವಣೆಯಲ್ಲಿ 16000 ಮತಗಳಿಂದ ಗೆದ್ದಿದ್ದರು. ಈ ಚುನಾವಣೆಯಲ್ಲಿ ಅದಕ್ಕಿಂತ ಹೆಚ್ಚಿನ ಮತದಿಂದ ಗೆಲ್ಲುವ ವಿಶ್ವಾಸವಿದೆ. ಬಿಜೆಪಿ‌ ಸರ್ಕಾರವು ದೇಶದ ಸೈನಿಕರಿಗೆ ಬಲತುಂಬುವ ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದರು.

ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಅವುಗಳನ್ನು ಟೀಕೆ ಮಾಡುತ್ತ ಜನರನ್ನು ದಿಕ್ಕುತಪ್ಪಿಸುವ ಕೆಲಸಮಾಡುತ್ತಿದೆ. ಎಪಿಎಂಸಿ ಕಾಯ್ದೆಯನ್ನು ಸ್ವೀಕರಿಸದ ವಿರೋಧ ಪಕ್ಷಗಳು ರೈತರನ್ನು ಅಧೋಗತಿಗೆ ತಳ್ಳುವ ಕೆಲಸ ಮಾಡುತ್ತಿವೆ. ಆದ್ದರಿಂದ ನಾಡಿನ ಜನತೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಮಾತಿಗೆ ಮರಳಾಗದೆ ಅವರನ್ನು ತಿರಸ್ಕರಿಸಿ ಬಿಜೆಪಿ ಸರ್ಕಾರವನ್ನು ಬೆಂಬಲಿಸಬೇಕು ಎಂದರು.

ಸಂದರ್ಭದಲ್ಲಿ ಶಾಸಕ ರಾಮಣ್ಣ ಲಮಾಣಿ, ಪ್ರದೀಪ್ ಶೆಟ್ಟರ್, ಅಭ್ಯರ್ಥಿ ಎಸ್.ವಿ.ಸಂಕನೂರ, ಮಾಂತೇಶ ಟೆಂಗಿನಕಾಯಿ, ನಿಂಗರಾಜ ಪಾಟೀಲ್, ವಿಜಯಕುಮಾರ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 7330 ಕೊರೊನಾ ಪಾಸಿಟಿವ್!: ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿಂದು 7330 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಒಟ್ಟು 271876 ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ನಭಾಪುರ ತಾಂಡಾದಲ್ಲಿ ಆಕಸ್ಮಿಕ ಬೆಂಕಿಗೆ 5 ಎಕರೆ ಕಬ್ಬು ಸುಟ್ಟು ಭಸ್ಮ

ಉತ್ತರಪ್ರಭಗದಗ: ತಾಲೂಕಿನ ನಭಾಪೂರ ತಾಂಡಾದ ರೈತ ರುಪಣ್ಣ ಸೋಮಪ್ಪ ಲಮಾಣಿಯವರ ಹೋಲದಲ್ಲೊ ಹೊಲದಲ್ಲಿ ಬೆಳೆದಿದ್ದ ಕಬ್ಬು…

ಸೋಕ್ ಪಿಟ್ ಕಾಮಗಾರಿ ಶೀಘ್ರ ಯಶಸ್ವಿಗೊಳಿಸಿ

ಸೋಕ್ ಪಿಟ್ ಮತ್ತು ಪೌಷ್ಟಿಕ ತೋಟ ನಿರ್ಮಾಣ ಗುರಿಯನ್ನು ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ನರೇಗಾ ಸಿಬ್ಬಂದಿ ಶೀಘ್ರದಲ್ಲೇ ತಲುಪಲು ಪ್ರಯತ್ನಿಸಬೇಕು ಎಂದು ಜಿಪಂ ಉಪ ಕಾರ್ಯದರ್ಶಿ ಬಿ.ಕಲ್ಲೇಶ ಅವರು ಹೇಳಿದರು.

ಇಂಧಿರಾಗಾಂಧಿ ಭಾವಚಿತ್ರಕ್ಕೆ ಮಸಿ: ಆರೋಪಿ ಬಂಧನ

ದಾವಣಗೆರೆ: ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನ…